Security: ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ
Team Udayavani, Oct 15, 2024, 9:05 AM IST
ಮುಂಬಯಿ: ನಟ ಸಲ್ಮಾನ್ ಖಾನ್ ಅವರ ಆಪ್ತ ಸ್ನೇಹಿತ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಹತ್ಯೆಯ ಬೆನ್ನಲ್ಲೇ ಇದೀಗ ನಟ ಸಲ್ಮಾನ್ ಖಾನ್ ಅವರ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಬಾಲಿವುಡ್ ತಾರೆಯರ ಸುರಕ್ಷತೆಯನ್ನು ಮುಂಬೈ ಪೊಲೀಸರು ಕಟ್ಟುನಿಟ್ಟಾದ ಕಣ್ಗಾವಲಿನಲ್ಲಿಟ್ಟಿದ್ದಾರೆ.
ಜೀವ ಬೆದರಿಕೆ ಹಿನ್ನೆಲೆಯಲ್ಲಿ ನಟನಿಗೆ ವೈ ಪ್ಲಸ್ ಭದ್ರತೆಯನ್ನು ಒದಗಿಸಲಾಗಿದ್ದು ಪೊಲೀಸ್ ಬೆಂಗಾವಲು ವಾಹನದ ಜೊತೆಗೆ ಶಸ್ತ್ರಾಸ್ತ್ರಗಳನ್ನು ಬಳಸಲು ತರಬೇತಿ ಪಡೆದ ಕಾನ್ಸ್ಟೇಬಲ್ ಅವರ ಜೊತೆಯಲ್ಲಿರಲಿದ್ದಾರೆ ಎಂದು ಮಾಹಿತಿ ನೀಡಿದೆ.
ಬಾಬಾ ಸಿದ್ದಿಕಿ ಅವರ ಹತ್ಯೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದ್ದು ಇದರ ಬೆನ್ನಲೇ ನಟ ಸಲ್ಮಾನ್ ಖಾನ್ ಅವರಿಗೂ ಈ ಹಿಂದೆ ಹಲವಾರು ಬಾರಿ ಜೀವ ಬೆದರಿಕೆ ಕೂಡ ಬಂದಿತ್ತು ಈ ಎಲ್ಲ ಕಾರಣಕ್ಕೆ ಸಂಬಂಧಿಸಿ ನಟನಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ ಎಂದು ಹೇಳಲಾಗಿದೆ.
ಪನ್ವೇಲ್ ಫಾರ್ಮ್ಹೌಸ್ ಮೇಲೆ ನಿಗಾ:
ಮಹಾರಾಷ್ಟ್ರದ ಪನ್ವೇಲ್ನಲ್ಲಿರುವ ಸಲ್ಮಾನ್ ಖಾನ್ ಅವರ ಫಾರ್ಮ್ಹೌಸ್ಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಫಾರ್ಮ್ಹೌಸ್ನ ಒಳಗೆ ಮತ್ತು ಹೊರಗೆ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೆ, ನವಿ ಮುಂಬೈ ಪೊಲೀಸರು ಫಾರ್ಮ್ಹೌಸ್ ಸುತ್ತಲೂ ಸಂಚರಿಸುವ ವಾಹನಗಳನ್ನು ಪರಿಶೀಲಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
ಈ ವರ್ಷದ ಜೂನ್ನಲ್ಲಿ ಮುಂಬೈ ಪೊಲೀಸರು ಸಲ್ಮಾನ್ ಖಾನ್ ಅವರನ್ನು ಅವರ ಫಾರ್ಮ್ಹೌಸ್ ಬಳಿ ಕೊಲ್ಲುವ ಯೋಜನೆಯನ್ನು ವಿಫಲಗೊಳಿಸಿದರು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್, ಸಲ್ಮಾನ್ ಖಾನ್ ಅವರ ಫಾರ್ಮ್ಹೌಸ್ ಬಳಿ ಅವರ ಕಾರನ್ನು ನಿಲ್ಲಿಸಿ ಎಕೆ-47 ಗನ್ಗಳಿಂದ ಗುಂಡಿಕ್ಕಿ ಕೊಲ್ಲಲು ಯೋಜನೆ ರೂಪಿಸಿದ್ದರು ಆದರೆ ಪೊಲೀಸರು ಅದನ್ನು ವಿಫಲಗೊಳಿಸಿದ್ದಾರೆ.
ಇದಾದ ಬಳಿಕ ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸ ಗ್ಯಾಲಕ್ಸಿ ಅಪಾರ್ಟ್ಮೆಂಟ್ನ ಹೊರಗೆ ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅಪಾರ್ಟ್ಮೆಂಟ್ ಮೇಲೆ ಗುಂಡಿನ ದಾಳಿ ನಡೆಸಿದ್ದರು.
ಇದನ್ನೂ ಓದಿ: Baba Siddique Case: ಸಲ್ಮಾನ್ಗೆ ನೆರವಾಗುವ ಎಲ್ಲರಿಗೂ ಇದೇ ಗತಿ: ಬಿಷ್ಣೋಯ್ ಗ್ಯಾಂಗ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Air Pollution: ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ
Cancer Cases: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು
Election Date: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಇಂದು ಚುನಾವಣೆ ದಿನಾಂಕ ಘೋಷಣೆ!
Baba Siddique Case: ಸಲ್ಮಾನ್ಗೆ ನೆರವಾಗುವ ಎಲ್ಲರಿಗೂ ಇದೇ ಗತಿ: ಬಿಷ್ಣೋಯ್ ಗ್ಯಾಂಗ್!
Central Government: ಭದ್ರತಾ ಉದ್ಯಮದ ಪ್ರಧಾನ ಸಂಸ್ಥೆ ಎಚ್ಎಎಲ್ಗೆ “ಮಹಾರತ್ನ’
MUST WATCH
ಹೊಸ ಸೇರ್ಪಡೆ
Sullia: ಪಂಜ ಹೋಬಳಿ ಕೇಂದ್ರ ತಲುಪುವುದೇ ಕಷ್ಟ!
Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ
B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುತ್ತೇವೆ
Miraculous Escape: ಮೈಮೇಲೆ ವಾಟರ್ ಟ್ಯಾಂಕ್ ಬಿದ್ದರೂ ಮಹಿಳೆ ಪಾರಾಗಿದ್ದೇ ಪವಾಡ…
Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್ಬಾಸ್ ವೇದಿಕೆಗೆ ಬರಲಿದ್ದಾರೆ ಕಮಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.