Sonakshi Sinha: ಮದುವೆಯಾದ ಎರಡು ತಿಂಗಳೊಳಗೆಯೇ ಮನೆ ಮಾರಾಟಕ್ಕೆ ಮುಂದಾದ ನಟಿ ಸೋನಾಕ್ಷಿ


Team Udayavani, Aug 21, 2024, 12:12 PM IST

Sonakshi Sinha: ಮದುವೆಯಾದ ಎರಡು ತಿಂಗಳೊಳಗೆಯೇ ಮನೆ ಮಾರಾಟಕ್ಕೆ ಮುಂದಾದ ನಟಿ ಸೋನಾಕ್ಷಿ

ಮುಂಬಯಿ: ಇತ್ತೀಚೆಗೆ ಪ್ರಿಯಕರ ಜಹೀರ್ ಇಕ್ಬಾಲ್(Zaheer Iqbal) ಜತೆ ಕೋರ್ಟ್ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಸೋನಾಕ್ಷಿ ಸಿನ್ಹಾ(Sonakshi Sinha) ತಮ್ಮ ಮನೆಯನ್ನು ಮಾರಾಟ ಮಾಡಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ರಿಯಲ್ ಎಸ್ಟೇಟ್ ಪೇಜ್‌ವೊಂದು  ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ಮನೆ ಮಾರಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಈ ವಿಡಿಯೋ ನೋಡಿ ಇದು ನಟಿ ಸೋನಾಕ್ಷಿ ಸಿನ್ಹಾ ಅವರ ಬಾಂದ್ರಾ ಅಪಾರ್ಟ್ಮೆಂಟ್ ಎಂದು ಕಮೆಂಟ್‌ ಮಾಡಿದ್ದಾರೆ.

ಈ ಮನೆಯಲ್ಲಿನ ವಿಶೇಷ ಹಾಗೂ ಸೌಲಭ್ಯಗಳನ್ನು ಹೇಳುತ್ತಾ ವಿಡಿಯೋ ಕೊನೆಯಲ್ಲಿ 25 ಕೋಟಿ ರೂ. ಮಾರಾಟ ಮಾಡುವುದಾಗಿ ಹೇಳಲಾಗಿದೆ.

ಯಾವ ಮನೆ ಇದು?:

ಕಳೆದ ವರ್ಷದ ಸೆಪ್ಟೆಂಬರ್‌ ತಿಂಗಳಿನಲ್ಲಿ ನಟಿ ಸೋನಾಕ್ಷಿ ಬಾಂದ್ರಾ ವೆಸ್ಟ್‌ನ ಬಾಂದ್ರಾ ರಿಕ್ಲಮೇಶನ್‌ನಲ್ಲಿರುವ 81 ಓರೆಟ್‌ನ 26 ನೇ ಮಹಡಿಯಲ್ಲಿ ಅಪಾರ್ಟ್ಮೆಂಟ್ ನ್ನು 11 ಕೋಟಿ ರೂಪಾಯಿಗೆ ಖರೀದಿಸಿದ್ದರು. ಮನೆ ಖರೀದಿಯ ಒಪ್ಪಂದಕ್ಕೆ ಅವರ ತಾಯಿ ಪೂನಂ ಸಿನ್ಹಾ ಸಹಿ ಹಾಕಿದ್ದರು. ಇದು ಐಷಾರಾಮಿ ಮನೆಯಾಗಿದ್ದು ಮನೆಯಿಂದಲೇ ಸುಂದರವಾಗಿ ಸಮುದ್ರ ನೋಟ ಕಾಣುತ್ತದೆ.

ಮದುವೆ ಬಳಿಕ ಮಾರಾಟ..; ಈ ಮನೆಯಲ್ಲಿ ಸೋನಾಕ್ಷಿ ಅವರ ತಂದೆ – ತಾಯಿ ಮೊದಲು ವಾಸಿಸುತ್ತಿದ್ದರು. ಮದುವೆಯ ನಂತರ ಸೋನಾಕ್ಷಿ ತನ್ನ ಪತಿ ಜಹೀರ್‌ ಜತೆ ಇಲ್ಲಿ ವಾಸಿಸುತ್ತಿದ್ದರು. ಮನೆಯನ್ನು ಅಲಂಕಾರ ಮಾಡುವ ಹಾಗೂ ಮನೆಯನ್ನು ಪರಿಚಯಿಸುವ ವಿಡಿಯೋವನ್ನು ಸೋನಾಕ್ಷಿ ಇತ್ತೀಚೆಗೆ ಹಂಚಿಕೊಂಡಿದ್ದರು.

ಜೂನ್.23‌ ರಂದು ಜಹೀರ್‌ ಜತೆ ಮದುವೆಯ ಬಳಿಕ ಸೋನಾಕ್ಷಿ ಈ ಮನೆಯಲ್ಲೇ ವಾಸಿಸುತ್ತಿದ್ದರು. ಇದೀಗ ಮದುವೆಯಾಗಿ ಎರಡು ತಿಂಗಳೊಳಗೆಯೇ ಈ ಮನೆಯನ್ನು ಮಾರಾಟಕ್ಕೆ ಮುಂದಾಗಿದ್ದಾರೆ. ಇದೇ ಮನೆಯಲ್ಲಿ ಸೋನಾಕ್ಷಿ – ಜಹೀರ್‌ ತನ್ನ ಆತ್ಮೀಯರಿಗೆ ಮದುವೆಯ ಹಿನ್ನೆಲೆಯಲ್ಲಿ ಪಾರ್ಟಿಯನ್ನು ಆಯೋಜಿಸಿದ್ದರು.

ಮನೆಯ ವಿಶೇಷತೆ ಏನು?: ಸೋನಾಕ್ಷಿ ಅವರ ಈ ಮನೆ ಐಷಾರಾಮಿಯಾಗಿದ್ದು,  4 ಬಿಎಚ್‌ಕೆಯ ಸೀ ಫೇಸಿಂಗ್ ಅಪಾರ್ಟ್‌ಮೆಂಟ್ ಇದಾಗಿದೆ. ಇದು 42000 ಚದರ ಅಡಿಗಳಲ್ಲಿ ಹರಡಿದೆ. ಅಗತ್ಯಕ್ಕೆ ಅನುಗುಣವಾಗಿ ಇದನ್ನು 2BHK ಆಗಿ ಪರಿವರ್ತಿಸಿಕೊಳ್ಳಬಹುದು. ವಿಶಾಲವಾದ ಪಾರ್ಕಿಂಗ್‌ ವ್ಯವಸ್ಥೆಯೂ ಇದೆ ಎಂದು ವಿಡಿಯೋದಲ್ಲಿ ಹೇಳಲಾಗಿದೆ.

ರಿಯಲ್‌ ಎಸ್ಟೇಟ್‌ ಪೇಜ್‌ ಹಂಚಿಕೊಂಡಿರುವ ಈ ಪೋಸ್ಟ್‌ನ್ನು ನಟಿ ಸೋನಾಕ್ಷಿ ಅವರು ಲೈಕ್‌ ಮಾಡಿದ್ದಾರೆ.

ಇಷ್ಟು ಅವಸರ ಯಾಕೆ.. ನೆಟ್ಟಿಗರ ಪ್ರಶ್ನೆ; ಸೋನಾಕ್ಷಿ ಅವರ ಮದುವೆ ನೆನಪುಗಳು ಈ ಮನೆಯಲ್ಲಿದೆ. ಗಂಡನ ಜತೆ ಇಲ್ಲಿ ನೆಲೆಸಿ ಎರಡೂ ತಿಂಗಳು ಪೂರ್ತಿ ಆಗಿಲ್ಲ ಇಷ್ಟು ಬೇಗ ಈ ಮನೆಯನ್ನು ಮಾರಾಟ ಮಾಡುತ್ತಿರುವುದು ಯಾಕೆ ಎಂದು ಹಲವರು ಪ್ರಶ್ನಿಸಿದ್ದಾರೆ.

“ಸೋನಾಕ್ಷಿ ಸಿನ್ಹಾ ತನ್ನ ಮನೆಯನ್ನು ಏಕೆ ಮಾರುತ್ತಿದ್ದಾರೆ? ಅವರು ಸ್ವಲ್ಪ ಸಮಯದ ಹಿಂದಷ್ಟೇ ಇದನ್ನು ಖರೀದಿಸಿದ್ದರು” ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. “ಇದು ಸೋನಾಕ್ಷಿ ಅವರ ಮನೆಯಾಗಿದೆ. ಅವರು ಇಷ್ಟು ಬೇಗ ಇಲ್ಲಿಂದ ಹೋಗುವುದು ಯಾಕೆ?” ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.