Let’s fight this Virus Let’s kill this virus; ಚಿರು, ನಾಗಾರ್ಜುನ, ಧರ್ಮ, ವರುಣ್ ಹಾಡು

ಚಿರಂಜೀವಿ, ನಾಗಾರ್ಜುನ, ವರುಣ್ ತೇಜ ಮತ್ತು ಸಾಯಿ ಧರ್ಮ ಮತ್ತು ಕೋಟಿ ಅವರ ಈ ಪ್ರಯತ್ನಕ್ಕೆ ಭೇಷ್ ಎಂದ ಪ್ರಧಾನಿ ಮೋದಿ

Team Udayavani, Apr 5, 2020, 3:37 PM IST

Let’s fight this Virus Let’s kill this virus; ಚಿರು, ನಾಗಾರ್ಜುನ, ಧರ್ಮ, ವರುಣ್ ಹಾಡು

ನವದೆಹಲಿ: ವಿಶ್ವವನ್ನೇ ರಣರಂಗ ಮಾಡಿಕೊಂಡು ಮರಣ ಮೃದಂಗ ಬಾರಿಸುತ್ತಿರುವ ಕೋವಿಡ್ 19 ವೈರಸ್ ವಿರುದ್ಧ ಜನ ಜಾಗೃತಿಗಾಗಿ ವಿಶ್ವಾದ್ಯಂತ ಸರಕಾರಗಳು, ಸೆಲೆಬ್ರಿಟಿಗಳು, ವೈದ್ಯ ಸಮೂಹ, ಪೊಲೀಸರು, ಸಂಘ ಸಂಸ್ಥೆಗಳು ಹಲವಾರು ಜಾಗೃತಿ ಸಂದೇಶ, ವಿಡಿಯೋ, ಕಾರ್ಟೂನ್, ಚಿತ್ರಗಳನ್ನು ರಚಿಸುವ ಮೂಲಕ ಜನಸಾಮಾನ್ಯರಲ್ಲಿ ಈ ಮಾರಕ ವೈರಸ್ ಹರಡುವ ಕುರಿತಾದ ಜಾಗೃತಿಯನ್ನು ಮೂಡಿಸುತ್ತಿದ್ದಾರೆ.

ಇದೀಗ ಇದಕ್ಕೆ ಹೊಸ ಸೇರ್ಪಡೆಯೆಂಬಂತೆ ಭಾರತದಲ್ಲಿ ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ಗಳಾಗಿರುವ ಚಿರಂಜೀವಿ, ನಾಗಾರ್ಜುನ ಸೇರಿದಂತೆ ಇನ್ನೂ ಕೆಲವು ನಟರು ಸೇರಿಕೊಂಡು ‘ಕೋವಿಡ್ 19’ ಹಾಡೊಂದನ್ನು ತಯಾರಿಸಿದ್ದಾರೆ.

ಶ್ರೀನಿವಾಸ ಮೌಳಿ ಅವರು ಬರೆದು ಸಂಗೀತ ನಿರ್ದೇಶಕ ಕೋಟಿ ಸಂಯೋಜನೆ ಮಾಡಿ ಹಾಡಿರುವ ಮೂರು ನಿಮಿಷಗಳ ಈ ಹಾಡಿನಲ್ಲಿ ಕೋವಿಡ್ 19 ವೈರಸ್ ವಿರುದ್ಧ ಹೋರಾಡಲು ನಾವು ಏನು ಮಾಡಬೇಕೆಂಬುದನ್ನು ಮನಮುಟ್ಟುವ ರೀತಿಯಲ್ಲಿ ವಿವರಿಸಲಾಗಿದೆ. ಕೈಗಳನ್ನು ಸ್ವಚ್ಛ ಮಾಡುವ ವಿಧಾನ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ರೀತಿ ಮತ್ತು ಸೋಂಕಿನ ಲಕ್ಷಣಗಳಿದ್ದಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವ ಅಗತ್ಯತೆ ಹಾಗೂ ಐಸೊಲೇಷನ್ ಗೊಳಗಾಗುವುದು ಇತ್ಯಾದಿಗಳನ್ನು ಈ ಹಾಡಿನಲ್ಲಿ ಹೇಳಲಾಗಿದೆ.

ಕೋಟಿ ಅವರ ಧ್ವನಿಯಲ್ಲಿ ಮೂಡಿಬಂದಿರುವ ಈ ಹಾಡಿನಲ್ಲಿ ಲೆಟ್ಸ್ ಫೈಟ್ ದಿಸ್ ವೈರಸ್, ಲೆಟ್ಸ್ ಕಿಲ್ ದಿಸ್ ವೈರಸ್ – ಲೆಟ್ಸ್ ದೂ ಇಟ್ ಟುಗೆದರ್, ಲೆಟ್ಸ್ ಲಿವ್ ಹೆಲ್ದಿಯರ್ (ಈ ವೈರಸ್ ವಿರುದ್ಧ ಹೋರಾಡೋಣ, ಈ ವೈರಸ್ ನಾಶ ಮಾಡೋಣ ; ಇದನ್ನು ನಾವೆಲ್ಲರೂ ಜೊತೆಯಾಗಿಯೇ ಮಾಡೋಣ, ಎಲ್ಲರೂ ಆರೋಗ್ಯದಿಂದಿರೋಣ) ಎಂಬ ಸಾಲು ತುಂಬಾ ಪವರ್ ಫುಲ್ ಆಗಿ ಮೂಡಿಬಂದಿದೆ.

ವಿಶೇಷವೆಂದರೆ ಚಿರಂಜೀವಿ, ನಾಗಾರ್ಜುನ, ವರುಣ್ ತೇಜ್ ಮತ್ತು ಸಾಯಿ ಧರಮ್ ತೇಜ ಅವರೆಲ್ಲಾ ತಮ್ಮ ತಮ್ಮ ಮನೆಯಲ್ಲಿದ್ದುಕೊಂಡೇ ಈ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದಾರೆ.  ದಕ್ಷಿಣ ಭಾರತ ಚಿತ್ರರಂಗದಲ್ಲಿ ಕೋಟಿ ಎಂದೇ ಹೆಸರುವಾಸಿಯಾಗಿರುವ ಖ್ಯಾತ ಸಂಗೀತ ನಿರ್ದೇಶಕ ಸಾಲೂರಿ ಕೋಟೇಶ್ವರ ರಾವ್  ಅವರು ಈ ಹಾಡನ್ನು ಸಂಯೋಜನೆ ಮಾಡಿದ್ದಾರೆ. ನಟ ವರುಣ್ ತೇಜ್ ಅವರು ಚಿರಂಜೀವಿ ಅವರ ಸಹೋದರ ನಾಗೇಂದ್ರ ಬಾಬು ಅವರ ಪುತ್ರ ಮತ್ತು ಸಾಯಿ ಧರಮ್ ತೇಜ್ ಅವರು ಚಿರಂಜೀವಿ ಅವರ ಸಹೋದರಿಯ ಪುತ್ರನಾಗಿದ್ದಾರೆ.

ಇದೀಗ ಈ ಜಾಗೃತಿ ಹಾಡಿನ ವಿಡಿಯೋವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು. ಈ ನಟರ ಪ್ರಯತ್ನಕ್ಕೆ ಪ್ರಧಾನಿ ಮೋದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಮಾತ್ರವಲ್ಲದೇ ಈ ಪ್ರಯತ್ನಕ್ಕೆ ತೆಲುಗು ಭಾಷೆಯಲ್ಲೇ ತಮ್ಮ ಅಭಿನಂದನೆಗಳನ್ನು ಪ್ರಧಾನಿಯವರು ಸಲ್ಲಿಸಿರುವುದು ವಿಶೇಷವಾಗಿದೆ.

ನಟ ಚಿರಂಜೀವಿ ಅವರು ಈ ಹಾಡನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ ಮಾತ್ರವಲ್ಲದೇ ಇದೇ ರೀತಿಯ ಕ್ರಿಯೇಟಿವ್ ಯೋಚನೆಗಳ ಮೂಲಕ ಕೋವಿಡ್ 19 ವೈರಸ್ ವಿರುದ್ಧ ಜಾಗೃತಿ ಮೂಡಿಸುವಂತೆ ತಮ್ಮ ಅಭಿಮಾನಿಗಳಿಗೆ ಈ ನಟ ಕರೆ ಕೊಟ್ಟಿದ್ದಾರೆ.

ಮೆಗಾಸ್ಟಾರ್ ಚಿರಂಜೀವಿ ಅವರು ಕಳೆದ ವಾರವಷ್ಟೇ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಖಾತೆಯನ್ನು ತೆರೆದಿದ್ದರು. ಮತ್ತು ಮೊದಲ ಪೋಸ್ಟ್ ಆಗಿ ತಮ್ಮ ತಾಯಿಯ ಜೊತೆ ಇರುವ ಫೊಟೋವನ್ನು ಅಪ್ ಲೋಡ್ ಮಾಡಿದ್ದರು ಹಾಗೂ ಈ ಮೂಲಕ ಲಾಕ್ ಡೌನ್ ಸಂದರ್ಭದಲ್ಲಿ ನಾವೆಲ್ಲರೂ ನಮ್ಮ ಮನೆಯ ಹಿರಿಯರ ಕಾಳಜಿ ವಹಿಸುವುದು ಅಗತ್ಯ ಎಂಬ ಸಂದೇಶವನ್ನು ನೀಡಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.