![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 26, 2023, 5:17 PM IST
ಮುಂಬಯಿ: ʼದಿ ಕೇರಳ ಸ್ಟೋರಿʼ ದೇಶದಲ್ಲಿ ಸಂಚಲನ ಮೂಡಿಸಿದ್ದು ಗೊತ್ತೇ ಇದೆ. ಸಿನಿಮಾದ ಓಟಿಟಿ ರಿಲೀಸ್ ಬಗೆಗಿನ ವಿಚಾರ ಚರ್ಚೆಯಲ್ಲಿರುವಾಗಲೇ ಸಿನಿಮಾ ತಂಡ ಮತ್ತೊಂದು ಹೊಸ ಸಿನಿಮಾವನ್ನು ಅನೌನ್ಸ್ ಮಾಡಿದೆ.
ʼದಿ ಕೇರಳ ಸ್ಟೋರಿ ಕೇರಳದ ಹಿಂದು ಯುವತಿಯ ಕಥೆಯಾಗಿದ್ದು, ಮತಾಂತರ ಹಾಗೂ ಭಯೋತ್ಪಾದನೆಯ ವಿಚಾರವೂ ಸಿನಿಮಾದಲ್ಲಿತ್ತು. ಈ ಕಾರಣದಿಂದ ಸಿನಿಮಾಕ್ಕೆ ಕೆಲ ಕಡೆ ಭಾರೀ ವಿರೋಧ ವ್ಯಕ್ತವಾಗಿತ್ತು. ಕೆಲ ಕಡೆ ಬ್ಯಾನ್ ಹಾಗೂ ತಡೆ ನೀಡಲಾಗಿತ್ತು. ಈ ಎಲ್ಲ ಕಾರಣದಿಂದ ಚಿತ್ರ ತಂಡಕ್ಕೆ ಜೀವ ಬೆದರಿಕೆಯೂ ಬಂದಿತ್ತು.
ಇದೆಲ್ಲ ವಿವಾದದ ಬಳಿಕ ಇದೀಗ ‘ದಿ ಕೇರಳ ಸ್ಟೋರಿʼಯನ್ನು ನಿರ್ದೇಶನ ಮಾಡಿರುವ ಸುದೀಪ್ತೋ ಸೇನ್ ಹಾಗೂ ಸಿನಿಮಾವನ್ನು ನಿರ್ಮಾಣ ಮಾಡಿರುವ ವಿಪುಲ್ ಅಮೃತಲಾಲ್ ಶಾ ಇಬ್ಬರು ಜೊತೆಯಾಗಿ ಮತ್ತೊಂದು ಸಿನಿಮಾವನ್ನು ಮಾಡಲಿದ್ದಾರೆ. ಈ ಸಿನಿಮಾಕ್ಕೆ ʼಬಸ್ತಾರ್ʼ ಎಂದು ಟೈಟಲ್ ಇಡಲಾಗಿದೆ.
ಸನ್ ಶೈನ್ ಪಿಕ್ಚರ್ಸ್ ʼಬಸ್ತಾರ್ʼ ಸಿನಿಮಾದ ಪೋಸ್ಟರ್ ನ್ನು ಹಂಚಿಕೊಂಡಿದೆ. ಮತ್ತೊಂದು ಸತ್ಯ ಘಟನೆಗೆ ಸಾಕ್ಷಿಯಾಗಲು ಸಿದ್ಧರಾಗಿ. ನಿಮ್ಮ ಕ್ಯಾಲೆಂಡರ್ನಲ್ಲಿ ಏಪ್ರಿಲ್ 5, 2024 ರ ದಿನವನ್ನು ಗುರುತಾಗಿ ಇಟ್ಟುಕೊಳ್ಳಿ ಎಂದು ಪೋಸ್ಟರ್ ಹಂಚಿಕೊಂಡಿದೆ.
ಇದನ್ನೂ ಓದಿ: WATCH: ಪ್ರಿಯಕರ ಅರ್ಜುನ್ ಬರ್ತ್ ಡೇಗೆ ಮೈ ಚಳಿ ಬಿಟ್ಟು ಹಾಟ್ ಆಗಿ ಹೆಜ್ಜೆ ಹಾಕಿದ ಮಲೈಕಾ
ದಟ್ಟ ಕಾಡಿನಲ್ಲಿ ಹೋರಾಟದ ಪ್ರತೀಕದಂತೆ ಕೆಂಪು ಬಾವುಟವಿದೆ. ಅಲ್ಲೇ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಹಿನ್ನೆಲೆಯಲ್ಲಿ ಹೊಗೆಯಿರುವುದನ್ನು ಪೋಸ್ಟರ್ ನಲ್ಲಿ ತೋರಿಸಲಾಗಿದ್ದು, ಅದರ ಪಕ್ಕದಲ್ಲೇ ಗನ ಕೂಡ ಇದೆ.ʼʼಅಡಗಿದ ಸತ್ಯ ದೇಶದಲ್ಲಿ ಸಂಚಲನ ಮೂಡಿಸಲಿದೆ” ಪೋಸ್ಟರ್ ಮೇಲೆ ಬರೆಯಲಾಗಿದೆ. ಮೇಲ್ನೋಟಕ್ಕೆ ಇದು ನಕ್ಸಲ್ ಚಟುವಟಿಕೆ ಸುತ್ತ ಸಾಗುವ ಕಥೆಯಂತೆ ಕಾಣುತ್ತದೆ.
ʼಬಸ್ತಾರ್ʼ ಛತ್ತೀಸ್ಗಢ ರಾಜ್ಯದ ಒಂದು ಜಿಲ್ಲೆ ಆಗಿದೆ. ಬುಡಕಟ್ಟು ಜನಸಂಖ್ಯೆಗೆ ಈ ಜಿಲ್ಲೆ ಹೆಸರುವಾಸಿಯಾಗಿದೆ. ಇಲ್ಲಿನ ಬುಡಕಟ್ಟು ಜನ ಈಗಲೂ ಕೂಡ ಹೊರಗಿನವರ ಬಳಿ ಅಷ್ಟಾಗಿ ಸಂಪರ್ಕ ಸಾಧಿಸದೆ ದಟ್ಟ ಕಾಡಿನಲ್ಲೇ ವಾಸಿಸುತ್ತಿದ್ದಾರೆ.
ಸದ್ಯ ʼಬಸ್ತಾರ್ʼ ಸಿನಿಮಾದ ಕಥಾಹಂದರದ ಬಗ್ಗೆ ಚಿತ್ರತಂಡ ಹೆಚ್ಚಿನ ಮಾಹಿತಿಯನ್ನು ರಿವೀಲ್ ಮಾಡಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಚಿತ್ರತಂಡ ಮಾಹಿತಿಯನ್ನು ಹಂಚಿಕೊಳ್ಳಲಿದೆ.
Unveiling our next, #Bastar. Prepare to witness another gripping true incident that will leave you speechless. Mark your calendars for April 5, 2024!#VipulAmrutlalShah @sudiptoSENtlm @Aashin_A_Shah#SunshinePictures pic.twitter.com/3qQVxKpCcG
— Sunshine Pictures (@sunshinepicture) June 26, 2023
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.