Ramayan; ನಿತೇಶ್ ತಿವಾರಿ ಚಿತ್ರದಿಂದ ಆಲಿಯಾ ಔಟ್: ಸೀತೆ ಪಾತ್ರದಲ್ಲಿ ಯಾರು?

ರಾವಣನ ಪಾತ್ರದಲ್ಲಿ ಯಶ್ ನಟಿಸುತ್ತಾರೆಯೇ?

Team Udayavani, Aug 24, 2023, 7:38 PM IST

1-w-wqewq

ಮುಂಬಯಿ: ಬಾಲಿವುಡ್‌ ಮತ್ತೊಂದು ಬಹುಕೋಟಿ ನಿರ್ಮಾಣ ವೆಚ್ಚದ ಸಿನಿಮಾಕ್ಕೆ ತಯಾರಾಗಿದ್ದು, ಸೆಟ್ಟೇರುವ ಮುನ್ನವೇ ನಿತೇಶ್ ತಿವಾರಿ ಅವರ ಪೌರಾಣಿಕ ಕಥಾ ಹಂದರದ ಸಿನಿಮಾ ದೊಡ್ಡಮಟ್ಟದಲ್ಲಿ ಸದ್ದು ಮಾಡುತ್ತಿದೆ.

ಬಾಲಿವುಡ್‌ ಈ ವರ್ಷ ಪ್ರಭಾಸ್‌ , ಸೈಫ್ ಅಲಿಖಾನ್ ನಟಿಸಿದ್ದ ʼಆದಿಪುರುಷ್‌ʼ ಸಿನಿಮಾ ತೆರೆ ಕಂಡಿತ್ತು. ʼರಾಮಯಣʼ ಕುರಿತಾದ ಬಹುಕೋಟಿ ನಿರ್ಮಾಣದ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ ಭಾರೀ ನಿರಾಶೆ ಮೂಡಿಸಿತ್ತು ಮಾತ್ರವಲ್ಲದೆ ಋಣಾತ್ಮಕ ಪ್ರತಿಕ್ರಿಯೆಗಳು ವ್ಯಕ್ತವಾಗಿ ಟೀಕೆಗೆ ಆಹಾರವಾಗಿತ್ತು. ಈ ಕಾರಣದಿಂದ ಈಗ ನಿತೇಶ್‌ ತಿವಾರಿ ಅವರ ʼರಾಮಾಯಣʼ ಎಂಬ ಟೈಟಲ್ ನ ಸಿನಿಮಾದ ಮೇಲೆ ಅತೀ ಹೆಚ್ಚು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ಸಿನಿಮಾ ವೈಭವೋಪೇತವಾಗಿ ಕಾಣಿಸಿಕೊಳ್ಳುವ ನಿಟ್ಟಿನಲ್ಲಿ ಸೆಟ್ ವಿನ್ಯಾಸಗಳು, ವಿಎಫ್‌ ಎಕ್ಸ್, ನಿರೂಪಣೆ ಸೇರಿದಂತೆ ಇತರ ಕೆಲಸಗಳಿಗೆ ಸಾಕಷ್ಟು ತಯಾರಿಯ ಅಗತ್ಯವಿದೆ. ಈ ಕಾರಣದಿಂದ ಸಿನಿಮಾ ತಂಡ ನಿಧಾನವಾಗಿಯೇ ತಯಾರಿಯಲ್ಲಿ ನಿರತವಾಗಿದೆ.

ರಣ್‌ ಬೀರ್‌ ಕಪೂರ್‌ ಅವರು ರಾಮನಾಗಿ, ರಾಕಿಂಗ್ ಸ್ಟಾರ್ ಯಶ್‌ ಅವರು ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಪ್ರತಿಭಾ ಸಂಪನ್ನ ಬಹು ತಾರಾಗಣ ಸಿನಿಮಾದಲ್ಲಿ ಇರಲಿದೆ ಎನ್ನಲಾಗಿತ್ತು. ಆದರೆ ಇದೀಗ ಸೀತೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾದ ಆಲಿಯಾ ಭಟ್‌ ಸಿನಿಮಾದಿಂದ ಹೊರ ಬಂದಿದ್ದಾರೆ ಎನ್ನಲಾಗಿದೆ. ಸಾಯಿ ಪಲ್ಲವಿ ಅವರು ಆಲಿಯಾ ಅವರ ಬದಲಿಗೆ ಪಾತ್ರ ನಿರ್ವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಯಶ್ ಅವರು ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಹಲವರು ಅಭಿಪ್ರಾಯ ಹೊರ ಹಾಕಿದ್ದು, ಅವರು ಬಾಲಿವುಡ್ ಚಿತ್ರದಲ್ಲೂ ನಟಿಸುವುದಿಲ್ಲ ಎನ್ನಲಾಗಿದೆ. ಆದರೆ ಯಶ್ ಆಗಲಿ ರಾಮಾಯಣದ ನಿರ್ಮಾಪಕರಾಗಲಿ ಯಾವುದನ್ನೂ ನಿರಾಕರಿಸಿಲ್ಲ ಅಥವಾ ಖಚಿತಪಡಿಸಿಲ್ಲ.

ಯಶ್ ಅವರು ರಾಷ್ಟ್ರೀಯ ಪ್ರಶಸ್ತಿ ವಿಜೇತ ನಿರ್ದೇಶಕಿ ಗೀತು ಮೋಹನ್‌ದಾಸ್‌ ಅವರ ಬಿಗ್ ಬಜೆಟ್ ಆಕ್ಷನ್ ಥ್ರಿಲ್ಲರ್‌ ನಲ್ಲಿ ನಟಿಸಲು ಬದ್ಧರಾಗಿದ್ದಾರೆ, ಆದ್ದರಿಂದ ರಾಮಾಯಣದಲ್ಲಿ ಅವರ ಪಾತ್ರ ಅವರು ಆದ್ಯತೆ ನೀಡುವುದರ ಮೇಲೆ ಅವಲಂಬಿತವಾಗಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

1

ವರ್ಷದ ಮೊದಲಾರ್ಧದಲ್ಲಿ 1081ಕೋಟಿ ರೂ.ಗಳಿಕೆ ಕಂಡ ಬಾಲಿವುಡ್: ಸೋತವರೆಷ್ಟು,ಗೆದ್ದವರೆಷ್ಟು?

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.