Kangana Ranaut ಕೆನ್ನೆಗೆ ಹೊಡೆದ CISF ಪೇದೆಗೆ ಉದ್ಯೋಗದ ಭರವಸೆ ನೀಡಿದ ವಿಶಾಲ್ ದದ್ಲಾನಿ
Team Udayavani, Jun 8, 2024, 10:09 AM IST
ಮುಂಬೈ: ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಟಿ, ಸಂಸದೆ ಕಂಗನಾ ರನೌತ್ಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಕಾನ್ಸ್ಟೆಬಲ್ಗೆ ಸಂಗೀತ ಸಂಯೋಜಕ ವಿಶಾಲ್ ದದ್ಲಾನಿ ಸಹಾಯ ಮಾಡಲು ಮುಂದಾಗಿದ್ದಾರೆ.
ವಿಶಾಲ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಸ್ಟೋರಿಯೊಂದನ್ನು ಹಂಚಿಕೊಂಡಿದ್ದು ಇದರಲ್ಲಿ ಸಂಸದೆ ಕಂಗನಾ ರಣಾವತ್ ಕೆನ್ನೆಗೆ ಬಾರಿಸಿ ಕೆಲಸ ಕಳೆದುಕೊಂಡ ಸಿಐಎಸ್ಎಫ್ ಕಾನ್ಸ್ಟೆಬಲ್ಗೆ ಉದ್ಯೋಗದ ಭರವಸೆಯನ್ನು ನೀಡುವ ಮೂಲಕ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.
ಜೂನ್ 6ರಂದು ಕಂಗನಾ, ಚಂಡೀಗಢ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಯ ನಂತರ ಬೋರ್ಡಿಂಗ್ ಪಾಯಿಂಟ್ಗೆ ತೆರಳುತ್ತಿದ್ದಾಗ, ಸಿಐಎಸ್ಎಫ್ ಕಾನ್ಸ್ಟೆಬಲ್ ಕುಲ್ವಿಂದರ್ ಕೌರ್ ಅವರು ಕಂಗನಾಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ವಿಚಾರವಾಗಿ ಕುಲ್ವಿಂದರ್ ಕೌರ್ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿತ್ತು ಅಲ್ಲದೆ ಕಪಾಳಮೋಕ್ಷ ಮಾಡಿರುವ ಕುರಿತು ಹೇಳಿಕೆ ನೀಡಿದ ಕುಲ್ವಿಂದರ್ ಕೌರ್ ರೈತರ ಪ್ರತಿಭಟನೆ ಕುರಿತು ಕಂಗನಾ ಅವಹೇಳನಕಾರಿಯಾಗಿ ಹೇಳಿಕೆಯನ್ನು ನೀಡಿದ್ದರು ನಾನು ಒಬ್ಬ ರೈತನ ಮಗಳು ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ ಕುಲ್ವಿಂದರ್ ಕೌರ್ ನಡೆಗೆ ಬಾರಿ ಬೆಂಬಲವು ವ್ಯಕ್ತವಾಗಿತ್ತು, ಈ ನಡುವೆ ವಿಶಾಲ್ ತಮ್ಮ ಇಸ್ಟಾಗ್ರಾಮ್ ಪೋಸ್ಟ್ ನಲ್ಲಿ ಕುಲ್ವಿಂದರ್ ಕೌರ್ ಗೆ ಉದ್ಯೋಗದ ಭರವಸೆ ನೀಡುವ ಮೂಲಕ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು ಅದರಲ್ಲಿ “ನಾನು ಎಂದಿಗೂ ಹಿಂಸೆಯನ್ನು ಬೆಂಬಲಿಸುವುದಿಲ್ಲ, ಆದರೆ ಸಂಸದೆ ಕೆನ್ನೆಗೆ ಬಾರಿಸಿದ ಸಿಬ್ಬಂದಿಯ ಕೋಪದ ಹಿಂದಿನ ಸತ್ಯವನ್ನು ನಾನು ಸಂಪೂರ್ಣವಾಗಿ ಅರ್ಥಮಾಡಿಕೊಂಡಿದ್ದೇನೆ. ಒಂದು ವೇಳೆ ಆಕೆಯ ಕೆಲಸದ ವಿಚಾರವಾಗಿ ಯಾವುದೇ ತೊಂದರೆ ಆದಲ್ಲಿ ಆಕೆಗೆ ಕೆಲಸದ ಭರವಸೆಯನ್ನು ನಾನು ನೀಡುತ್ತೇನೆ… ಜೈ ಹಿಂದ್. ಜೈ ಜವಾನ್. ಜೈ ಕಿಸಾನ್ ಎಂದು ಅವರು ಬರೆದಿದ್ದಾರೆ.
ಇದನ್ನೂ ಓದಿ: Modi ಪದಗ್ರಹಣ ಕಾರ್ಯಕ್ರಮಕ್ಕೆ ವಂದೇ ಭಾರತ್ ಲೋಕೋ ಪೈಲಟ್ ಐಶ್ವರ್ಯ ಮೆನನ್ ಗೆ ಆಹ್ವಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ ಬಿಗಿ ಪೊಲೀಸ್ ಭದ್ರತೆ
Telangana: ಉಪಮುಖ್ಯಮಂತ್ರಿ ಮನೆಯಲ್ಲಿ ಭಾರಿ ಕಳ್ಳತನ.. ಚಿನ್ನದ ಬಿಸ್ಕತ್ ಸೇರಿ ನಗನಗದು ಕಳವು
Tragedy: ಬೆಳ್ಳಂಬೆಳಗ್ಗೆ ಬಾಡಿಗೆ ಮನೆಯಲ್ಲಿ ನಾಲ್ವರು ಹೆಣ್ಣುಮಕ್ಕಳ ಜೊತೆ ತಂದೆಯ ಶವ ಪತ್ತೆ
Porsche Crash: ಆ ಒಂದು ಘಟನೆಯಿಂದ ಬಾಲಕನಿಗೆ ಯಾವುದೇ ಕಾಲೇಜಿನಲ್ಲಿ ಸೀಟು ಸಿಕ್ತಿಲ್ಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
ಭಾರತದಲ್ಲಿ ಪಾಕ್ ಸಿನಿಮಾ ದ ಲೆಜೆಂಡ್ ಆಫ್ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.