Pankaj Udhas: ಖ್ಯಾತ ಗಜಲ್‌ ಗಾಯಕ ಪಂಕಜ್‌ ಉದಾಸ್‌ ನಿಧನ


Team Udayavani, Feb 26, 2024, 5:29 PM IST

Pankaj Udhas: ಖ್ಯಾತ ಗಜಲ್‌ ಗಾಯಕ ಪಂಕಜ್‌ ಉದಾಸ್‌ ನಿಧನ

ಮುಂಬಯಿ: ಖ್ಯಾತ ಗಜಲ್‌  ಹಾಗೂ ಹಿನ್ನೆಲೆ ಗಾಯಕ ಪಂಕಜ್ ಉದಾಸ್‌(72) ಸೋಮವಾರ(ಫೆ.26 ರಂದು) ನಿಧನ ಹೊಂದಿದರು.

ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ಹೊಂದಿದ್ದಾರೆ ಎಂದು ಅವರ ತಂಡ ದೃಢಪಡಿಸಿದೆ. ಕಳೆದ ಕೆಲ ಸಮಯದಿಂದ ಪಂಕಜ್‌ ಅವರು ಅನಾರೋಗ್ಯದಲ್ಲಿ ಬಳಲುತ್ತಿದ್ದರು. ಅವರ ಆರೋಗ್ಯ ಸ್ಥಿತಿ ದಿನ ಕಳೆದಂತೆ ಹದಗೆಟ್ಟಿತು. ಇಂದು ಮುಂಜಾನ 11 ಗಂಟೆಗೆ ಅವರು ನಿಧನರಾದರು ಎಂದು ʼಇಂಡಿಯಾ ಟುಡೆʼ ಗೆ ಹೇಳಿದೆ.

ಅವರ ಪುತ್ರಿ ನಯಾಬ್ ಉದಾಸ್ ಅವರು ತಮ್ಮ ತಂದೆಯ ನಿಧನದ ಬಗ್ಗೆ ಇನ್ಸ್ಟಾಗ್ರಾಮ್‌ ನಲ್ಲಿ ಪೋಸ್ಟ್‌ ಮಾಡಿದ್ದಾರೆ. “ದೀರ್ಘಕಾಲದ ಅನಾರೋಗ್ಯದಿಂದ 26 ಫೆಬ್ರವರಿ 2024 ರಂದು ಪದ್ಮಶ್ರೀ ಪಂಕಜ್ ಉದಾಸ್ ಅವರು ಹೊಂದಿದರು. ಅವರ ನಿಧನದ ವಿಚಾರವನ್ನು ನಿಮಗೆ ತಿಳಿಸಲು ನಾವು ತುಂಬಾ ದುಃಖಿತರಾಗಿದ್ದೇವೆ” ಎಂದು ಅವರು ಪೋಸ್ಟ್‌ ನಲ್ಲಿ ತಿಳಿಸಿದ್ದಾರೆ.

ಮೇ 17, 1951 ರಂದು ಗುಜರಾತ್‌ನಲ್ಲಿ ಜನಿಸಿದ ಅವರು, ಚಿಕ್ಕ ವಯಸ್ಸಿನಲ್ಲೇ ಗಜಲ್‌ ಹಾಡುಗಳಿಗೆ ಪ್ರಭಾವಿತರಾದರು.1980 ಮತ್ತು 1990 ರ ದಶಕದಲ್ಲಿ ಅವರು ಗಜಲ್‌ ಹಾಡುಗಳಿಂದ ಜನಪ್ರಿಯತೆಯನ್ನು ಪಡೆದುಕೊಂಡರು.

1981ರಲ್ಲಿ ʼಮುಕರಾರ್ʼ, 1982ರಲ್ಲಿ ʼತರನ್ನಮ್ʼ, 1983ರಲ್ಲಿ ಮೆಹಫಿಲ್ ಆಲ್ಬಮ್‌ಗಳು ಅಪಾರ ಕೇಳುಗರನ್ನು ರಂಜಿಸಿತ್ತು.

1989 ರಲ್ಲಿ ಅವರು ‘ನಬೀಲ್’ ಎಂಬ ಆಲ್ಬಂ ಅನ್ನು ಬಿಡುಗಡೆ ದ್ದರು. ಇದು ಇವರ ಅತೀ ಹೆಚ್ಚು ಮಾರಾಟವಾದ ಆಲ್ಬಂಗಳಲ್ಲಿ ಒಂದಾಗಿದೆ. ಇದರ ಮೊದಲ ಕಾಪಿ ಹರಾಜಿನಲ್ಲಿ 1 ಲಕ್ಷಕ್ಕೆ ಮಾರಾಟವಾಗಿತ್ತು. ಇದರಲ್ಲಿ ಬಂದ ಹಣವನ್ನು ಅವರು ಕ್ಯಾನ್ಸರ್ ರೋಗಿಗಳ ಸಹಾಯ ಸಂಘಕ್ಕೆ ನೀಡಿದ್ದರು.

ಪಂಕಜ್ ಉದಾಸ್ ಹಲವಾರು ಆಲ್ಬಮ್‌ಗಳು ಮತ್ತು ಸಿಂಗಲ್‌ಗಳನ್ನು ಬಿಡುಗಡೆ ಮಾಡಿದ್ದರು. ‘ಚಿಟ್ಟಿ ಆಯಿ ಹೈ’, ‘ಔರ್ ಅಹಿಸ್ತಾ’ ,’ಜೀಯೇ ತೋ ಜೀಯೇ ಕೈಸೆ’ ಈ ಹಾಡುಗಳು ಎವರ್‌ ಗ್ರೀನ್‌ ಹಿಟ್‌ ಸಾಲಿಗೆ ಸೇರಿವೆ.  ಮಹೇಶ್‌ ಭಟ್‌ ಅವರ ʼನಾಮ್‌ʼ ಸಿನಿಮಾದ ಹಾಡನ್ನು ಹಾಡುವ ಮೂಲಕ ಹಿನ್ನೆಲೆ ಗಾಯಕರಾಗಿಯೂ ಗುರುತಿಸಿಕೊಂಡರು.

ಇನ್ನು ಕನ್ನಡದಲ್ಲೂ ಗಜಲ್‌ ಮೂಲಕ್‌ ಪಂಕಜ್‌ ಉದಾಸ್‌ ರಂಜಿಸಿದ್ದಾರೆ. ಕಿಚ್ಚ ಸುದೀಪ್‌ ಅವರ ʼಸ್ಪರ್ಶʼ ಸಿನಿಮಾದ ʼಚಂದಕ್ಕಿಂತ ಚಂದ..ʼ ಗಜಲ್‌ ಗೆ ಪಂಕಜ್‌ ದನಿಯಾಗಿದ್ದರು.

ಇವರ ಸಾಧನೆಗೆ  ಭಾರತ ಸರ್ಕಾರ 2006 ರಲ್ಲಿ ಇವರಿಗೆ ಪದ್ಮಶ್ರೀ ಗೌರವವನ್ನು ನೀಡಿತು. ಇವರ ಸಹೋದರರಾದ ನಿರ್ಮಲ್‌ ಉದಾಸ್‌, ಮನಹಾರ್‌ ಉದಾಸ್ ಕೂಡ ಗಾಯಕರಾಗಿದ್ದಾರೆ.

ಅವರ ನಿಧನಕ್ಕೆ ಬಿಟೌನ್‌ ಹಾಗೂ ಇತರೆ ಗಣ್ಯರು ಕಂಬನಿ ಮಿಡಿದಿದ್ದಾರೆ.

 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.