![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Nov 15, 2023, 9:00 AM IST
ಮುಂಬಯಿ: ವಿಶ್ವಕಪ್ ಕ್ರಿಕೆಟ್ ಹಣಾಹಣಿಯ ಮಹತ್ವದ ಮೊದಲ ಸೆಮಿಫೈನಲ್ ಗೆ ಮುಂಬಯಿಯ ವಾಂಖೆಡೆ ಸ್ಟೇಡಿಯಂ ಸಜ್ಜಾಗಿದೆ. ಇತ್ತ ಟಿವಿ ಮುಂದೆ ಕೂತು ಲಕ್ಷಾಂತರ ಫ್ಯಾನ್ಸ್ ಗಳು ಭಾರತವನ್ನು ಚಿಯರ್ ಅಪ್ ಮಾಡಲು ರೆಡಿಯಾಗಿದ್ದಾರೆ.
ಭಾರತ – ನ್ಯೂಜಿಲೆಂಡ್ ಸೆಮಿಫೈನಲ್ ಪಂದ್ಯವನ್ನು ವೀಕ್ಷಿಸಲು ಸೂಪರ್ ಸ್ಟಾರ್ ರಜಿನಿಕಾಂತ್ ಅವರು ತಮ್ಮ ಪತ್ನಿಯೊಂದಿಗೆ ಮುಂಬಯಿ ತಲುಪಿದ್ದಾರೆ. ಅವರು ಕ್ರಿಕೆಟ್ ನೋಡಲು ಏರ್ ಪೋರ್ಟ್ ಬಂದಿಳಿದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸೆಪ್ಟೆಂಬರ್ ನಲ್ಲಿ ವಿಶ್ವಕಪ್ ಕ್ರಿಕೆಟ್ ವೀಕ್ಷಣೆಗೆ ಬಿಸಿಸಿಐ ಅಧ್ಯಕ್ಷ ಜಯ್ ಶಾ ಅವರು ರಜಿನಿಕಾಂತ್ ಅವರನ್ನು ಭೇಟಿ ಮಾಡಿ ಗೋಲ್ಡನ್ ಟಿಕೆಟ್ ನೀಡಿದ್ದರು. ರಜಿನಿಕಾಂತ್, ಅಮಿತಾಬ್ ಬಚ್ಚನ್ ಮತ್ತು ಸಚಿನ್ ತೆಂಡೂಲ್ಕರ್ ಅವರಿಗೆ ಗೋಲ್ಡನ್ ಟಿಕೆಟ್ ನೀಡಿದ್ದರು.
ಅದರಂತೆ ʼತಲೈವಾʼ ಭಾರತ – ನ್ಯೂಜಿಲೆಂಡ್ ನಡುವಿನ ಮೊದಲ ಸೆಮಿಫೈನಲ್ ಪಂದ್ಯ ವೀಕ್ಷಣೆಗೆ ತನ್ನ ಪತ್ನಿ ಲತಾ ಅವರೊಂದಿಗೆ ಬುಧವಾರ(ನ.15 ರಂದು) ಮುಂಬಯಿಗೆ ಬಂದು ಇಳಿದಿದ್ದಾರೆ.
ಸೂಪರ್ ಸ್ಟಾರ್ ಮುಂಬಯಿಗೆ ಬಂದಿಳಿದ ಫೋಟೋಗಳು ವೈರಲ್ ಆಗಿದೆ.
ʼಜೈಲರ್ʼ ಬಳಿಕ ಸೂಪರ್ ಸ್ಟಾರ್ ರಜಿನಿಕಾಂತ್ ಟಿಜೆ ಜ್ಞಾನವೇಲ್ ಅವರ ‘ತಲೈವರ್ 170’ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಫಹಾದ್ ಫಾಸಿಲ್, ಅಮಿತಾಬ್ ಬಚ್ಚನ್, ರಾಣಾ ದಗ್ಗುಬಾಟಿ, ಮಂಜು ವಾರಿಯರ್, ದುಶಾರಾ ವಿಜಯನ್ ಮತ್ತು ರಿತಿಕಾ ಸಿಂಗ್ ಕಾಣಿಸಿಕೊಳ್ಳಲಿದ್ದಾರೆ.
ಮಗಳ ‘ಲಾಲ್ ಸಲಾಂ’ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಅವರು ನಟಿಸಿದ್ದಾರೆ. ‘ತಲೈವರ್ 170’ ಮುಗಿಸಿದ ನಂತರ ಅವರು ಲೋಕೇಶ್ ಕನಕರಾಜ್ ಅವರ ‘ತಲೈವರ್ 171’ ಚಿತ್ರೀಕರಣವನ್ನು ಪ್ರಾರಂಭಿಸಲಿದ್ದಾರೆ.
#WATCH | Tamil Nadu: Actor Rajinikanth leaves from Chennai airport to witness the World Cup semi-finals scheduled to be played at Wankhede Stadium in Mumbai.
“I am going to see the match..,” says Actor Rajinikanth pic.twitter.com/yWg1WpRHXX
— ANI (@ANI) November 14, 2023
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.