Shilpa Shetty: ಧ್ವಜಾರೋಹಣ ವೇಳೆ ಶೂ ಹಾಕಿದ್ದಕ್ಕೆ ಟ್ರೋಲಾದ ನಟಿ ಶಿಲ್ಪಾ ಶೆಟ್ಟಿ

ಟ್ರೋಲರ್ಸ್‌ ಗಳಿಗೆ ಖಡಕ್‌ ರಿಪ್ಲೈ ಕೊಟ್ಟ ನಟಿ

Team Udayavani, Aug 16, 2023, 12:49 PM IST

Shilpa Shetty: ಧ್ವಜಾರೋಹಣ ವೇಳೆ ಶೂ ಹಾಕಿದ್ದಕ್ಕೆ ಟ್ರೋಲಾದ ನಟಿ ಶಿಲ್ಪಾ ಶೆಟ್ಟಿ

ಮುಂಬಯಿ: ಬಿಟೌನ್‌ ನಲ್ಲಿ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗುವ ನಟಿ ಶಿಲ್ಪಾ ಶೆಟ್ಟಿ ಸ್ವಾತಂತ್ರ್ಯ ದಿನಾಚರಣೆಯ ದಿನ ಧ್ವಜಾರೋಹಣ ಮಾಡಿದ್ದಾರೆ. ಈ ಮೂಲಕ ದೇಶ ಪ್ರೇಮವನ್ನು ಮರೆದಿದ್ದಾರೆ. ಆದರೆ ಇದೇ ವಿಚಾರವಾಗಿ ಅವರು ಟ್ರೋಲ್‌ ಆಗಿದ್ದಾರೆ.

ನಟಿ ಶಿಲ್ಪಾ ಶೆಟ್ಟಿ ತನ್ನ ಕುಟುಂಬದೊಂದಿಗೆ 77ನೇ ಸ್ವಾತಂತ್ರ್ಯ ದಿನವನ್ನು ಧ್ವಜಾರೋಹಣನ್ನು ನೆರವೇರಿಸುವ ಮೂಲಕ ಸಂಭ್ರಮಿಸಿದ್ದಾರೆ. ಆದರೆ ಧ್ವಜಾರೋಹಣ ಮಾಡಿದ ವೇಳೆ ಅವರು ಶೂಗಳನ್ನು ಹಾಕಿಕೊಂಡಿದ್ದಾರೆ ಎನ್ನುವ ವಿಚಾರದಲ್ಲಿ ಟ್ರೋಲ್‌ ಆಗಿದ್ದಾರೆ.

ಧ್ವಜಾರೋಹಣವನ್ನು ನೆರವೇರಿಸುವ ವಿಡಿಯೋವನ್ನು ಶಿಲ್ಪಾ ಶೆಟ್ಟಿ ತನ್ನ ಇನ್‌ಸ್ಟಾಗ್ರಾಮ್‌ ನಲ್ಲಿ ಹಾಕಿಕೊಂಡಿದ್ದಾರೆ. ಈ ವೇಳೆ ಹಾಕಿರುವ ಶೂಗಳನ್ನು ನೋಡಿ ಕೆಲವರು ಅವರನ್ನು ಟ್ರೋಲ್‌  ಮಾಡಿದ್ದಾರೆ.

“ನೀವು ರಾಷ್ಟ್ರಧ್ವಜವನ್ನು ಹಾರಿಸುವಾಗ, ನಿಮ್ಮ ಪಾದರಕ್ಷೆಗಳನ್ನು ತೆಗೆದ ನಂತರವೇ ಧ್ವಜದ ಹಗ್ಗವನ್ನು ಸ್ಪರ್ಶಿಸಿ ಎಂದು ನಾನು ನಿಮ್ಮನ್ನು ಆಗ್ರಹಿಸುತ್ತೇನೆ” ಎನ್ನುವ ಕಮೆಂಟನ್ನು ನೆಟ್ಟಗರೊಬ್ಬರು ಮಾಡಿದ್ದಾರೆ. “ರಾಷ್ಟ್ರ ಧ್ವಜವನ್ನು ಹಾರಿಸುವಾಗ ಚಪ್ಪಲಿಗಳನ್ನು ತೆಗೆಯಬೇಕೆನ್ನುವುದು ಕೂಡ ನಿಮಗೆ ಗೊತ್ತಿಲ್ಲ” ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Actor Darren Kent: 36ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಖ್ಯಾತ ಹಾಲಿವುಡ್ ನಟ

ಸಾಮಾನ್ಯವಾಗಿ ಶಿಲ್ಪಾ ಶೆಟ್ಟಿ ಯಾವ ಟ್ರೋಲ್‌ ಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಈ ಬಾರಿ ಅವರು ಖಡಕ್‌ ಆಗಿ ಟ್ರೋಲರ್‌ ಗಳಿಗೆ ಪ್ರತಿಕ್ರಿಯೆ ನೀಡಿರುವುದು ವೈರಲ್‌ ಆಗಿದೆ.

“ಧ್ವಜಾರೋಹಣ ಮಾಡುವಾಗ ಇರುವ ನಿಯಮಗಳ ಬಗ್ಗೆ ನನಗೆ ತಿಳಿದಿದೆ, ನನ್ನ ದೇಶ ಮತ್ತು ಧ್ವಜದ ಗೌರವವು ನನ್ನ ಹೃದಯದಿಂದ ಬಂದಿದೆಯೇ ಹೊರತು ಪ್ರಶ್ನಿಸಲು ಅಲ್ಲ. ನಾನೊಬ್ಬ ಹೆಮ್ಮೆಯ ಭಾರತೀಯಳು. ಇಂದಿನ ಪೋಸ್ಟ್ ನ್ನು ದೇಶದ ಬಗೆಗಿನ ಭಾವನೆಯನ್ನು ಹಂಚಿಕೊಳ್ಳಲು ಮತ್ತು ಆಚರಿಸಲು ಹಾಕಿದ್ದೇನೆ. ಎಲ್ಲಾ ಟ್ರೋಲರ್‌ಗಳಿಗೆ (ನಾನು ಸಾಮಾನ್ಯವಾಗಿ ನಿರ್ಲಕ್ಷಿಸುತ್ತೇನೆ) ಈ ದಿನ ನಿಮ್ಮ ಅಜ್ಞಾನ ಹಾಗೂ ನಕಾರಾತ್ಮಕತೆಯನ್ನು ಹರಡಬೇಡಿ” ಎಂದಿದ್ದಾರೆ.

ಇಷ್ಟು ಮಾತ್ರವಲ್ಲದೆ ಗೂಗಲ್‌ ನಲ್ಲಿ “ನಾವು ಭಾರತದ ಧ್ವಜವನ್ನು ಹಾರಿಸುವಾಗ ಶೂಗಳೊಂದಿಗೆ ಹಾರಿಸಬಹುದೇ?” ಎನ್ನುವ ಪ್ರಶ್ನೆಯನ್ನು ಹಾಕಿ ಅದಕ್ಕೆ ಬಂದ ಪ್ರತಿಕ್ರಿಯೆಯನ್ನು ಸ್ಕ್ರೀನ್‌ ಶಾಟ್‌ ಮಾಡಿ ಸ್ಟೋರಿಯಲ್ಲಿ ಹಾಕಿಕೊಂಡಿದ್ದಾರೆ. “ಭಾರತದ ಧ್ವಜ ಸಂಹಿತೆಯು ಬೂಟುಗಳೊಂದಿಗೆ ರಾಷ್ಟ್ರಧ್ವಜವನ್ನು ಹಾರಿಸುವುದನ್ನು ನಿರ್ಬಂಧಿಸುವುದಿಲ್ಲ” ಎಂದು ಪ್ರಶ್ನೆಗೆ ಬಂದ ಉತ್ತರವಾಗಿತ್ತು. ಇದು ಫ್ಯಾಕ್ಟ್‌ ಎಂದು ನಟಿ ಬರೆದುಕೊಂಡಿದ್ದಾರೆ.

ಇನ್ನು ನಟಿ ಶಿಲ್ಪಾ ಶೆಟ್ಟಿ ರೋಹಿತ್ ಶೆಟ್ಟಿ ಅವರ ವೆಬ್‌ ಸಿರೀಸ್ ‘ಇಂಡಿಯನ್ ಪೋಲಿಸ್ ಫೋರ್ಸ್’ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.  ‌ಇದು ಪ್ರೈಮ್ ವಿಡಿಯೋ ಇಂಡಿಯಾದಲ್ಲಿ ಪ್ರೀಮಿಯರ್ ಆಗಲಿದೆ.

ಟಾಪ್ ನ್ಯೂಸ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

1-kanga-eme

‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.