![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 28, 2022, 2:26 PM IST
ಲಾಸ್ ಏಂಜಲೀಸ್: ಆಸ್ಕರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಖ್ಯಾತ ಹಾಲಿವುಡ್ ನಟ ವಿಲ್ ಸ್ಮಿತ್ ವೇದಿಕೆ ಮೇಲೆ ಸಹನಟನಿಗೆ ಕಪಾಳ ಮೋಕ್ಷ ಮಾಡಿದ ವಿಲಕ್ಷಣ ಘಟನೆ ನಡೆದಿದೆ.
ನಟ ಹಾಗೂ ನಿರೂಪಕ ಕ್ರಿಸ್ ರಾಕ್ ಅವರಿಗೆ ವಿಲ್ ಸ್ಮಿತ್ ಪ್ರತಿಷ್ಠಿತ ವೇದಿಕೆಯಲ್ಲೇ ಕೆನ್ನೆಗೆ ಹೊಡೆದಿದ್ದಾರೆ. ವಿಲ್ ಸ್ಮಿತ್ ಅವರ ಪತ್ನಿಯನ್ನು ಕ್ರಿಸ್ ರಾಕ್ ತಮಾಷೆ ಮಾಡಿದ್ದಕ್ಕೆ ವಿಲ್ ಸ್ಮಿತ್ ಕಪಾಳಕ್ಕೆ ಹೊಡೆದಿದ್ದಾರೆ ಎಂದು ವರದಿಯಾಗಿದೆ. ಆಸ್ಕರ್ ವೇದಿಕೆಯ ಮೇಲೆ ಈ ಘಟನೆ ನಡೆದಿರುವುದಕ್ಕೆ ಆಯೋಜಕರು, ಪ್ರೇಕ್ಷಕರ ಕ್ಷಮೆ ಕೋರಿದ್ದಾರೆ.
ಆಗಿದ್ದೇನು?: ಆಸ್ಕರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನಿರೂಪಕ ಕ್ರಿಸ್ ರಾಕ್, ಹಾಲಿವುಡ್ ನಟ ವಿಲ್ ಸ್ಮಿತ್ ಪತ್ನಿ ಜಡಾ ಪಿಂಕೆಟ್ ಸ್ಮಿತ್ ಅವರ ಬೋಳು ತಲೆಯ ಬಗ್ಗೆ ತಮಾಷೆ ಮಾಡಿದ್ದು, ಈ ಎಲ್ಲಾ ಘಟನೆಗೆ ಕಾರಣವಾಗಿದೆ. “ಜಡಾ ನೀವು ಬೋಳು ತಲೆಯಲ್ಲಿ ನಟಿಸಿದ ಸಿನಿಮಾ ಜಿಐ ನೋಡಲು ನನಗೆ ಬಹಳ ಇಷ್ಟ” ಎಂದು ಕ್ರಿಸ್ ರಾಕ್ ತಮಾಷೆ ಮಾಡಿದ್ದಾರೆ. ಆದರೆ ಇದರಿಂದ ಕೋಪಗೊಂಡ ವಿಲ್ ಸ್ಮಿತ್ ವೇದಿಕೆಯ ಮೇಲೆ ಹೋಗಿ ಕ್ರಿಸ್ ರಾಕ್ ಕಪಾಳಕ್ಕೆ ಹೊಡೆದಿದ್ದಾರೆ. ‘ನನ್ನ ಹೆಂಡತಿಯ ಹೆಸರನ್ನು ನಿಮ್ಮ ಬಾಯಲ್ಲಿ ಹೇಳಬೇಡ’ ಎಂದು ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ:ರಕ್ತಸಿಕ್ತ ‘ಕೆಜಿಎಫ್’ ಸಾಮ್ರಾಜ್ಯದ ಹೊಸ ಅಧ್ಯಾಯ
ಈ ಘಟನೆಯಿಂದ ಸಭಾಂಗಣದಲ್ಲಿ ಸೇರಿದ್ದ ಜನರ ಗಲಿಬಿಲಿಗೊಂಡರು. ನಂತರ ಆಯೋಜಕರು ಸ್ಮಿತ್ ಜೊತೆ ಮಾತನಾಡಿದ ಪರಿಸ್ಥಿತಿಯನ್ನು ತಿಳಿಗೊಳಿಸಿದರು.
The Full Uncensored video of Will Smith’s altercation with Chris Rock at the #Oscars pic.twitter.com/cGQ3plSEiz
— Movies (@moreoffilms) March 28, 2022
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.