ಕಾಸ್ಟಿಂಗ್ ಕೌಚ್ನಿಂದ ತಪ್ಪಿಸಿಕೊಳ್ಳಲು ನಟಿ ಅನ್ನಪೂರ್ಣಾ ಕಂಡುಕೊಂಡಿದ್ದ ಉಪಾಯ ಏನು ಗೊತ್ತಾ?
Team Udayavani, Apr 10, 2021, 1:54 PM IST
ಹೈದರಾಬಾದ್: ಟಾಲಿವುಡ್ ಹಿರಿಯ ನಟಿ ಅನ್ನಪೂರ್ಣಾ ಚಿತ್ರರಂಗದಲ್ಲಿ ಇದೆ ಎನ್ನಲಾಗುತ್ತ ಬಂದಿರುವ ಕಾಸ್ಟಿಂಗ್ ಕೌಚ್ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಇತ್ತೀಚಿಗೆ ಸಂದರ್ಶನವೊಂದರಲ್ಲಿ ಮಾತಾಡಿರುವ ಅವರು, ಎಲ್ಲರಂಗದಲ್ಲಿಯೂ ಕಾಸ್ಟಿಂಗ್ ಕೌಚ್ ಅಸ್ತಿತ್ವದಲ್ಲಿದೆ ಎಂದಿದ್ದಾರೆ. ಅದನ್ನು ದೂರಮಾಡಲು ತಾವು ಕಂಡುಕೊಂಡ ಮಾರ್ಗದ ಬಗ್ಗೆ ಹೇಳಿಕೊಂಡಿರುವ ಅನ್ನಪೂರ್ಣಾ, ‘ನಾನು 20ನೇ ವಯಸ್ಸಿಗೆ ಮದುವೆಯಾದೆ ಎಂದಿದ್ದಾರೆ.
ನನಗೆ ನಾಯಕಿ ಪಾತ್ರಕ್ಕಾಗಿ ಸಾಕಷ್ಟು ಸಿನಿಮಾಗಳಿಂದ ಅವಕಾಶಗಳು ಅರಸಿ ಬಂದವು. ಆದರೆ, ನಾನು ಕೇವಲ ಎರಡು ಸಿನಿಮಾಗಳಲ್ಲಿ ಮಾತ್ರ ನಾಯಕಿ ನಟಿಯಾಗಿ ಅಭಿನಯಿಸಿದೆ. ನಂತರದ ದಿನಗಳಲ್ಲಿ ತಾಯಿಯಂತಹ ಪೋಷಕ ಪಾತ್ರಗಳಲ್ಲಿ ಅಭಿನಯಿಸಲು ಶುರು ಮಾಡಿದೆ ಎಂದು ಹೇಳಿದ್ದಾರೆ.
ಚಿತ್ರರಂಗದಲ್ಲಿ ಬೇರು ಬಿಟ್ಟಿರುವ ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿರುವ ಅವರು, ಎರಡೂ ಕಡೆಯಿಂದ ತಪ್ಪು ನಡೆಯುತ್ತದೆ. ಯಾರೂ ಕೂಡ ಯಾರನ್ನೂ ಕಾಂಪ್ರಮೈಸ್ ಮಾಡಿಕೊಳ್ಳಲು ಒತ್ತಾಯಿಸುವುದಿಲ್ಲ. ಇಬ್ಬರುಗಳ ಸಹಮತ ಇದ್ದಾಗ ಮಾತ್ರ ಇಂತಹ ತಪ್ಪುಗಳು ನಡೆಯುತ್ತವೆ. ಒಂದು ವೇಳೆ ಯಾರಾದರೂ ಅಂತಹ ಅನುಭವಕ್ಕೆ ತುತ್ತಾದರೆ /ಎದುರಿಸಿದರೆ ಅವರು ತಕ್ಷಣವೇ ಅದರ ವಿರುದ್ಧ ಧ್ವನಿ ಎತ್ತಬೇಕೆಂದು ಸೂಚಿಸಿದ್ದಾರೆ.
ಇನ್ನು ನಟಿ ಅನ್ನಪೂರ್ಣಾ ಅವರು 1975 ರಲ್ಲಿ ತೆರೆಕಂಡ ‘ಸ್ವರ್ಗಂ ನರಕಂ’ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಪದಾರ್ಪಣೆ ಮಾಡಿದರು. ಅಲ್ಲಿಂದ ಶುರುವಾದ ಇವರ ಸಿನಿ ಪಯಣ ಇಂದಿಗೂ ಮುಂದುವರೆದಿದೆ. ಪ್ರಸ್ತುತ ಅವರು ವೆಂಕಟೇಶ್ ದಗ್ಗುಬಾಟಿ, ವರುಣ್ ತೇಜ್, ತಮನ್ನಾ ಭಾಟಿಯಾ ನಟಿಸುತ್ತಿರುವ ಸಿನಿಮಾವೊಂದರಲ್ಲಿ ಬಹುಮುಖ್ಯ ಪಾತ್ರ ನಿಭಾಯಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kiran Rao ಚಿತ್ರ ಆಸ್ಕರ್ ಗೆ ಪ್ರವೇಶ: ಮಾಜಿ ಪತಿ ಆಮಿರ್ ಖಾನ್ ಹರ್ಷ
Oscars: 97ನೇ ಆಸ್ಕರ್ಗೆ ಭಾರತದಿಂದ ಅಧಿಕೃತ ಪ್ರವೇಶ ಪಡೆದ ‘ಲಾಪತಾ ಲೇಡೀಸ್’
Bollywood: ಪಾಕ್ ನಟ ಫವಾದ್ ಜತೆ ರಿಧಿ ರೊಮ್ಯಾನ್ಸ್? 8 ವರ್ಷದ ಬಳಿಕ ಬಾಲಿವುಡ್ ಕಂಬ್ಯಾಕ್
Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!
Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Shivamogga: ತಿರುಪತಿ ಲಡ್ಡಿಗೆ ಅಪಚಾರ: ಕೂಡಲಿ ಶ್ರೀಗಳಿಂದ 3 ದಿನ ಉಪವಾಸ ವ್ರತ
High Court: ಮರಗಳಿಗೆ ಕತ್ತರಿ: ಸರಕಾರ, ಜಿಲ್ಲಾಡಳಿತಕ್ಕೆ ನೋಟಿಸ್
High Court: ಕೋರ್ಟ್ ಕಲಾಪದ ವೀಡಿಯೋ ಹಂಚಿಕೆಗೆ ತಡೆ: ಇಂದು ವಿಚಾರಣೆ
Bihar; ಮತ್ತೊಂದು ಸೇತುವೆ ಕುಸಿತ: ನಾಲ್ಕು ತಿಂಗಳಲ್ಲಿ 17ನೇ ಪ್ರಕರಣ
Challenge: ಮಹಿಷ ದಸರಾಕ್ಕೆ ಮುಂದಾದರೆ ಚಾಮುಂಡಿ ಚಲೋ: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.