ಸಿನಿಮಾವಾಗಿ ಬರಲಿದೆ ʼYuvraj Singhʼ ಕ್ರಿಕೆಟ್‌ ಜರ್ನಿ; ಖ್ಯಾತ ನಿರ್ಮಾಣ ಸಂಸ್ಥೆ ಸಾಥ್


Team Udayavani, Aug 20, 2024, 2:45 PM IST

ಸಿನಿಮಾವಾಗಿ ಬರಲಿದೆ  ʼYuvraj Singhʼ ಕ್ರಿಕೆಟ್‌ ಜರ್ನಿ; ಖ್ಯಾತ ನಿರ್ಮಾಣ ಸಂಸ್ಥೆ ಸಾಥ್

ಮುಂಬಯಿ: ಸಿನಿಮಾರಂಗದಲ್ಲಿ ಕ್ರಿಕೆಟ್‌ ದಿಗ್ಗಜರಾದ (Cricket) ಕಪಿಲ್ ದೇವ್, ಮಹೇಂದ್ರ ಸಿಂಗ್ ಧೋನಿ, ಸಚಿನ್ ತೆಂಡೂಲ್ಕರ್ ,ಅಜರುದ್ದೀನ್ ಅವರ ಜೀವನಗಾಥೆ ಆಧಾರಿತ ಸಿನಿಮಾಗಳು ಬಂದಿವೆ. ಸ್ಪೋರ್ಟ್ಸ್‌ ಡ್ರಾಮ ಸಿನಿಮಾಗಳು ಬಾಲಿವುಡ್‌ ಈ ಹಿಂದೆ ಸದ್ದು ಮಾಡಿವೆ.

ಇದೀಗ ಈ ಸಾಲಿಗೆ ಮತ್ತೊಬ್ಬ ದಿಗ್ಗಜ ಕ್ರಿಕೆಟಿಗ, ಟೀಮ್‌ ಇಂಡಿಯಾದ (Team India) ಮಾಜಿ ಆಟಗಾರ ಯುವರಾಜ್‌ ಸಿಂಗ್‌ (Yuvraj Singh) ಅವರ ಲೈಫ್‌ ಸ್ಟೋರಿ ಸಿನಿಮಾವಾಗಿ ಬರಲಿದೆ.

2007ರ ಟಿ-20 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ಬೌಲರ್‌ ಸ್ಟುವರ್ಟ್‌ ಬ್ರಾಡ್‌ ಅವರ ಓವರ್‌ನಲ್ಲಿ ಆರಕ್ಕೆ ಆರು ಸಿಕ್ಸರ್‌ ದಾಖಲಿಸಿದ್ದು, ಭಾರತ 2011ರ ಏಕದಿನ ವಿಶ್ವಕಪ್‌ ಗೆಲುವಿಗೆ ಪ್ರಧಾನ ಪಾತ್ರವಹಿಸಿದ ಯುವರಾಜ್‌ ಸಿಂಗ್‌ ಅವರನ್ನು ಕ್ರಿಕೆಟ್‌ ಅಭಿಮಾನಿಗಳು ಇಂದಿಗೂ ಮರೆತಿಲ್ಲ.

ಕ್ರಿಕೆಟ್‌ ಲೋಕದಲ್ಲಿ ಗೆದ್ದಿದ್ದ ಅವರು ಕ್ಯಾನ್ಸರ್‌ ಕಾಯಿಲೆಯನ್ನು ಮೆಟ್ಟಿನಿಂತೂ ಮತ್ತೆ ಕ್ರಿಕೆಟ್ರ ಲೋಕದಲ್ಲಿ ಅಬ್ಬರಿಸಿದ ರೀತಿ ಎಷ್ಟೋ ಮಂದಿಗೆ ಸ್ಪೂರ್ತಿದಾಯಕವಾಗಿದೆ. ಇಂತಹ ಅದ್ಭುತ ಪ್ರತಿಭೆಯ ಕಥೆ ಈಗ ಸಿನಿಮಾವಾಗಲು ಸಿದ್ದವಾಗಿದೆ.

ಇದರ ಮೊದಲ ಹಂತವಾಗಿ ಸಿನಿಮಾವನ್ನು ಅನೌನ್ಸ್‌ ಮಾಡಲಾಗಿದೆ. ಟೀ-ಸೀರಿಸ್(T-Series Films) ಬ್ಯಾನರ್‌ನಲ್ಲಿ ಭೂಷಣ್ ಕುಮಾರ್ (Bhushan Kumar) ಮತ್ತು ರವಿ ಭಾಗಚಂಡ್ಕ ಅವರು ಯುವರಾಜ್‌ ಸಿಂಗ್‌ ಬದುಕಿನ ಕುರಿತ ಸಿನಿಮಾವನ್ನು ನಿರ್ಮಾಣ ಮಾಡಲಿದ್ದಾರೆ.

ಯುವರಾಜ್‌ ಸಿಂಗ್‌ ಸಿಡಿಸಿದ 6  ಸಿಕ್ಸರ್‌ ಸೇರಿದಂತೆ ಅವರ ಕ್ರಿಕೆಟ್‌ ಜರ್ನಿಯಲ್ಲಿ ಸಾಗಿಬಂದ ಹಾದಿಯನ್ನು ಸಿನಿಮಾದಲ್ಲಿ ತೋರಿಸಲಾಗುತ್ತದೆ ಎಂದು ವರದಿ ಆಗಿದೆ. ಸದ್ಯ ತಾತ್ಕಾಲಿಕವಾಗಿ ಸಿನಿಮಾಕ್ಕೆ ʼಸಿಕ್ಸ್ ಸಿಕ್ಸಸ್ʼ ಎಂದು ಟೈಟಲ್‌ ಇಡಲಾಗಿದೆ.

ಸಿನಿಮಾದ ನಿರ್ದೇಶಕ, ಪ್ರಧಾನ ಪಾತ್ರ ಹಾಗೂ ಇತರೆ ಮಾಹಿತಿಗಳ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ.

ಟೀಮ್‌ ಇಂಡಿಯಾದ ಪರವಾಗಿ ಸುದೀರ್ಘವಾಗಿ ತನ್ನ ಆಟವನ್ನು ನೀಡಿದ ಯುವರಾಜ್‌ 2019ರಲ್ಲಿ ನಿವೃತ್ತಿ ಆದರು.

ಈ ಹಿಂದೆಯೇ ಯುವರಾಜ್‌ ಸಿಂಗ್‌ ಅವರ ಬಯೋಪಿಕ್‌ ಬಗ್ಗೆ ಮಾತುಕತೆ ನಡೆದಿತ್ತು. ಕರಣ್‌ ಜೋಹರ್‌ ಇಂಥದ್ದೊಂದು ಪ್ರಯತ್ನಕ್ಕೆ ಕೈಹಾಕಿದ್ದರು ಆದರೆ ಅದು ಸಾಧ್ಯವಾಗಿರಲಿಲ್ಲ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್‌ ಬಾಸ್‌ʼ ಖ್ಯಾತಿಯ ಅಬ್ದು ವಿವಾಹ

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

National Cinema Day: ಈ ದಿನ‌ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.