![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Jul 10, 2023, 5:05 PM IST
ಚೆನ್ನೈ: ಕಾಲಿವುಡ್ ನಟ ಶಿವಕಾರ್ತಿಕೇಯನ್ ಸದ್ಯ ʼ ಮಾವೀರನ್ʼ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಪ್ರಚಾರ ಕಾರ್ಯಕ್ರಮದಲ್ಲಿ ಅವರು ಆಡಿದ ಮಾತು ಅಭಿಮಾನಿಗಳ ಮನಗೆದ್ದಿದೆ.
ಶಿವಕಾರ್ತಿಕೇಯನ್ ಅವರ ʼಡಾನ್ʼ, ʼಡಾಕ್ಟರ್ʼ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಕಮಾಲ್ ಮಾಡಿತ್ತು. ʼಡಾನ್ʼ ಮೊದಲ ದಿನವೇ ವರ್ಲ್ಡ್ ವೈಡ್ 15 ಕೋಟಿ ರೂ. ಗಳಿಕೆ ಕಂಡಿತ್ತು. ಆ ಬಳಿಕ ಬಂದ ʼಡಾಕ್ಟರ್ʼ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ 100 ಕೋಟಿ ರೂ. ಕಮಾಯಿ ಮಾಡಿತ್ತು. ಎರಡು ಬ್ಲಾಕ್ ಬಸ್ಟರ್ ನೀಡಿದ ನಂತರ ಬಂದ ʼಪ್ರಿನ್ಸ್ʼ ಸಿನಿಮಾ ಹೇಳಿಕೊಳ್ಳುವಷ್ಟರ ಮಟ್ಟಿಗೆ ಗಳಕೆ ಹಾಗೂ ಸದ್ದು ಮಾಡಿಲ್ಲ.
ಈ ಬಗ್ಗೆ ಪ್ರಶ್ನೆಯನ್ನು ಕೇಳಿದಾಗ, “ನನ್ನ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಸೋತರೆ ಅದರ ಸಂಪೂರ್ಣ ಜವಾಬ್ದಾರಿಯನ್ನು ನಾನು ಹೊರುತ್ತೇನೆ. ಚಿತ್ರ ಹಿಟ್ ಆದಾಗ ಅದರ ಕ್ರೆಡಿಟ್ ಇಡೀ ತಂಡಕ್ಕೆ ಸಲ್ಲಬೇಕು” ಎಂದು ಅವರು ಸರಳವಾಗಿ ಒಂದೇ ಮಾತಿನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: Kichcha sudeep: ಹಣಕಾಸಿನ ವಿವಾದ; ವಾಣಿಜ್ಯ ಮಂಡಳಿಗೆ ಸುದೀರ್ಘ ಪತ್ರ ಬರೆದ ಕಿಚ್ಚ
ಈ ಮಾತು ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.
ʼಮಾವೀರನ್ʼನಲ್ಲಿ, ಶಿವಕಾರ್ತಿಕೇಯನ್ ಮಾವೀರನ್ ಎಂಬ ಪಾತ್ರವನ್ನು ಬಿಡಿಸುವ ಕಾರ್ಟೂನಿಸ್ಟ್ ಆಗಿ ನಟಿಸಿದ್ದಾರೆ. ಚಿತ್ರದಲ್ಲಿ ಅದಿತಿ ಶಂಕರ್ ನಾಯಕಿಯಾಗಿದ್ದು, ಅವರು ಪತ್ರಕರ್ತೆಯಾಗಿ ನಟಿಸಿದ್ದಾರೆ. ಈ ಚಿತ್ರಕ್ಕಾಗಿ ಇಬ್ಬರೂ ಜೊತೆಯಾಗಿ ಒಂದು ಹಾಡನ್ನೂ ಹಾಡಿದ್ದಾರೆ. ಅಂದಹಾಗೆ ಈ ಸಿನಿಮಾ ಇದೇ ಜು.14 ರಂದು ತೆರೆಗೆ ಬರಲಿದೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
You seem to have an Ad Blocker on.
To continue reading, please turn it off or whitelist Udayavani.