ಠಾಕ್ರೆ ಚಿತ್ರದ ಟೀಸರ್‌ ಬಿಡುಗಡೆ


Team Udayavani, Dec 23, 2017, 12:19 PM IST

3-a.jpg

ಮುಂಬಯಿ: ಶಿವಸೇನೆ ಪ್ರಮುಖ ದಿ| ಬಾಳಾಸಾಹೇಬ್‌ ಠಾಕ್ರೆ ಅವರ ಜೀವನದ ಬಗ್ಗೆ ನಿರ್ಮಾಣವಾಗಲಿರುವ ಚಲನಚಿತ್ರ ಠಾಕ್ರೆ ಇದರ ಟೀಸರ್‌ ಮತ್ತು ಪೋಸ್ಟರ್‌ ಗುರುವಾರ ಬಿಡುಗಡೆಯಾಗಿದೆ.

ಗುರುವಾರ ಮುಂಬಯಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಲಿವುಡ್‌ ನಟ ಮೆಗಾಸ್ಟಾರ್‌ ಅಮಿತಾಭ್‌ ಬಚ್ಚನ್‌ ಅವರು ಶಿವಸೇನೆ ಅಧ್ಯಕ್ಷ ಉದ್ಧವ್‌ ಠಾಕ್ರೆ ಮತ್ತು  ಚಿತ್ರದ ನಿರ್ಮಾಪಕ ಸಂಸದ ಸಂಜಯ್‌ ರಾವುತ್‌ ಅವರ ಉಪಸ್ಥಿತಿಯಲ್ಲಿ ಚಿತ್ರದ ಟೀಸರ್‌  ಬಿಡುಗಡೆಗೊಳಿಸಿದರು.

ಈ ಚಿತ್ರವು 2019ರ ಜ.23ರಂದು ದೊಡ್ಡ ಪರದೆಯಲ್ಲಿ ಬಿಡುಗಡೆಯಾಗಲಿದೆ. ಶಿವಸೇನೆ ನಾಯಕ ಸಂಜಯ್‌ ರಾವುತ್‌ ಅವರು ಬರೆದ ಈ ಜೀವನಚರಿತ್ರೆಗೆ ಅಭಿಜಿತ್‌ ಪನ್ಸೆ ಅವರು ಆ್ಯಕ್ಷನ್‌ ಕಟ್‌ ಹೇಳಲಿದ್ದಾರೆ.  ಚಿತ್ರದಲ್ಲಿ ನಟ ನವಾಜುದ್ದೀನ್‌ ಸಿದ್ದೀಕಿ ಅವರು ಬಾಳಾಸಾಹೇಬ್‌ ಠಾಕ್ರೆ ಅವರ ಪಾತ್ರವನ್ನು ನಿರ್ವಹಿಸಲಿದ್ದಾರೆ. ನವಾಜುದ್ದೀನ್‌ ಅವರಿಗಿಂತ ಮೊದಲು ಈ ಪಾತ್ರಕ್ಕೆ ಅಕ್ಷಯ್‌ ಕುಮಾರ್‌ ಮತ್ತು ಇರ್ಫಾನ್‌ ಖಾನ್‌ ಅವರ ಹೆಸರು ಚರ್ಚೆಯಲ್ಲಿತ್ತು.

ಟೀಸರ್‌  ಬಿಡುಗಡೆಗೊಳಿಸಿದ ಬಳಿಕ ತಮ್ಮ ಭಾಷಣದಲ್ಲಿ ಬಾಳಾಸಾಹೇಬ್‌ ಠಾಕ್ರೆ ಅವರನ್ನು ನೆನಪಿಸಿದ ಅಮಿತಾಭ್‌ ಬಚ್ಚನ್‌ ಅವರು,  ಠಾಕ್ರೆ ಸಾಹೇಬ್‌  ಅವರು ಎಲ್ಲರ ಸಹಾಯಕ್ಕೆ ಸದಾ ಸಿದ್ಧರಾಗಿರುತ್ತಿದ್ದರು. ಕೂಲಿ ಚಿತ್ರದ ಚಿತ್ರೀಕರಣದ ಸಮಯದಲ್ಲಿ ನಾನು ಗಾಯಗೊಂಡಿದ್ದಾಗ, ಠಾಕ್ರೆ ಸಾಹೇಬ್‌ ಅವರು ನನಗೆ ಸಹಾಯ ಮಾಡಿದ್ದರು. ಅದೇ ರೀತಿ, ಬೊಫೋರ್ಸ್‌ ಪ್ರಕರಣದಲ್ಲಿ  ಹೆಸರು ಕೇಳಿಬಂದ ಅನಂತರವೂ ಅವರು ನನಗೆ ಸಹಾಯ ಮಾಡಿದ್ದರು ಎಂದರು.

ಕೇವಲ ಒಂದು ಚಿತ್ರದಲ್ಲಿ ಬಾಳಾಸಾಹೇಬ್‌ ಅವರ ಇಡೀ ಜೀವನವನ್ನು ತೋರಿಸಲು ಸಾಧ್ಯವಿಲ್ಲ. ಅದಕ್ಕೆ ಬದಲಿಗೆ, ಅವರ ಜೀವನದ ಇಡೀ ಸೀರೀಜ್‌ ಅನ್ನು  ನಿರ್ಮಾಣಮಾಡಬೇಕು ಎಂದು ಬಚ್ಚನ್‌ ಅವರು ಅಭಿಪ್ರಾಯಪಟ್ಟಿದ್ದಾರೆ.

ಇಂದು ಚಿತ್ರದ ಟೀಸರ್‌ ಬಿಡುಗಡೆ ಮಾಡಲಾಗಿದ್ದು, ಇದು ನನಗೆ ಮಹತ್ವದ ದಿನವಾಗಿದೆ. ಠಾಕ್ರೆ ಅವರಂತಹ ಮಹಾನ್‌ ವ್ಯಕ್ತಿತ್ವದ ಪಾತ್ರದಲ್ಲಿ ಕಾಣಿಸಿಕೊಳ್ಳಲು ಅವಕಾಶ ಸಿಕ್ಕಿರುವುದು ನನಗೆ ಸಂತಸ ತಂದಿದೆ. ನನ್ನ ಪ್ರಕಾರ ಯಾವುದೇ ನಟನು ಸಹ ಠಾಕ್ರೆ ಅವರ ಪಾತ್ರವನ್ನು ಒಪ್ಪಿಕೊಳ್ಳುತ್ತಾರೆ ಎಂದು ಟೀಸರ್‌ ಬಿಡುಗಡೆ ವೇಳೆ ನಟ ನವಾಜುದ್ದೀನ್‌ ಸಿದ್ದೀಕಿ ಅವರು ನುಡಿದಿದ್ದಾರೆ.

ಕೃತಜ್ಞತೆ ಸಲ್ಲಿಕೆ 
ನಾನು ಸಂಜಯ್‌ ರಾವುತ್‌, ಉದ್ಧವ್‌ ಠಾಕ್ರೆ, ಅಭಿಜಿತ್‌ ಹಾಗೂ ಚಿತ್ರದ ಟೀಸರ್‌ ಬಿಡುಗಡೆಗೊಳಿಸಿದ ಅಮಿತಾಭ್‌ ಸರ್‌ ಅವರಿಗೆ ಕೃತಜ್ಞರಾಗಿರುತ್ತೇನೆ. ಅಭಿಜಿತ್‌ ಮತ್ತು ನಾವು ಸೇರಿ ಈ  ಜೀವನಚರಿತ್ರೆಯನ್ನು ಉತ್ತುಂಗಕ್ಕೆ ಕೊಂಡೊಯ್ಯಲಿದ್ದೇವೆ ಎಂದು ಮಾರಿಷಸ್‌ನಲ್ಲಿ ಚಿತ್ರೀಕರಣದಲ್ಲಿ ನಿರತರಾಗಿರುವ ನವಾಜುದ್ದೀನ್‌ ಸಿದ್ದೀಕಿ ಅವರು ವೀಡಿಯೋ ಕಾನ್ಫರೆನ್ಸ್‌ ಮಾಡುವ ಮೂಲಕ ಸಂತಸದ ಮಾತನ್ನ ಹೇಳಿದ್ದಾರೆ.
 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.