ʼKantara Chapter 1ʼನಲ್ಲಿ ನನ್ನನ್ನು ಸೇರಿಸಿಕೊಳ್ಳಿ..ರಿಷಬ್‌ ಶೆಟ್ಟಿಗೆ ಖ್ಯಾತ ನಟಿಯ ಮನವಿ


Team Udayavani, Dec 13, 2023, 11:35 AM IST

tdy-1

ಬೆಂಗಳೂರು: ರಿಷಬ್‌ ಶೆಟ್ಟಿ ಅವರ ʼಕಾಂತಾರ ಪ್ರೀಕ್ವೆಲ್‌ʼ ಇತ್ತೀಚೆಗೆ ಫಸ್ಟ್‌ ಲುಕ್‌ ರಿಲೀಸ್‌ ಮಾಡಿ ಸುದ್ದಿಯಲ್ಲಿದೆ. ಸದ್ಯ ಸಿನಿಮಾಕ್ಕಾಗಿ ಅಡಿಷನ್‌ ನಡೆಯಲಿದ್ದು, ಕಲಾವಿದರ ಆಯ್ಕೆಗಾಗಿ ಚಿತ್ರತಂಡ ಎದುರು ನೋಡುತ್ತಿದೆ.

ʼಕಾಂತಾರʼ ಚಿತ್ರದಲ್ಲಿ ನಟಿಸಲು ಕಲಾವಿದರು ಬೇಕಾಗಿದ್ದಾರೆ ಎಂದು ಚಿತ್ರತಂಡ ಪ್ರಕಟಣೆಯಲ್ಲಿ ಹೇಳಿದೆ. ಸಿನಿಮಾದಲ್ಲಿ ನಟಿಸಲು 30 ರಿಂದ 60 ರ ವಯಸ್ಸಿನ ಪುರುಷರು ಬೇಕಾಗಿದ್ದಾರೆ. ಇನ್ನು 18 ರಿಂದ 60ರ ವಯಸ್ಸಿನ ಮಹಿಳೆಯರು ಬೇಕಾಗಿದ್ದಾರೆ ಎಂದು ರಿಷಬ್‌ ಶೆಟ್ಟಿ ಪೋಸ್ಟ್‌ ನಲ್ಲಿ ಹೇಳಿದ್ದಾರೆ. ನೋಂದಣಿಗಾಗಿ Kantara.film ಲಿಂಕ್‌ ಒತ್ತಿ ತಮ್ಮ ಪ್ರತಿಭೆಯನ್ನು ತೋರಿಸಬಹುದು. ರೀಲ್ಸ್‌ ಮತ್ತು ಅವುಗಳನ್ನೇ ಹೋಲುವ ಇತರೆ ವಿಷಯಗಳನ್ನು  ಸ್ವೀಕರಿಸುವುದಿಲ್ಲ ಎಂದು ಚಿತ್ರತಂಡ ಹೇಳಿದೆ. ಡಿ.14 ರವರೆಗೆ ಲಿಂಕ್ ಚಾಲ್ತಿಯಲ್ಲಿರುತ್ತದೆ ಎಂದು ಚಿತ್ರತಂಡ ಹೇಳಿದೆ.

ಸದ್ಯ ಪೋಸ್ಟ್‌ ನೋಡಿ ಖ್ಯಾತ ಟಾಲಿವುಡ್ ನಟಿಯೊಬ್ಬರು ರಿಷಬ್‌ ಶೆಟ್ಟಿ ಬಳಿ ತಮ್ಮನ್ನು ʼಕಾಂತಾರʼ ಸಿನಿಮಾದಲ್ಲಿ ಸೇರಿಸಿಕೊಳ್ಳಿ ಎಂದು ಮನವಿಯನ್ನು ಮಾಡಿದ್ದಾರೆ.

ʼಆರ್‌ ಎಕ್ಸ್‌ 100ʼ ಮೂಲಕ ಗಮನ ಸೆಳೆದ  ನಟಿ ಪಾಯಲ್ ರಜಪೂತ್ ಇತ್ತೀಚೆಗೆ ತೆರೆಕಂಡ ‘ಮಂಗಳವಾರಂ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ಮೆಚ್ಚುಗೆ ಗಳಿಸಿದ್ದಾರೆ. ಇದರಿಂದ ಕೆಲ ಅಭಿಮಾನಿಗಳು ʼಕಾಂತಾರ -1ʼ ಸಿನಿಮಾದ ಅಡಿಷನ್‌ ವಿಚಾರ ತಿಳಿಸಿ ಪಾಯಲ್‌ ಅವರ ಹೆಸರನ್ನು ಸೋಶಿಯಲ್‌ ಮೀಡಿಯಾದಲ್ಲಿ ಮೆನ್ಷನ್‌ ಮಾಡಿದ್ದಾರೆ.

ನಟಿ ಪಾಯಲ್‌ ರಜಪೂತ್‌ ಈ ಬಗ್ಗೆ ಟ್ವೀಟ್‌ ಮಾಡಿದ್ದು, ʼಕಾಂತಾರ-1ʼ ನ ಭಾಗವಾಗಲು ತಾನು ಆಸಕ್ತಿ ಹೊಂದಿದ್ದೇನೆ ಎಂದು ಹೇಳಿದ್ದಾರೆ.

“ರಿಷಬ್‌ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ʼಕಾಂತಾರ ಅಧ್ಯಾಯ -1ʼರ ಅಡಿಷನ್‌ ಇರುವುದು ನನಗೆ ಗೊತ್ತಾಗಿದೆ. ಈ ಅದ್ಭುತ ಸಿನಿಮಾದ ಭಾಗವಾಗಲು ನಾನು ಆಸಕ್ತಿ ಹೊಂದಿದ್ದೇನೆ. ಈ ಸಿನಿಮಾಕ್ಕೆ ಕೊಡುಗೆ ನೀಡಲು ಉತ್ಸುಕಳಾಗಿದ್ದೇನೆ. ಇತ್ತೀಚೆಗೆ ಬಂದ ನನ್ನ ʼ’ಮಂಗಳವಾರಂ’ʼ ಸಿನಿಮಾ ಮೆಚ್ಚುಗೆ ಪಡೆದುಕೊಂಡಿದೆ. ನೀವು ಸಾಧ್ಯವಾದರೆ ನಿಮ್ಮ ಸಮಯವನ್ನು ಮೀಸಲಿಟ್ಟು ಸಿನಿಮಾವನ್ನು ನೋಡಿ. ಈ ಪ್ರಾಜೆಕ್ಟ್ ಆಡಿಷನ್ ಪ್ರಕ್ರಿಯೆಯ ಕುರಿತು ದಯವಿಟ್ಟು ಸಲಹೆ ನೀಡಿ. ನನ್ನ ಹೆಸರನ್ನು ಮೆನ್ಷನ್‌ ಮಾಡಿದ್ದಕ್ಕಾಗಿ ಅಭಿಮಾನಿಗಳಿಗೆ ಧನ್ಯವಾದ” ಎಂದು ಪಾಯಲ್‌ ಟ್ವೀಟ್‌ ಮಾಡಿದ್ದಾರೆ.

ಸದ್ಯ ಈ ಟ್ವೀಟ್‌ ಗೆ ರಿಷಬ್‌ ಶೆಟ್ಟಿಯಿಂದ ಯಾವ ಪ್ರತಿಕ್ರಿಯೆ ಬರುತ್ತದೆನ್ನುವುದು ಕಾದುನೋಡಬೇಕಿದೆ.

ಅಂದಹಾಗೆ ʼಕಾಂತಾರʼ ಸಿನಿಮಾದ ಚಿತ್ರೀಕರಣ ಶೀಘ್ರದಲ್ಲಿ ಶುರುವಾಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Dhoom 4: ಬಾಲಿವುಡ್ ʼಧೂಮ್-4‌ʼ‌ ನಲ್ಲಿ ಸೌತ್‌ ಸ್ಟಾರ್‌ ಸೂರ್ಯ ವಿಲನ್?‌

Tumbbad 2: ಪ್ರಳಯ್ ಆಯೇಗಾ..‌ ಹಾರರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Tumbbad 2: ಪ್ರಳಯ್ ಆಯೇಗಾ..‌ ಹಾರಾರ್‌ ಥ್ರಿಲ್ಲರ್‌ ‘ತುಂಬಾಡ್ʼ ಸೀಕ್ವೆಲ್‌ ಅನೌನ್ಸ್

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

10

Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

Anil Mehta: ಮಲೈಕಾ ಆರೋರಾ ತಂದೆ ಆ*ತ್ಮಹ*ತ್ಯೆ; ಮರಣೋತ್ತರ ಪರೀಕ್ಷಾ ವರದಿಯಲ್ಲಿ ಏನಿದೆ?

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.