ತಿಂಗಳು ಕಳೆದರೂ ವೆಂಟಿಲೇಟರ್ ನಲ್ಲೇ ಇರುವ ರಾಜು ಶ್ರೀವಾತ್ಸವ
Team Udayavani, Sep 16, 2022, 4:23 PM IST
ನವದೆಹಲಿ: ಜನಪ್ರಿಯ ಹಾಸ್ಯನಟ ರಾಜು ಶ್ರೀವಾಸ್ತವ ಅವರು ಹೃದಯಾಘಾತಕ್ಕೆ ಗುರಿಯಾಗಿ ಆಸ್ಪತ್ರೆಗೆ ದಾಖಲಾಗಿ ಒಂದು ತಿಂಗಳು ಕಳೆದರೂ ವೆಂಟಿಲೇಟರ್ನಲ್ಲೇ ಮುಂದುವರಿದಿದ್ದಾರೆ.
ರಾಜು ಶ್ರೀವಾಸ್ತವ ಅವರ ಸಹೋದರ ದೀಪೂ ಶ್ರೀವಾಸ್ತವ ಶುಕ್ರವಾರ ಸಹೋದರನ ಆರೋಗ್ಯದ ಕುರಿತು ಹೇಳಿಕೆ ನೀಡಿದ್ದು, ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲೇ ಶ್ರೀವಾಸ್ತವ ಅವರ ಚಿಕಿತ್ಸೆಯನ್ನು ಮುಂದುವರಿಸಲು ಕುಟುಂಬವು ಬಯಸುತ್ತದೆ. ನಾವು ಬೇರೆ ಯಾವುದೇ ಆಸ್ಪತ್ರೆಗೆ ಸ್ಥಳಾಂತರಿಸುವುದಿಲ್ಲ, ನಮಗೆ ಇಲ್ಲಿನ ವೈದ್ಯರ ಮೇಲೆ ನಂಬಿಕೆ ಇದೆ ಎಂದು ಹೇಳಿದರು.
ಇದನ್ನೂ ಓದಿ: ಪ್ರತಿನಿತ್ಯ ವಿದ್ಯಾರ್ಥಿಗಳ ಜೊತೆ ತರಗತಿಯಲ್ಲಿ ಕುಳಿತು ಪಾಠ ಕೇಳುವ ಸಿಂಗಳೀಕ: ವಿಡಿಯೋ ವೈರಲ್
ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಆದರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಅವರು ಶೀಘ್ರದಲ್ಲೇ ಗುಣಮುಖರಾಗುತ್ತಾರೆ. ಅವರು ಸ್ಥಿರವಾಗಿದ್ದಾರೆ ಮತ್ತು ವೆಂಟಿಲೇಟರ್ನಲ್ಲಿದ್ದಾರೆ. 35 ದಿನಗಳಾಗಿವೆ, ಆದರೆ ವೈದ್ಯರು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ನಿಮ್ಮೆಲ್ಲರ ಪ್ರಾರ್ಥನೆಗಳು ನಮಗೆ ಬೇಕು” ಎಂದು ದೀಪೂ ಪಿಟಿಐಗೆ ತಿಳಿಸಿದರು.
ಆಗಸ್ಟ್ 10 ರಂದು ಆಸ್ಪತ್ರೆಗೆ ದಾಖಲಾಗಿದ್ದರು, ಅದೇ ದಿನ ಆಂಜಿಯೋಪ್ಲ್ಯಾಸ್ಟಿಗೆ ಒಳಗಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.