BʼTown: ಪ್ರಿಯಕರ ಜಹೀರ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾದ ಸೋನಾಕ್ಷಿ ಸಿನ್ಹಾ
Team Udayavani, Jun 10, 2024, 10:59 AM IST
ಮುಂಬಯಿ: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ತನ್ನ ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ದರಾಗಿದ್ದಾರೆ.
ಕಳೆದ ಕೆಲ ಸಮಯದಿಂದ ಸೋನಾಕ್ಷಿ ನಟ ಜಹೀರ್ ಇಕ್ಬಾಲ್ ಅವರೊಂದಿಗೆ ಪ್ರೀತಿಯ ಬಂಧದಲ್ಲಿದ್ದಾರೆ. ಜೊತೆಯಾಗಿ ಅನೇಕ ಸೋಶಿಯಲ್ ಪೋಸ್ಟ್ ಗಳನ್ನು ಇಬ್ಬರು ಹಂಚಿಕೊಂಡಿದ್ದಾರೆ. ಪಾರ್ಟಿಗಳಲ್ಲಿ ಭಾಗಿಯಾಗಿದ್ದರೂ ಎಲ್ಲೂ ಕೂಡ ತನ್ನ ಪ್ರೀತಿಯ ಬಗ್ಗೆ ಬಹಿರಂಗವಾಗಿ ಹೇಳಿಕೊಂಡಿಲ್ಲ.
ಇತ್ತೀಚೆಗಷ್ಟೇ ಸೋನಾಕ್ಷಿ ಹುಟ್ಟುಹಬ್ಬಕ್ಕೆ ಜಹೀರ್ ಮುದ್ದಾದ ಫೋಟೋಗಳ್ಳುಳ ಪೋಸ್ಟ್ ಹಾಕಿ ಪ್ರಿಯತಮೆಗೆ ವಿಶ್ ಮಾಡಿದ್ದರು. ಇದೀಗ ಇಬ್ಬರು ದಾಂಪತ್ಯಕ್ಕೆ ಕಾಲಿಡಲಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ.
ಜೂನ್.23 ರಂದು ಕೆಲವೇ ಕೆಲ ಸಂಬಂಧಿಕರು ಹಾಗೂ ಗೆಳೆಯರ ಸಮ್ಮುಖದಲ್ಲಿ ಸೋನಾಕ್ಷಿ – ಜಹೀರ್ ವಿವಾಹವಾಗಲಿದ್ದಾರೆ ಎಂದು ʼಇಂಡಿಯಾ ಟುಡೇʼ ವರದಿ ಮಾಡಿದೆ.
ಅವರ ಆಪ್ತರು ಮತ್ತು ಕುಟುಂಬ ಸದಸ್ಯರನ್ನು ಹೊರತುಪಡಿಸಿ, ʼಹೀರಾಮಂಡಿʼಯ ಸಂಪೂರ್ಣ ಚಿತ್ರತಂಡವನ್ನು ಮದುವೆಗೆ ಆಹ್ವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ನಟ ಜಹೀರ್ 2019 ರಲ್ಲಿ ʼನೋಟ್ ಬುಕ್ʼ ಸಿನಿಮಾದ ಮೂಲಕ ಬಿಟೌನ್ ಗೆ ಎಂಟ್ರಿ ಆಗಿದ್ದರು. ಈ ಸಿನಿಮಾವನ್ನು ಸಲ್ಮಾನ್ ಖಾನ್ ನಿರ್ಮಾಣ ಮಾಡಿದ್ದರು. ಸಲ್ಮಾನ್ ಖಾನ್ ಮೂಲಕ ಜಹೀರ್ ಅವರನ್ನು ಸೋನಾಕ್ಷಿ ಭೇಟಿ ಆಗಿದ್ದರು. ಈ ಭೇಟಿ ಆತ್ಮೀಯತೆಗೆ ತಿರುಗಿ ಅಲ್ಲಿಂದ ಪ್ರೇಮ ಬಂಧಕ್ಕೆ ತಿರುಗಿತು.
ಜಹೀರ್ ಹಾಗೂ ಸೋನಾಕ್ಷಿ 2022 ರಲ್ಲಿ ಬಂದ ʼಡಬಲ್ ಎಕ್ಸ್ ಎಲ್ʼ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ್ದರು.
ಈ ಹಿಂದೆ ನಟ ಜಹೀರ್ ನಟಿ ದೀಕ್ಷಾ ಸೇಠ್ ಹಾಗೂ ಸನಾ ಸಯೀದ್ ಅವರೊಂದಿಗೆ ಡೇಟಿಂಗ್ ನಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Emergency;ಕೆಲವು ದೃಶ್ಯಕ್ಕೆ ಕತ್ತರಿ ಬಿದ್ದರಷ್ಟೇ ಅನುಮತಿ: ಕೋರ್ಟ್ಗೆ ಸಿಬಿಎಫ್ಸಿ
Spirit Movie: ಪ್ರಭಾಸ್ ʼಸ್ಪಿರಿಟ್ʼನಲ್ಲಿ ಖಡಕ್ ವಿಲನ್ ಆಗಲಿದ್ದಾರೆ ಈ ಬಿಟೌನ್ ದಂಪತಿ
‘Stree 2’ OTT release: ಓಟಿಟಿಗೆ ಬಂತು ಸೂಪರ್ ಹಿಟ್ ʼಸ್ತ್ರೀ-2ʼ; ಎಲ್ಲಿ ನೋಡಬಹುದು?
Veer Savarkar ಚಿತ್ರ ಆಸ್ಕರ್ ಗೆ ಸಲ್ಲಿಕೆಯಾಗಿದೆಯೇ? ಫಿಲ್ಮ್ ಫೆಡರೇಶನ್ ಹೇಳಿದ್ದೇನು…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Moksha Kushal: ಹಾಟ್ ಫೋಟೋಶೂಟ್ನಲ್ಲಿ ಮೋಕ್ಷಾ ಮಿಂಚು
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.