![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, May 11, 2023, 3:58 PM IST
ಮುಂಬಯಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಒಂದಲ್ಲ ಒಂದು ಕಾರಣದಿಂದ ಸುದ್ದಿಯಲ್ಲಿರುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಬಗ್ಗೆ ಒಂದಲ್ಲ ಒಂದು ವಿಚಾರಕ್ಕೆ ಚರ್ಚೆ ನಡೆಯುತ್ತಲೇ ಇರುತ್ತದೆ.
ಅನೇಕ ಬಾರಿ ಕೆಲವೊಂದು ವಿಷಯಕ್ಕೆ ಟ್ರೋಲ್ ಆಗಿದ್ದಾರೆ. ಇದೀಗ ಮತ್ತೊಂದು ಕಾರಣಕ್ಕೆ ಅವರು ನೆಟ್ಟಿಗರ ಟ್ರೋಲ್ ಗೆ ಒಳಗಾಗಿದ್ದಾರೆ.
ʼಕಿರಿಕ್ ಪಾರ್ಟಿʼ ಬೆಡಗಿ ರಶ್ಮಿಕಾ ಮಂದಣ್ಣ ಹತ್ತಾರು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಜನಪ್ರಿಯ ಬರ್ಗರ್ ಬ್ರ್ಯಾಂಡ್ ಆಗಿರುವ ಮೆಕ್ಡೊನಾಲ್ಡ್ ಅವರ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಜಾಹೀರಾತಿನಲ್ಲಿ ಅವರು ಪ್ರೈಡ್ ಚಿಕನ್ ತಿಂದಿದ್ದಾರೆ. ಒಟ್ಟಿನಲ್ಲಿ ಈ ಜಾಹೀರಾತು ಮೆಕ್ಡೊನಾಲ್ಡ್ ಬ್ರ್ಯಾಂಡ್ ಪ್ರಚಾರದ ಜಾಹೀರಾತಾಗಿದೆ.
ಆದರೆ ಚಿಕನ್ ತಿಂದದ್ದಕ್ಕೆ ರಶ್ಮಿಕಾ ಟ್ರೋಲ್ ಗೆ ಒಳಾಗಿದ್ದಾರೆ. ಅದಕ್ಕೆ ಕಾರಣ ಅವರ ಹಿಂದಿನ ಒಂದು ಮಾತು. ಈ ಹಿಂದೆ ರಶ್ಮಿಕಾ ಅವರು ತಾನು ಸಸ್ಯಾಹಾರಿ ಮತ್ತು ಸಸ್ಯಾಹಾರಿಗಳನ್ನು ಬೆಂಬಲಿಸುತ್ತೇನೆ ಎಂದಿದ್ದರು. ಈ ಮಾತನ್ನು ಹೇಳಿಯೂ ಅವರು ಚಿಕನ್ ತಿನ್ನುವ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ.
“ಇಲ್ಲಿ ಸಸ್ಯಾಹಾರಿ ರಶ್ಮಿಕಾ ಪ್ರೈಡ್ ಚಿಕನ್ ತಿನ್ನುತ್ತಿದ್ದಾರೆ. ಖ್ಯಾತನಾಮರು ಮತ್ತು ಅವರ ಬೂಟಾಟಿಕೆ” ಎಂದು ಬರೆದಿದ್ದಾರೆ. “ನಾವು ಕನ್ನಡಿಗರು ಅವಳನ್ನು ಏಕೆ ಇಷ್ಟಪಡುವುದಿಲ್ಲ ಎಂದು ಈಗಾದರೂ ಅರ್ಥಮಾಡಿಕೊಳ್ಳಿ. ಏಕೆಂದರೆ ಅವಳು ತನ್ನ ಮಾತುಗಳನ್ನು ಅಲ್ಲಿ ಮತ್ತು ಇಲ್ಲಿ ಅನೇಕ ಬಾರಿ ಬದಲಾಯಿಸುತ್ತಾಳೆ” ಎಂದು ಪೋಸ್ಟ್ನಲ್ಲಿ ಕಮೆಂಟ್ ಮಾಡಿದ್ದಾರೆ.
“ಇದು ನಕಲಿ ಚಿಕನ್ ಆಗಿರಬಹುದು ಆದರೆ ಹೌದು ಸಸ್ಯಾಹಾರಿಯಾಗಿದ್ದುಕೊಂಡು ಅವಳು ಈ ಜಾಹೀರಾತನ್ನು ಮಾಡಬಾರದು ಎಂದು ಮತ್ತೊಬ್ಬರು ಹೇಳಿದ್ದಾರೆ.
ಸದ್ಯ ರಶ್ಮಿಕಾ ಸಂದೀಪ್ ರೆಡ್ಡಿ ವಂಗ ಅವರ ʼ ಆ್ಯನಿಮಲ್ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.