![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 5, 2021, 2:09 PM IST
ಮುಂಬೈ : ಗೋಲ್ಡನ್ ಸ್ಟಾರ್ ಗಣೇಶ್ ಅವರ “ಉಲ್ಲಾಸ ಉತ್ಸಾಹ” ಚಿತ್ರದ ನಟಿ ಯಾಮಿ ಗೌತಮ್ ಅವರು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಈ ವಿಚಾರವನ್ನು ಅವರು ಸೋಮವಾರ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಹೊಸ ಫೋಟೊ ಶೂಟ್ ದಲ್ಲಿ ಕಕಾಣಸಿಕೊಂಡಿರುವ ಯಾಮಿ ಅವುಗಳನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ. ಅವುಗಳ ಜೊತೆಗೆ ತಮಗಿರುವ ಚರ್ಮ ಸಂಬಂಧಿ ಕಾಯಿಲೆ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ.
ರಟೋಸಿಸ್ ಪಿಲಾರಸ್ ಎಂಬ ಚರ್ಮದ ಸಮಸ್ಯೆ ಯಾಮಿ ಗೌತಮ್ ಅವರನ್ನು ಕಾಡುತ್ತಿದೆ. ಇದೇನೂ ಗಂಭೀರ ಸಮಸ್ಯೆ ಅಲ್ಲ. ಆದರೆ, ಎಷ್ಟೇ ಪ್ರಯತ್ನಿಸಿದರೂ ಅವರಿಗೆ ಇದಕ್ಕೆ ಪರಿಹಾರ ಸಿಕ್ಕಿಲ್ಲ. ಚರ್ಮದ ಮೇಲ್ಭಾಗದಲ್ಲಿ ಚಿಕ್ಕ ಚಿಕ್ಕ ಗುಳ್ಳೆಗಳು ಆಗುತ್ತವೆ. ಈ ಗುಳ್ಳೆಗಳಿಂದ ಉರಿ, ತುರಿಕೆ, ನೋವು ಏನೂ ಇರುವುದಿಲ್ಲ. ಇದು ಕೆರಟೋಸಿಸ್ ಪಿಲಾರಸ್ ಲಕ್ಷಣ. ಹದಿಹರೆಯಲ್ಲಿ ಇದ್ದಾಗಲೇ ಯಾಮಿ ಗೌತಮ್ ಅವರಿಗೆ ಈ ಸಮಸ್ಯೆ ಕಾಣಿಸಿಕೊಂಡಿತು. ಅಂದಿನಿಂದ ಇದನ್ನು ಮುಚ್ಚಿಟ್ಟುಕೊಂಡೇ ಬಂದಿದ್ದ ಅವರು ಈಗ ಎಲ್ಲವನ್ನೂ ಬಹಿರಂಗಪಡಿಸಿದ್ದಾರೆ.
View this post on Instagram
‘ಇತ್ತೀಚೆಗೆ ಒಂದು ಫೋಟೋಶೂಟ್ ಮಾಡಲಾಯಿತು. ಸಾಮಾನ್ಯವಾಗಿ ನಮ್ಮ ಚರ್ಮದ ಸಮಸ್ಯೆಯನ್ನು ಮರೆಮಾಚುವ ಸಲುವಾಗಿ ಆ ಫೋಟೋಗಳನ್ನು ಪೋಸ್ಟ್ ಪ್ರೊಡಕ್ಷನ್ಗೆ ಕಳಿಸುತ್ತೇವೆ. ಆದರೆ ಈ ಬಾರಿ ಬೇರೆ ಆಲೋಚನೆ ಬಂತು. ನಾನೇಕೆ ಈ ಸಮಸ್ಯೆಯನ್ನು ಒಪ್ಪಿಕೊಳ್ಳಬಾರದು ಎನಿಸಿತು’ ಎಂದು ಯಾಮಿ ಗೌತಮ್ ಹೇಳಿಕೊಂಡಿದ್ದಾರೆ.
‘ಸತ್ಯವನ್ನು ನಿಮ್ಮೆದುರು ಒಪ್ಪಿಕೊಳ್ಳಲು ಧೈರ್ಯ ಮಾಡಿದ್ದೇನೆ. ನಾನು ಹದಿಹರೆಯದಲ್ಲಿ ಇರುವಾಗಲೇ ಈ ಸಮಸ್ಯೆ ಇರುವುದು ಗೊತ್ತಾಯಿತು. ಇನ್ನೂ ಇದು ವಾಸಿ ಆಗಿಲ್ಲ. ತುಂಬ ವರ್ಷಗಳಿಂದ ಇದನ್ನು ನಿಭಾಯಿಸುತ್ತಿದ್ದೇನೆ. ಆದರೆ ಇಂದು ನನ್ನ ನ್ಯೂನತೆಯನ್ನು ಒಪ್ಪಿಕೊಂಡು, ಭಯ ಮತ್ತು ಅಭದ್ರತೆಯನ್ನು ತೊಲಗಿಸುವ ಧೈರ್ಯ ಮಾಡಿದ್ದೇನೆ’ ಎಂದು ಯಾಮಿ ಗೌತಮ್ ಹೇಳಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.