“Hansika Motwani ಕಾಲನ್ನು ಮುಟ್ಟಲು..” ವೇದಿಕೆಯಲ್ಲೇ ವಿವಾದಾತ್ಮಕವಾಗಿ ಮಾತನಾಡಿದ ನಟ


Team Udayavani, Jul 4, 2023, 5:49 PM IST

TDY-19

ಚೆನ್ನೈ: ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ ಮದುವೆ ಬಳಿಕ ಮತ್ತೆ ಬಣ್ಣದ ಲೋಕದಲ್ಲಿ ಬ್ಯುಸಿಯಾಗಿದ್ದಾರೆ. ʼಪಾರ್ಟ್ನರ್ʼ ಸಿನಿಮಾದ ಪ್ರಚಾರದಲ್ಲಿ ನಿರತರಾಗಿರುವ ಅವರು ಇತ್ತೀಚೆಗೆ ಸಹನಟ ಆಡಿದ ಮಾತಿನಿಂದ ಮುನಿಸಿಕೊಂಡಿರುವುದು ಟಾಕ್‌ ಆಫ್‌ ಟೌನ್‌ ಆಗಿದೆ.

ಆದಿ ಪಿನಿಸೆಟ್ಟಿ ಹಾಗೂ ಹನ್ಸಿಕಾ ಅಭಿನಯಯದ ʼಪಾರ್ಟ್ನರ್ʼ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಸಿನಿಮಾದಲ್ಲಿ ರೋಬೋ ಶಂಕರ್ ಅವರು ನಟಿಸಿದ್ದಾರೆ. ಚೆನ್ನೈನಲ್ಲಿ ನಡೆದ ಸಿನಿಮಾ ತಂಡದ ಕಾರ್ಯಕ್ರಮದಲ್ಲಿ ರೋಬೋ ಶಂಕರ್ ಅವರು, ಸಿನಿಮಾದ ದೃಶ್ಯವೊಂದರ ಅನುಭವದ ಬಗ್ಗೆ ಮಾತನಾಡಿರುವುದು ನಟಿ ಹನ್ಸಿಕಾ ಅವರ ಮುನಿಸಿಗೆ ಕಾರಣವಾಗಿದೆ.

“ಸಿನಿಮಾದಲ್ಲಿ ನಟಿ ಹನ್ಸಿಕಾ ಅವರ ಕಾಲುಗಳನ್ನು ಮುಟ್ಟುವ ದೃಶ್ಯವೊಂದಿತ್ತು. ಆದರೆ ಅವರು ಆ ದೃಶ್ಯವನ್ನು ಮಾಡಲು ನಿರಾಕರಿಸಿದರು. ಅವರು ಕಾಲು ಹಾಗೂ ಬೆರಳನ್ನು ಮುಟ್ಟಲು ಅವಕಾಶ ನೀಡಲಿಲ್ಲ. ಆದರೆ ಅದೇ ದೃಶ್ಯವನ್ನು ನಾಯಕ ನಟ ಆದಿ ಅವರಿಗೆ ಮಾಡಲು ನಟಿ ಅವಕಾಶ ಮಾಡಿಕೊಟ್ಟಿದ್ದಾರೆ. ಇದು ನಾಯಕನಾಗಿರುವ ಲಾಭ” ಎಂದು ಅವರು ಹೇಳಿದ್ದಾರೆ.

ಈ ವೇಳೆ  ವೇದಿಕೆಯಲ್ಲಿ ನಾಯಕಿ ಹನ್ಸಿಕಾ ಅವರು ಕೂಡ ಇದ್ದರು. ಕೂಡಲೇ ರೋಬೋ ಶಂಕರ್ ನನ್ನ ಮಾತನ್ನು ತಮಾಷೆಯಾಗಿ ತೆಗೆದುಕೊಳ್ಳಿ ಎಂದು ಹೇಳಿದ್ದಾರೆ. ಆದರೆ ವೇದಿಕೆಯಲ್ಲಿದ್ದ ಹನ್ಸಿಕಾ ಅವರು ಇದರಿಂದ ಅಸಮಾಧಾನಗೊಂಡಿದ್ದಾರೆ.

ನಟಿಯ ಮೇಲಿನ ರೋಬೋ ಶಂಕರ್ ಅವರ ಹೇಳಿಕೆಗೆ ಹಲವರು ಅವರನ್ನು ಟೀಕಿಸಿದ್ದಾರೆ. ಸಮಾರಂಭದಲ್ಲಿದ್ದ ಪತ್ರಕರ್ತರೊಬ್ಬರು ನೀವು ನಿಮ್ಮ ಮಾತಿನ ಗಡಿಯನ್ನು ದಾಟಿದ್ದೀರಿ ಎಂದಿದ್ದಾರೆ. ನೆಟ್ಟಿಗರು ಕೂಡ ರೋಬೋ ಶಂಕರ್ ಅವರ ಮಾತಿಗೆ ಗರಂ ಆಗಿದ್ದಾರೆ.

ಇದಾದ ಬಳಿಕ ʼಪಾರ್ಟ್ನರ್ʼ ಚಿತ್ರತಂಡ ನಟಿಗೆ ರೋಬೋ ಶಂಕರ್ ಪರವಾಗಿ ಹನ್ಸಿಕಾಗೆ ಕ್ಷಮೆಯಾಚಿಸಿದೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

ಆದಿ ಪಿನಿಸೆಟ್ಟಿ, ಹಂಸಿಕಾ ಮೋಟ್ವಾನಿ, ಯೋಗಿ ಬಾಬು, ಪಾಲಕ್ ಲಾಲ್ವಾನಿ, ಪಾಂಡ್ಯರಾಜನ್, ರೋಬೋ ಶಂಕರ್, ಜಾನ್ ವಿಜಯ್, ರವಿ ಮರಿಯಾ, ಟೈಗರ್ ತಂಗದುರೈ ಮತ್ತು ಇತರರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

 

ಟಾಪ್ ನ್ಯೂಸ್

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.