![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 22, 2024, 6:29 PM IST
ಮುಂಬಯಿ: ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಭಾನುವಾರ(ಜೂ.23 ರಂದು) ತನ್ನ ಪ್ರಿಯಕರ ಜಹೀರ್ ಇಕ್ಬಾಲ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈಗಾಗಲೇ ವಿವಾಹದ ಕಾರ್ಯಕ್ರಮಗಳು ಆರಂಭವಾಗಿದ್ದು ಮೆಹೆಂದಿ ಸಮಾರಂಭದ ಫೋಟೋಗಳು ವೈರಲ್ ಆಗಿದೆ.
ಮದುವೆಯ ಬಳಿಕ ಸೋನಾಕ್ಷಿ ಸಿನ್ಹಾ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳಲಿದ್ದಾರೆ ಎನ್ನುವ ಮಾತುಗಳು ಹರಿದಾಡಿತ್ತು. ಇದೀಗ ಈ ಬಗ್ಗೆ ಜಹೀರ್ ಅವರ ತಂದೆ, ಉದ್ಯಮಿ ಇಕ್ಬಾಲ್ ರತ್ನಾಸಿ ಅವರು ಸ್ಪಷ್ಟನೆ ನೀಡಿದ್ದಾರೆ.
ʼಪ್ರೀ ಪ್ರೆಸ್ ಜರ್ನಲ್ʼ ಜೊತೆ ಮಾತನಾಡಿರುವ ಅವರು, “ಸೋನಾಕ್ಷಿ – ಜಹೀರ್ ಮದುವೆ ಸ್ಪೆಷಲ್ ಮ್ಯಾರೇಜ್ ಆಕ್ಟ್ ಅಡಿಯಲ್ಲಿ ನಡೆಯಲಿದೆ. ಮದುವೆ ಬಳಿಕ ಸೋನಾಕ್ಷಿ ಇಸ್ಲಾಂಗೆ ಮತಾಂತರಗೊಳ್ಳುವುದಿಲ್ಲ. ಈ ಮದುವೆ ಹಿಂದೂ ಅಥವಾ ಮುಸ್ಲಿಂ ಆಚರಣೆಗಳನ್ನು ಹೊಂದಿರುವುದಿಲ್ಲ, ಇದೊಂದು ನಾಗರಿಕ ವಿವಾಹವಾಗಿರುತ್ತದೆ” ಎಂದಿದ್ದಾರೆ.
“ಈ ಮದುವೆ ಹೃದಯಗಳ ಒಕ್ಕೂಟದಿಂದ ನಡೆಯುತ್ತದೆ. ಇಲ್ಲಿ ಧರ್ಮಕ್ಕೆ ಯಾವುದೇ ಪಾತ್ರವಿಲ್ಲ. ನಾನು ಮಾನವೀಯತೆಯನ್ನು ನಂಬುತ್ತೇನೆ. ದೇವರನ್ನು ಹಿಂದೂಗಳು ಭಗವಾನ್ ಮತ್ತು ಮುಸ್ಲಿಮರು ಅಲ್ಲಾ ಎಂದು ಕರೆಯುತ್ತಾರೆ. ಆದರೆ ದಿನದ ಕೊನೆಯಲ್ಲಿ, ನಾವೆಲ್ಲರೂ ಮನುಷ್ಯರು. ನನ್ನ ಆಶೀರ್ವಾದ ಜಹೀರ್ ಮತ್ತು ಸೋನಾಕ್ಷಿ ಅವರ ಮೇಲಿದೆ” ಎಂದು ಅವರು ಹೇಳಿದ್ದಾರೆ.
ತಮ್ಮ ನೋಂದಾಯಿತ ವಿವಾಹದ ನಂತರ, ಸೋನಾಕ್ಷಿ ಮತ್ತು ಜಹೀರ್ ಮುಂಬೈನ ಬಾಸ್ಟಿಯನ್ನಲ್ಲಿ ಮದುವೆಯ ಆರತಕ್ಷತೆಯನ್ನು ಆಯೋಜಿಸಲಿದ್ದಾರೆ. ಸೋನಾಕ್ಷಿಯ ಪೋಷಕರಾದ ಶತ್ರುಘ್ನ ಸಿನ್ಹಾ ಮತ್ತು ಪೂನಂ ಸಿನ್ಹಾ ಕೂಡ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಲ್ಲದೆ ಸಲ್ಮಾನ್ ಖಾನ್, ಹುಮಾ ಖುರೇಷಿ ಸೇರಿದಂತೆ ಖ್ಯಾತ ಸೆಲೆಬ್ರಿಟಿಗಳು ಭಾಗಿಯಾಗುವ ಸಾಧ್ಯತೆಯಿದೆ.
ಕಳೆದ 7 ವರ್ಷಗಳಿಂದ ಸೋನಾಕ್ಷಿ – ಜಹೀರ್ ಡೇಟಿಂಗ್ ನಲ್ಲಿದ್ದರು.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.