ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Team Udayavani, Apr 20, 2024, 1:16 PM IST
ಮುಂಬಯಿ: ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಹೆಸರಿನಲ್ಲಿ ಸಲ್ಮಾನ್ ಖಾನ್ ಮನೆಯಿಂದ ಕ್ಯಾಬ್ ಬುಕ್ ಮಾಡಿದ ಆರೋಪದಲ್ಲಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗೆ ನಟ ಸಲ್ಮಾನ್ ಖಾನ್ ಅವರ ನಿವಾಸದ ಬಳಿ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ವಿಕ್ಕಿ ಗುಪ್ತಾ (24) ಮತ್ತು ಸಾಗರ್ ಪಾಲ್ (21) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಘಟನೆ ಚರ್ಚೆಯಲ್ಲಿರುವಾಗಲೇ ಇದೀಗ ಲಾರೆನ್ಸ್ ಬಿಷ್ಣೋಯಿ ಹೆಸರಿನಲ್ಲಿ ಸಲ್ಮಾನ್ ಖಾನ್ ಮನೆಯಿಂದ ಕ್ಯಾಬ್ ಬುಕ್ ಮಾಡಿದ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಶುಕ್ರವಾರ(ಏ.19 ರಂದು) ಸಲ್ಮಾನ್ ಖಾನ್ ಅವರ ಗ್ಯಾಲಾಕ್ಸಿ ಅಪಾರ್ಟ್ಮೆಂಟ್ ಬಳಿ ಕ್ಯಾಬ್ ಡ್ರೈವರ್ ಬಂದು ಸೆಕ್ಯುರಿಟಿ ಬಳಿ ಲಾರೆನ್ಸ್ ಬಿಷ್ಣೋಯಿ ಎಲ್ಲಿದ್ದಾರೆ ಅವರು ಈ ವಿಳಾಸದಿಂದ ಕ್ಯಾಬ್ ಬುಕ್ ಮಾಡಿದ್ದಾರೆ ಎಂದು ಕೇಳಿದ್ದಾರೆ. ಇದನ್ನು ಕೇಳಿದ ಸೆಕ್ಯುರಿಟಿ ಗಾರ್ಡ್ ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದಾರೆ.
ಪೊಲೀಸರು ಕ್ಯಾಬ್ ಡ್ರೈವರ್ ನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಇದು ನಕಲಿ ಬುಕಿಂಗ್ ಎಂದು ಗೊತ್ತಾಗಿದೆ.
ಉತ್ತರ ಪ್ರದೇಶದ ಗಾಜಿಯಾಬಾದ್ ಮೂಲದ ರೋಹಿತ್ ತ್ಯಾಗಿ(20) ಎಂಬಾತ ಇದನ್ನು ಮಾಡಿರುವುದು ಗೊತ್ತಾಗಿದೆ.
ರೋಹಿತ್ ನನ್ನು ವಶಕ್ಕೆ ಪಡೆದ ಬಳಿಕ, ವಿಚಾರಣೆ ನಡೆಸಿದಾಗ ತಮಾಷೆ ಮಾಡಲು ಈ ರೀತಿ ಮಾಡಿರುವುದಾಗಿ ಆತ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಇದಾದ ಬಳಿಕ ಆತನನ್ನು ಮುಂಬೈಗೆ ಕರೆತರಲಾಗಿದ್ದು, ಇಲ್ಲಿ ಕೋರ್ಟ್ ಮುಂದೆ ಹಾಜರು ಪಡಿಸಿ, ಎರಡು ದಿನ ಬಾಂದ್ರಾ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಸದ್ಯ ಸಲ್ಮಾನ್ ಖಾನ್ ಭದ್ರತೆಯೊಂದಿಗೆ ದುಬೈಗೆ ತೆರಳಿದ್ದು, ಅಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್ಡಿಎ ಬದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.