Kollywood: ತ್ರಿಶಾ ಕುರಿತು ಅಸಭ್ಯ ಹೇಳಿಕೆ; ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದ ಮನ್ಸೂರ್


Team Udayavani, Nov 21, 2023, 3:22 PM IST

Kollywood: ತ್ರಿಶಾ ಕುರಿತು ಅಸಭ್ಯ ಹೇಳಿಕೆ; ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದ ಮನ್ಸೂರ್

ಚೆನ್ನೈ: ನಟಿ ತ್ರಿಶಾ ಕುರಿತು ಅಸಭ್ಯವಾಗಿ ಹೇಳಿಕೆ ನೀಡಿರುವ ಕಾಲಿವುಡ್‌ ನಟ ಮನ್ಸೂರ್‌ ಅಲಿ ಖಾನ್‌ ಅವರ ಮೇಲೆ ನಾಡಿಗರ್ ಸಂಗಮ್ (ದಕ್ಷಿಣ ಭಾರತೀಯ ಕಲಾವಿದರ ಸಂಘ ) ತಾತ್ಕಾಲಿಕವಾಗಿ ನಿಷೇಧ ಹೇರಿದೆ.

ಮನ್ಸೂರ್‌ ಹೇಳಿದ್ದೇನು?: “ಲಿಯೋ ಸಿನಿಮಾದಲ್ಲಿ ನಾನು ತ್ರಿಷಾ ಜೊತೆ ನಟಿಸುತ್ತಿದ್ದೇನೆ ಎಂದು ಕೇಳಿದಾಗ, ಸಿನಿಮಾದಲ್ಲಿ ಅವರೊಂದಿಗೆ ಬೆಡ್‌ ರೂಮ್‌ ಸೀನ್ ಇರುತ್ತದೆ ಅನ್ಕೊಂಡಿದ್ದೆ. ಅವಳನ್ನು ಎತ್ತಿಕೊಂಡು ಬೆಡ್‌ ರೂಮ್‌ ಗೆ ಹೋಗುವ ದೃಶ್ಯವಿದೆ ಅಂದುಕೊಂಡಿದ್ದೆ. ಈ ರೀತಿ ನಾನು ಈ ಹಿಂದಿನ ಸಿನಿಮಾದಲ್ಲಿ ಅನೇಕ ನಟಿಯರೊಂದಿಗೆ ಮಾಡಿದ್ದೇನೆ. ನಾನು ತುಂಬಾ ರೇಪ್‌ ಸೀನ್‌ ಗಳನ್ನು ಮಾಡಿದ್ದೇನೆ. ಇದೇನು ನನಗೆ ಹೊಸತಲ್ಲ. ಆದರೆ ಇವರು(ಚಿತ್ರತಂಡ) ನನಗೆ ಕಾಶ್ಮೀರದಲ್ಲಿ ಚಿತ್ರೀಕರಣವಾಗುವ ವೇಳೆ ಸೆಟ್‌ ನಲ್ಲಿ ತ್ರಿಶಾಳನ್ನು ತೋರಿಸಲೇ ಇಲ್ಲ” ಎಂದಿದ್ದರು.

ಈ ಹೇಳಿಕೆಗೆ ಹಿರಿಯ – ಕಿರಿಯ ಕಲಾವಿದರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಅವರ ಹೇಳಿಕೆಯಿಂದಾಗಿ ಅವರನ್ನು ಸಿನಿಮಾದಿಂದ ತಾತ್ಕಾಲಿಕವಾಗಿ ನಾಡಿಗರ್ ಸಂಗಮ್ (ದಕ್ಷಿಣ ಭಾರತೀಯ ಕಲಾವಿದರ ಸಂಘ) ನಿಷೇಧಿಸಿದೆ.

ಇದಾದ ಬಳಿಕ ಪ್ರತಿಕಾಗೋಷ್ಠಿ ಕರೆದ ನಟ ಮನ್ಸೂರ್‌ ಆಲಿ ಖಾನ್‌ ತಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳುವುದಿಲ್ಲ ಎಂದಿದ್ದಾರೆ.

“ನನ್ನ ಮೇಲೆ ನಿಷೇಧ ಹೇರಿ ನಾಡಿಗರ್‌ ಸಂಗಮ್‌ ತಪ್ಪು ಮಾಡಿದೆ. ಈ ರೀತಿಯ ಸಮಸ್ಯೆ ಸಂಭವಿಸಿದಾಗ, ಅವರು ನನ್ನ ವಿವರಣೆಯನ್ನು ಸಹ ಕೇಳಲಿಲ್ಲ. ಅವರು ನನಗೆ ಕರೆ ಮಾಡಬಹುದಿತ್ತು ಅಥವಾ ವಿವರಣೆ ಕೇಳಲು ನೋಟಿಸ್ ನೀಡಬಹುದಿತ್ತು. ವಿಚಾರಣೆ ಮಾಡಬೇಕಿತ್ತು ಆದರೆ ಹಾಗೆ ಮಾಡದೆ, ಈ ರೀತಿ ನೇರವಾಗಿ ತಾತ್ಕಾಲಿಕವಾಗಿ ನಿಷೇಧ ಹೇರಿದ್ದಾರೆ” ಎಂದಿದ್ದಾರೆ.

“ನನ್ನ ಮೇಲಿರುವ ನಿಷೇಧವನ್ನು ಹಿಂಪಡೆಯಲು ನಾನು ನಾಲ್ಕು ಗಂಟೆಯ ಕಾಲಾವಕಾಶವನ್ನು ನೀಡುತ್ತೇನೆ. ನಾನು ಕ್ಷಮೆ ಕೇಳಿದರೆ ಮಾತ್ರ ನಿಷೇಧ ಹಿಂದಕ್ಕೆ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ. ನಾನು ಕ್ಷಮೆ ಕೇಳುವವರಂತೆ ಕಾಣುತ್ತಿದ್ದೇನೆಯೇ?” ಎಂದು ಪ್ರಶ್ನಿಸಿದ್ದಾರೆ.

“ವಧುವರರ ಚಿತ್ರಗಳಂತೆ ಕಾಣುವ ನಮ್ಮಿಬ್ಬರ ಫೋಟೋವನ್ನು ಅಕ್ಕಪಕ್ಕ ಹಾಕಿ ಮಾಧ್ಯಮದವರು ಪ್ರಕಟಿಸಿದ್ದಾರೆ. ನೀವೆಲ್ಲರೂ ನನ್ನ ಉತ್ತಮ ಫೋಟೋವನ್ನು ಬಳಸಬಹುದಲ್ಲವೇ? ಕೆಲವು ಚಿತ್ರಗಳಲ್ಲಿ, ನಾನು ಚೆನ್ನಾಗಿ ಕಾಣುತ್ತೇನೆ” ಎಂದಿದ್ದಾರೆ.

ಹೇಳಿಕೆಯನ್ನು ಸಮರ್ಥಿಸಿಕೊಂಡ ಅವರು, “ಸಿನಿಮಾದಲ್ಲಿ ಅತ್ಯಾಚಾರದ ದೃಶ್ಯ ಎಂದರೆ ಏನು? ನಿಜವಾಗಿಯೂ ಅತ್ಯಾಚಾರ ಮಾಡುವುದೇ?ಸಿನಿಮಾದಲ್ಲಿ ಕೊಲೆ ಎಂದರೆ ಏನು? ನಿಜವಾಗಿಯೂ ಕೊಲೆ ಮಾಡುವುದೇ?ನಿಮಗೆ ಸ್ವಲ್ಪ ಬುದ್ದಿ ಇರಬೇಕಲ್ಲವೇ? ನಾನು ಏನನ್ನೂ ತಪ್ಪಾಗಿ ಹೇಳಿಲ್ಲ. ನಾನು ಕ್ಷಮೆ ಕೇಳುವುದಿಲ್ಲ.” ಎಂದು ಹೇಳಿದ್ದಾರೆ.

 

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.