ರೇಪ್‌ ಸೀನ್‌ಗಳು ನನಗೆ ಹೊಸತಲ್ಲ, ತ್ರಿಶಾಳೊಂದಿಗೆ ಬೆಡ್‌ ರೂಮ್..‌ ಟೀಕೆಗೆ ಒಳಗಾದ ಮನ್ಸೂರ್‌

ಇಂತಹ ಜನರು ಮನುಕುಲಕ್ಕೆ ಕೆಟ್ಟ ಹೆಸರು ತರುತ್ತಾರೆ ಎಂದ ತ್ರಿಶಾ

Team Udayavani, Nov 19, 2023, 12:30 PM IST

TDY-10

ಚೆನ್ನೈ: ಕೆಲವೊಮ್ಮೆ ಕಲಾವಿದರು ವಿನಃ ಕಾರಣ ವಿವಾದಾತ್ಮಕ ಹೇಳಿಕೆ ಟೀಕೆಗೆ ಒಳಗಾಗುತ್ತಾರೆ. ಕಾಲಿವುಡ್‌ ಸಿನಿಮಾರಂಗದ ಹಿರಿಯ ನಟರೊಬ್ಬರು ನಟಿಯ ಕುರಿತು ಅಸಭ್ಯವಾದ ಹೇಳಿಕೆ ನೀಡಿರುವುದು ವೈರಲ್‌ ಆಗಿದೆ.

ಲೋಕೇಶ್‌ ಕನಕರಾಜ್‌ ಅವರ ʼಲಿಯೋʼ ಸಿನಿಮಾ ಬಿಗ್‌ ಹಿಟ್‌ ಆಗಿದೆ. ದಳಪತಿ ವಿಜಯ್‌ ಹಾಗೂ ತ್ರಿಶಾ ಪ್ರಧಾನ ಪಾತ್ರದ ಸಿನಿಮಾದಲ್ಲಿ ಹಿರಿಯ ನಟ ಮನ್ಸೂರ್ ಅಲಿ ಖಾನ್ ಕೂಡ ನಟಿಸಿದ್ದಾರೆ. ಆದರೆ ಅವರ ಪಾತ್ರ ಸಿನಿಮಾದ ನಾಯಕಿ ತ್ರಿಶಾ ಅವರೊಂದಿಗೆ ಇಲ್ಲ. ಈ ಬಗ್ಗೆ ಇತ್ತೀಚೆಗೆ ನಟ ಮನ್ಸೂರ್‌ ಅಲಿ ಖಾನ್ ಮಾತನಾಡಿರುವ ವೇಳೆ ವಿವಾದಾತ್ಮಕ ಹೇಳಿಕೆಯೊಂದು ನೀಡಿ ಟೀಕೆಗೆ ಒಳಗಾಗಿದ್ದಾರೆ.

ಮನ್ಸೂರ್‌ ಹೇಳಿದ್ದೇನು?:

“ನಾನು ತ್ರಿಷಾ ಜೊತೆ ನಟಿಸುತ್ತಿದ್ದೇನೆ ಎಂದು ಕೇಳಿದಾಗ, ಸಿನಿಮಾದಲ್ಲಿ ಅವರೊಂದಿಗೆ ಬೆಡ್‌ ರೂಮ್‌ ಸೀನ್ ಇರುತ್ತದೆ ಅನ್ಕೊಂಡಿದ್ದೆ. ಅವಳನ್ನು ಎತ್ತಿಕೊಂಡು ಬೆಡ್‌ ರೂಮ್‌ ಗೆ ಹೋಗುವ ದೃಶ್ಯವಿದೆ ಅಂದುಕೊಂಡಿದ್ದೆ. ಈ ರೀತಿ ನಾನು ಈ ಹಿಂದಿನ ಸಿನಿಮಾದಲ್ಲಿ ಅನೇಕ ನಟಿಯರೊಂದಿಗೆ ಮಾಡಿದ್ದೇನೆ. ನಾನು ತುಂಬಾ ರೇಪ್‌ ಸೀನ್‌ ಗಳನ್ನು ಮಾಡಿದ್ದೇನೆ. ಇದೇನು ನನಗೆ ಹೊಸತಲ್ಲ. ಆದರೆ ಇವರು(ಚಿತ್ರತಂಡ) ನನಗೆ ಕಾಶ್ಮೀರದಲ್ಲಿ ಚಿತ್ರೀಕರಣವಾಗುವ ವೇಳೆ ಸೆಟ್‌ ನಲ್ಲಿ ತ್ರಿಶಾಳನ್ನು ತೋರಿಸಲೇ ಇಲ್ಲ” ಎಂದಿದ್ದಾರೆ.

ಮನ್ಸೂರ್‌ ಅವರು ಈ ರೀತಿಯ ಅಸಭ್ಯ ಹೇಳಿಕೆ ನೀಡಿದ ಕುರಿತು ಗರಂ ಆಗಿಯೇ ನಟಿ ತ್ರಿಶಾ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ್ದಾರೆ.

“ಮನ್ಸೂರ್ ಅಲಿ ಖಾನ್ ಅವರು ನನ್ನ ಬಗ್ಗೆ ಅಸಹ್ಯವಾಗಿ ಮಾತನಾಡಿರುವ ವೀಡಿಯೊ ಇತ್ತೀಚೆಗೆ ನನ್ನ ಗಮನಕ್ಕೆ ಬಂದಿದೆ. ನಾನು ಇದನ್ನು ಬಲವಾಗಿ ಖಂಡಿಸುತ್ತೇನೆ. ಈ ರೀತಿ ಲೈಂಗಿಕತೆ ಹಾಗೂ ಅಗೌರವದ ದೃಷ್ಟಿಕೋನದಲ್ಲಿ ಅವರು ಮಾತನಾಡಿದ್ದಾರೆ. ಅವರು ಮನಸ್ಸಿನಲ್ಲಿ ಯೋಚನೆ ಮಾಡುತ್ತಲೇ ಇರಲಿ. ಇಂಥ ವ್ಯಕ್ತಿಯೊಂದಿಗೆ ನಾನು ಜೀವನಮಾನವಿಡೀ ತೆರೆ ಹಂಚಿಕೊಳ್ಳುವುದಿಲ್ಲ.ಇಂತಹ ಜನರು ಮನುಕುಲಕ್ಕೆ ಕೆಟ್ಟ ಹೆಸರು ತರುತ್ತಾರೆ” ಎಂದು ನಟಿ ತ್ರಿಶಾ ಹೇಳಿದ್ದಾರೆ.

“ನಾವೆಲ್ಲರೂ ಒಂದೇ ತಂಡದಲ್ಲಿ ಕೆಲಸ ಮಾಡಿದ್ದೇವೆ. ಮನ್ಸೂರ್ ಅಲಿ ಖಾನ್ ಅವರ ಸ್ತ್ರಿ ನಿಂದನೆಯ ಕಮೆಂಟ್‌ ಗಳನ್ನು ಕೇಳಿ ಅಸಮಾಧಾನ ಮತ್ತು ಕೋಪಗೊಂಡಿದ್ದೇವೆ. ಯಾವುದೇ ಉದ್ಯಮವಿರಲಿ ಮಹಿಳೆಯರು, ಸಹ ಕಲಾವಿದರಿಗೆ ಗೌರವ ನೀಡಬೇಕು” ಎಂದು ಲೋಕೇಶ್‌ ಕನಕರಾಜ್‌  ಟ್ವೀಟ್‌ ಮಾಡಿದ್ದಾರೆ.

ಸದ್ಯ ತ್ರಿಶಾ ಪರ ಅರ್ಮಾನ್ ಮಲಿಕ್, ಖುಷ್ಬು ಸುಂದರ್, ಚಿನ್ಮಯಿ ಶ್ರೀಪಾದ ಮತ್ತು ಅವರ ಅಭಿಮಾನಿಗಳು ನಿಂತಿದ್ದು, ಮನ್ಸೂರು ಹೇಳಿಕೆಯನ್ನು ಖಂಡಿಸಿದ್ದಾರೆ.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

1

ವರ್ಷದ ಮೊದಲಾರ್ಧದಲ್ಲಿ 1081ಕೋಟಿ ರೂ.ಗಳಿಕೆ ಕಂಡ ಬಾಲಿವುಡ್: ಸೋತವರೆಷ್ಟು,ಗೆದ್ದವರೆಷ್ಟು?

samanta

Health illiterate; ‘ಆರೋಗ್ಯ ಅನಕ್ಷರಸ್ಥೆ’ ಎಂದ ವೈದ್ಯನಿಗೆ ನಟಿ ಸಮಂತಾ ತಿರುಗೇಟು

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

Bollywood: 8 ವರ್ಷದ ಬಳಿಕ ಬಾಲಿವುಡ್‌ಗೆ ಪಾಕ್‌ ನಟ‌ ಫವಾದ್‌ ಖಾನ್ ಕಂಬ್ಯಾಕ್

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

ಜಪಾನ್‌ನಲ್ಲಿ ರಿಲೀಸ್‌ ಆಗಲಿದೆ ʼಜವಾನ್‌ʼ: 4 ತಿಂಗಳ ಮೊದಲೇ ಅಡ್ವಾನ್ಸ್‌ ಬುಕಿಂಗ್‌ ಶುರು

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.