ಇನ್ನೊಬ್ಬರ ಸಂಬಂಧದ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ: ಮಾಜಿ ಪತಿಯ ಡೇಟಿಂಗ್ ಬಗ್ಗೆ ಸಮಂತಾ
ಪ್ರೀತಿಯ ಮೌಲ್ಯವನ್ನು ತಿಳಿಯದವರು.. ಮಾಜಿ ಪತಿ ಬಗ್ಗೆ ಸಮಂತಾ ಹೇಳಿದ್ದೇನು?
Team Udayavani, Apr 4, 2023, 11:50 AM IST
ಹೈದರಾಬಾದ್: ಬಹುಭಾಷಾ ನಟಿ ಸಮಂತಾ ರುತ್ ಪ್ರಭು ಮೈಯೋಸಿಟಿಸ್ ಕಾಯಿಲೆಯ ನಡುವೆಯೂ ಸಿನಿಮಾ ರಂಗದಲ್ಲಿ ಸಖತ್ ಆ್ಯಕ್ಟಿವ್ ಆಗಿ ತೊಡಗಿಕೊಳ್ಳುತ್ತಿದ್ದಾರೆ. ʼ ಶಾಕುಂತಲಂʼ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿರುವ ನಟಿ ಇತ್ತೀಚೆಗೆ ಸಂದರ್ಶನಗಳನ್ನು ಹೆಚ್ಚಾಗಿ ನೀಡುತ್ತಿದ್ದಾರೆ.
ಇತ್ತೀಚೆಗಷ್ಟೇ ಸಮಂತಾ ʼ ಹೂ ಅಂಟವಾ ವಾʼ ಹಾಡಿಗೆ ತನ್ನ ಮನೆಯವರ ವಿರೋಧ ಕೇಳಿ ಬಂದ ಬಗ್ಗೆ ಮಾತನಾಡಿದ್ದರು. ಇದೀಗ ತನ್ನ ಮಾಜಿ ಮಾಜಿ ನಾಗಚೈತನ್ಯ ಅವರ ಬಗ್ಗೆ ಮಾತನಾಡಿದ್ದಾರೆ.
2017 ರಲ್ಲಿ ಮದುವೆಯಾಗಿದ್ದ ಸಮಂತಾ – ನಾಗಚೈತನ್ಯ ನಾಲ್ಕೇ ವರ್ಷದಲ್ಲಿ ವಿಚ್ಛೇದನ ಪಡೆದಿದ್ದರು. ಇದಾದ ಬಳಿಕ ಇಬ್ಬರೂ ಅವರವರ ಲೈಫ್ ನಲ್ಲಿ ಮೂವ್ ಆನ್ ಆಗಿದ್ದಾರೆ. ನಟ ನಾಗಚೈತನ್ಯ ನಟಿಯೊಬ್ಬರ ಜೊತೆ ಡೇಟಿಂಗ್ ನಲ್ಲಿರುವುದು ಕಳೆದ ಕೆಲ ಸಮಯದಿಂದ ಸುದ್ದಿಯಲ್ಲಿರುವ ವಿಚಾರ.
ನಟಿ ಶೋಭಿತಾ ಧೂಳಿಪಾಲ ಅವರೊಂದಿಗೆ ನಾಗಚೈತನ್ಯ ಡೇಟಿಂಗ್ ನಲ್ಲಿದ್ದಾರೆ. ಇಬ್ಬರೂ ಲಂಡನ್ ಗೆ ಹೋಗಿ ಆತ್ಮೀಯವಾಗಿ ಸಮಯ ಕಳೆದಿದ್ದು, ಡಿನ್ನರ್ ನಲ್ಲಿ ಒಟ್ಟಾಗಿ ಕಾಣಿಸಿಕೊಂಡ ಫೋಟೋಸ್ ಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಮಾಜಿ ಪತಿಯ ಡೇಟಿಂಗ್ ವದಂತಿ ಬಗ್ಗೆ ನಟಿ ಸಮಂತಾ ʼದಿ ಸಿಯಾಸತ್ ಡೈಲಿʼ ಸಂದರ್ಶನದಲ್ಲಿ ಮಾತನಾಡಿದ್ದಾರೆ.
ಯಾರು ಯಾರ ಜೊತೆ ಸಂಬಂಧದಲ್ಲಿದ್ದಾರೆ ಎನ್ನುವುದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಪ್ರೀತಿಯ ಮೌಲ್ಯವನ್ನು ತಿಳಿಯದವರು ಎಷ್ಟು ಜನರನ್ನು ಡೇಟ್ ಮಾಡಿದರೂ ಕಣ್ಣೀರು ಹಾಕುತ್ತಾರೆ. ಹುಡುಗಿ ಸಂತೋಷದಲ್ಲಿರಬೇಕು. ಹುಡುಗ ತನ್ನ ನಡವಳಿಕೆಯನ್ನು ಬದಲಾಯಿಸಿಕೊಂಡು ಹುಡುಗಿಯನ್ನು ನೋಯಿಸದಂತೆ ನೋಡಿಕೊಂಡರೆ ಎಲ್ಲರಿಗೂ ಒಳ್ಳೆಯದು ಎಂದಿದ್ದಾರೆ.
ಸಮಂತಾ ಅವರ ಮಾತುಗಳು ವೈರಲ್ ಆಗುತ್ತಿದ್ದಂತೆ ನಟಿ ಈ ಬಗ್ಗೆ ಟ್ವೀಟ್ ನಲ್ಲಿ ʼನಾನು ಯಾವತ್ತೂ ಈ ರೀತಿ ಹೇಳಿಲ್ಲ” ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.
ಸಮಂತಾ ಅವರು ಸದ್ಯ ʼ ʼ ಶಾಕುಂತಲಂʼ ಪ್ರಚಾರದಲ್ಲಿ ಬ್ಯುಸಿಯಾಗಿದ್ದು, ಈ ಸಿನಿಮಾ ಏ.14 ರಂದು ರಿಲೀಸ್ ಆಗಲಿದೆ.
I never said this!! https://t.co/z3k2sTDqu7
— Samantha (@Samanthaprabhu2) April 4, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Emergency;ಕೆಲವು ದೃಶ್ಯಕ್ಕೆ ಕತ್ತರಿ ಬಿದ್ದರಷ್ಟೇ ಅನುಮತಿ: ಕೋರ್ಟ್ಗೆ ಸಿಬಿಎಫ್ಸಿ
Spirit Movie: ಪ್ರಭಾಸ್ ʼಸ್ಪಿರಿಟ್ʼನಲ್ಲಿ ಖಡಕ್ ವಿಲನ್ ಆಗಲಿದ್ದಾರೆ ಈ ಬಿಟೌನ್ ದಂಪತಿ
‘Stree 2’ OTT release: ಓಟಿಟಿಗೆ ಬಂತು ಸೂಪರ್ ಹಿಟ್ ʼಸ್ತ್ರೀ-2ʼ; ಎಲ್ಲಿ ನೋಡಬಹುದು?
Veer Savarkar ಚಿತ್ರ ಆಸ್ಕರ್ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್ ಹೇಳಿದ್ದೇನು…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.