Samantha: ನಿರ್ಮಾಪಕಿಯಾಗಿ ಸಿನಿರಂಗದಲ್ಲಿ ಹೊಸ ಪಯಣ ಆರಂಭಿಸಿದ ನಟಿ ಸಮಂತಾ
Team Udayavani, Dec 11, 2023, 12:11 PM IST
ಚೆನ್ನೈ: ತನ್ನ ಆರೋಗ್ಯ ಸಮಸ್ಯೆಯಿಂದ ಸದ್ಯ ಚಿತ್ರರಂಗದಿಂದ ಬ್ರೇಕ್ ಪಡೆದುಕೊಂಡಿರುವ ನಟಿ ಸಮಂತಾ ರುತ್ ಪ್ರಭು ತಮ್ಮ ಅಭಿಮಾನಿಗಳಿಗೆ ಹೊಸ ಸುದ್ದಿಯೊಂದನ್ನು ಕೊಟ್ಟಿದ್ದಾರೆ.
ಬಹುಭಾಷೆಯಲ್ಲಿ ನಟಿಯಾಗಿ ಕಾಣಿಸಿಕೊಂಡಿರುವ ಸಮಂತಾ ಕಳೆದ ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಸಿನಿಮಾರಂಗದಲ್ಲಿ ಅಷ್ಟಾಗಿ ಕಾಣಿಸಿಕೊಂಡಿಲ್ಲ. ಟಿವಿ ಶೋಗಳಲ್ಲಿ ಭಾಗಿಯಾಗಿ ಹಾಗೂ ಪ್ರವಾಸ ಮಾಡುತ್ತಾ ಸಮಂತಾ ಎಂಜಾಯ್ ಮಾಡುತ್ತಿದ್ದಾರೆ. ಇದೀಗ ಸಿನಿರಂಗದಲ್ಲಿ ಒಂದು ಹೆಜ್ಜೆ ಮುಂದಕ್ಕೆ ಅವರು ಕಾಲಿಟ್ಟಿದ್ದಾರೆ.
ಸಮಂತಾ ತಮ್ಮದೇ ಆದ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿದ್ದು, ಅದಕ್ಕೆ ʼತ್ರಾಲಾಲ ಮೂವಿಂಗ್ ಪಿಕ್ಚರ್ಸ್ʼ ಎಂದು ಹೆಸರಿಟ್ಟಿದ್ದಾರೆ.
“ನನ್ನ ಪ್ರೊಡಕ್ಷನ್ ಹೌಸ್, ತ್ರಾಲಾಲ ಮೂವಿಂಗ್ ಪಿಕ್ಚರ್ಸ್ ಅನ್ನು ಘೋಷಿಸಲು ತುಂಬಾ ಉತ್ಸುಕನಾಗಿದ್ದೇನೆ. ತ್ರಾಲಾಲ ಮೂವಿಂಗ್ ಪಿಕ್ಚರ್ಸ್ ಹೊಸ ಯುಗದ ಅಭಿವ್ಯಕ್ತಿ ಮತ್ತು ಚಿಂತನೆಯ ವಿಷಯವನ್ನು ಪ್ರತಿನಿಧಿಸುವ ಗುರಿಯನ್ನು ಹೊಂದಿದೆ. ನಿರ್ದೇಶಕರು ತಮ್ಮ ಕಥೆಗಳನ್ನು ಅರ್ಥಪೂರ್ಣ, ಅಧಿಕೃತ ಮತ್ತು ಜಾಗತಿವಾಗಿ ಹೇಳಲು ಒಂದು ವೇದಿಕೆಯಾಗಿದೆ” ಎಂದು ನಿರ್ಮಾಣ ಸಂಸ್ಥೆಯ ಕುರಿತ ವಿಡಿಯೋವೊಂದನ್ನು ಹಂಚಿಕೊಂಡು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ನಿರ್ಮಾಪಕಿಯಾಗಿ ಹೊಸ ಹೆಜ್ಜೆಯಿಟ್ಟಿರುವ ಸಮಂತಾ ಅವರಿಗೆ ನಟಿಯರಾದ ನಂದಿನಿ ರೆಡ್ಡಿ, ಪಾರ್ವತಿ, ಅನುಪಮಾ ಪರಮೇಶ್ವರನ್ ಸೇರಿದಂತೆ ಅನೇಕರು ಶುಭಕೋರಿದ್ದಾರೆ.
ಸಮಂತಾ ಕೊನೆಯಬಾರಿ ವಿಜಯ್ ದೇವರಕೊಂಡ ಅವರ ಜೊತೆ ʼಖುಷಿʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಮುಂದೆ ಅವರು ʼಸಿಟಾಡೆಲ್ -ಇಂಡಿಯಾʼ ದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಾಜ್ -ಡಿಕೆ ಅವರ ಈ ಸ್ಪೈ ಥ್ರಿಲ್ಲರ್ ನಲ್ಲಿ ವರುಣ್ ಧವನ್ ಕೂಡ ಲೀಡ್ ರೋಲ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್ ಹಿಟ್ ʼಮಿರ್ಜಾಪುರ್ʼ ಸರಣಿ
Movie: 45 ಕೋಟಿ ಬಜೆಟ್, 60 ಸಾವಿರ ಗಳಿಕೆ; ಇದು ಭಾರತದ ಬಿಗೆಸ್ಟ್ ಫ್ಲಾಪ್ ಸಿನಿಮಾ
B’town: ಮದುವೆ, ಪಾರ್ಟಿಗಳ ಪರ್ಫಾರ್ಮೆನ್ಸ್ಗೆ ಬಿಟೌನ್ ಸ್ಟಾರ್ಸ್ ಪಡೆಯುವ ಸಂಭಾವನೆ ಎಷ್ಟು?
Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
Piracy;ಕಳೆದ ವರ್ಷ 22,400 ಕೋಟಿ ರೂ. ನಷ್ಟ!
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.