ಗಾಯಕ ಸೋನು ನಿಗಮ್ ತಂಡದ ಮೇಲೆ ಹಲ್ಲೆಗೆ ಯತ್ನ: ಶಿವಸೇನೆ ಕಾರ್ಯಕ್ರಮದಲ್ಲಿ ಆಗಿದ್ದೇನು?
Team Udayavani, Feb 21, 2023, 10:50 AM IST
ಮುಂಬೈ: ಪ್ರಸಿದ್ದ ಗಾಯಕ ಸೋನು ನಿಗಮ್ ಮತ್ತು ತಂಡದ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಆರೋಪ ಕೇಳಿಬಂದಿದೆ. ಮುಂಬೈನ ಚೆಂಬೂರ್ ನಲ್ಲಿ ನಡೆದ ಕಾರ್ಯಕ್ರಮದ ವೇಲೆ ಅನುಚಿತ ವರ್ತನೆ ತೋರಲಾಗಿದೆ ಎಂದು ವರದಿ ತಿಳಿಸಿದೆ.
ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವೊಂದು ವೈರಲ್ ಆಗುತ್ತಿದ್ದು ಸೋನು ಅವರ ತಂಡದವರು ಎಂದು ಹೇಳಲಾದ ವ್ಯಕ್ತಿಯನ್ನು ವೇದಿಕೆಯಿಂದ ಕೆಳಕ್ಕೆ ತಳ್ಳಿರುವುದನ್ನು ತೋರಿಸುತ್ತದೆ.
ಶಿವಸೇನಾ (ಯುಬಿಟಿ) ನಾಯಕ ಪ್ರಕಾಶ್ ಫಾಟರ್ಪೇಕರ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೋನು ನಿಗಮ್ ಚೆಂಬೂರ್ ಗೆ ಬಂದಿದ್ದರು. ಅವರು ವೇದಿಕೆಯಿಂದ ಕೆಳಗೆ ಹೋಗುತ್ತಿದ್ದಾಗ ಕೆಲವರು ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.
“ಸೋನು ನಿಗಮ್ ವೇದಿಕೆಯಿಂದ ಕೆಳಗಿಳಿಯುತ್ತಿದ್ದಾಗ ಕೆಲವರು ಸೆಲ್ಫಿ ತೆಗೆದುಕೊಳ್ಳಲು ಮುಂದಾದರು, ಆ ಸಮಯದಲ್ಲಿ ಅಂಗರಕ್ಷಕರು ಆ ಜನರನ್ನು ತಳ್ಳಲು ಪ್ರಯತ್ನಿಸಿದರು, ಈ ವೇಳೆ ಅಕಸ್ಮಾತಾಗಿ ಸೋನು ನಿಗಮ್ ತಂಡದ ಒಬ್ಬ ವ್ಯಕ್ತಿಯನ್ನು ತಳ್ಳಲಾಯಿತು, ಅಪಾಯವೇನೂ ಆಗಿಲ್ಲ” ಎಂದು ಶಿವಸೇನೆ ನಾಯಕ ಪ್ರಕಾಶ್ ಫಾಟರ್ಪೇಕರ್ ಹೇಳಿದ್ದಾರೆ.
ಈತನ್ಮಧ್ಯೆ ಫಾಟರ್ಪೇಕರ್ ಅವರ ಮಗ ತಮ್ಮ ಮ್ಯಾನೇಜರ್ ನೊಂದಿಗೆ ಅನುಚಿತವಾಗಿ ವರ್ತಿಸಿ, ವೇದಿಕೆಯಿಂದ ಹೊರಹೋಗುವಂತೆ ಹೇಳಿದರು ಎಂದು ಸೋನು ನಿಗಮ್ ಅವರ ತಂಡವು ಆರೋಪಿಸಿದೆ.
“ಸೋನು ನಿಗಮ್ ಕಾರ್ಯಕ್ರಮ ಮುಗಿಸಿ ವೇದಿಕೆಯಿಂದ ಕೆಳಗೆ ಬರುತ್ತಿದ್ದಾಗ ಶಾಸಕರ ಪುತ್ರ ಮೊದಲು ಸೋನು ನಿಗಮ್ ಅವರ ಅಂಗರಕ್ಷಕ ಹರಿಯನ್ನು ತಳ್ಳಿ ನಂತರ ಸೋನು ಅವರನ್ನು ತಳ್ಳಿದ್ದಾರೆ. ಈ ವೇಳೆ ರಬ್ಬಾನಿ ಖಾನ್ ಕೂಡ ಇದ್ದರು. ಗಲಾಟೆಯಲ್ಲಿ ಅವರು ವೇದಿಕೆಯಿಂದ ಕೆಳಗೆ ಬಿದ್ದಿದ್ದಾರೆ. ಹಲವು ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚೆಂಬೂರಿನ ಝೆನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು” ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Japan ಆ್ಯನಿಮೇಟೆಡ್ ರಾಮಾಯಣ ಅ.18ಕ್ಕೆ ಮರು ಬಿಡುಗಡೆ
Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್ ಬಾಸ್ʼ ಖ್ಯಾತಿಯ ಅಬ್ದು ವಿವಾಹ
National Cinema Day: ಈ ದಿನ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.