![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 25, 2023, 10:20 AM IST
ಮುಂಬಯಿ: ಎಸ್ ಎಸ್ ರಾಜಮೌಳಿ ಅವರ ʼಆರ್ ಆರ್ ಆರ್ʼ ಆಸ್ಕರ್ ಗೆದ್ದು ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದೆ. ಬೆಸ್ಟ್ ಒರಿಜಿನಲ್ ಹಾಡು ವಿಭಾಗದಲ್ಲಿ ʼನಾಟು ನಾಟುʼ ಆಸ್ಕರ್ ಪಡೆದುಕೊಂಡಿದ್ದು ಗೊತ್ತೇ ಇದೆ.
95ನೇ ಅಕಾಡೆಮಿ ವೇದಿಕೆಯಲ್ಲಿ ʼನಾಟು ನಾಟುʼ ಪ್ರದರ್ಶನಗೊಂಡಿತ್ತು. ʼಆರ್ ಆರ್ ಆರ್ʼ ಹತ್ತಾರು ದಾಖಲೆಗಳನ್ನು ಬರೆದಿದೆ. ದೇಶ-ವಿದೇಶದಲ್ಲಿ ʼನಾಟು ನಾಟುʼ ಹಾಡು ಮೋಡಿ ಮಾಡಿದೆ. ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶನದ ಹಾಡನ್ನು ಚಂದ್ರಬೋಸ್ ಅವರು ಬರೆದಿದ್ದಾರೆ.
ʼನಾಟು ನಾಟುʼ ಹಾಡಿಗೆ ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್ಸ್, ಗೋಲ್ಡನ್ ಗ್ಲೋಬ್, ಹಾಲಿವುಡ್ ಮ್ಯೂಸಿಕ್ ಇನ್ ಮಿಡಿಯಾ ಅವಾರ್ಡ್ಸ್ ಸೇರಿದಂತೆ ಹಲವಾರು ಪ್ರಶಸ್ತಿಗಳು ಕೂಡ ಲಭಿಸಿದೆ.
ಇದನ್ನೂ ಓದಿ: ಕರಾವಳಿ ಪಡೆಯಲು ಕೈ ಕಸರತ್ತು; ಹಲವು ಹೊಸಮುಖಗಳಿಗೆ ಮಣೆ ಹಾಕಿದ ಕಾಂಗ್ರೆಸ್
ʼಆರ್ ಆರ್ ಆರ್ʼ ಸಿನಿಮಾದಲ್ಲಿ ನಟಿಸಿರುವ ಅಜಯ್ ದೇವಗನ್ ʼನಾಟು ನಾಟುʼ ಹಾಡಿಗೆ ಆಸ್ಕರ್ ಬಂದ ಬಗ್ಗೆ ಮಾತನಾಡಿದ್ದೀಗ ವೈರಲ್ ಆಗಿದೆ. ಹಿಂದಿಯ ಜನಪ್ರಿಯ ಕಾರ್ಯಕ್ರಮ ʼ ಕಪಿಲ್ ಶರ್ಮಾ ಶೋʼ ನಲ್ಲಿ ʼಭೋಲಾ’ ಸಿನಿಮಾದ ಪ್ರಮೋಷನ್ ವೇಳೆ ʼಆರ್ ಆರ್ ಆರ್ʼ ತಂಡಕ್ಕೆ ಆಸ್ಕರ್ ಬಂದಿದೆ ಏನು ಹೇಳುತ್ತೀರಿ ಎಂದು ಕಪಿಲ್ ಕೇಳಿದ್ದಾರೆ.
ಇದಕ್ಕೆ ಅಜಯ್ ದೇವಗನ್ ಹಾಸ್ಯವಾಗಿಯೇ ʼʼನಾಟು ನಾಟು ಹಾಡಿಗೆ ಆಸ್ಕರ್ ಬಂದದ್ದು ನನ್ನಿಂದ, ನಾನು ಆ ಹಾಡಿನಲ್ಲಿ ಡ್ಯಾನ್ಸ್ ಮಾಡಿದ್ದರೆ ಏನಾಗುತ್ತಿತ್ತು” ಎಂದಿದ್ದಾರೆ. ಇದಕ್ಕೆ ಪ್ರತಿಯೊಬ್ಬರು ನಕ್ಕಿದ್ದಾರೆ. ಸದ್ಯ ಈ ಕಾರ್ಯಕ್ರಮದ ಪ್ರೋಮೋ ಮಾತ್ರ ರಿಲೀಸ್ ಆಗಿದೆ.
ಅಜಯ್ ದೇವಗನ್, ಆಲಿಯಾ ಭಟ್ ಕೂಡ ʼಆರ್ ಆರ್ ಆರ್ʼ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
To ye Raaz hai #NaatuNaatuSong ko Oscar milne ka 😯 pic.twitter.com/P9GXv4sy7K
— Pooran Marwadi (@Pooran_marwadi) March 24, 2023
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.