ನಿರ್ಭಯಾ ಪ್ರಕರಣದ Delhi Crime ವೆಬ್‌ ಸಿರೀಸ್‌ಗೆ “ಎಮ್ಮಿ ಬೆಸ್ಟ್‌ ಡ್ರಾಮಾ” ಪುರಸ್ಕಾರ


Team Udayavani, Nov 24, 2020, 3:40 PM IST

emmi award 2

ಮಣಿಪಾಲ: ನೆಟ್‌ಫ್ಲಿಕ್ಸ್‌ನಲ್ಲಿ ಹೆಸರು ಮಾಡಿದ್ದ ವೆಬ್ ಸರಣಿ “ದಿಲ್ಲಿ ಕ್ರೈಮ್ʼ 48ನೇ ಅಂತಾರಾಷ್ಟ್ರೀಯ ಎಮ್ಮಿ ಅವಾರ್ಡ್‌ ಪುರಸ್ಕಾರದಲ್ಲಿ “ಬೆಸ್ಟ್ ಡ್ರಾಮಾʼ ವಿಭಾಗಕ್ಕೆ ಆಯ್ಕೆಯಾಗಿದೆ. ಇದರೊಂದಿಗೆ ಭಾರತದಲ್ಲಿ ಎಮ್ಮಿ ಪ್ರಶಸ್ತಿ ಪಡೆದ ಮೊದಲ ವೆಬ್ ಸರಣಿ ಎಂಬ ಕೀರ್ತಿಗೆ ಭಾಜನವಾಗಿದೆ.

2012ರಲ್ಲಿ ದಿಲ್ಲಿಯಲ್ಲಿ ನಡೆದ ನಿರ್ಭಯಾ ಅತ್ಯಾಚಾರ ಪ್ರಕರಣದ ಕುರಿತಾಗಿರುವ ಈ ಸರಣಿಯನ್ನು ರಿಚೀ ಮೆಹ್ತಾ ನಿರ್ದೇಶಿಸಿದ್ದಾರೆ. ಇದರಲ್ಲಿ ಶೆಫಾಲಿ ಷಾ ಮುಖ್ಯ ಪಾತ್ರದಲ್ಲಿದ್ದು, ಪೊಲೀಸ್ ಉಪ ಆಯುಕ್ತರ ಪಾತ್ರವನ್ನು ನಿರ್ವಹಿಸಿದ್ದಾರೆ.

ಈ ವರ್ಷದ ಅಂತಾರಾಷ್ಟ್ರೀಯ ಎಮ್ಮಿ ಪ್ರಶಸ್ತಿಗೆ ಭಾರತದಿಂದ ಮೂರು ನಾಮನಿರ್ದೇಶನಗೊಳಿಸಲಾಗಿತ್ತು. ʼದಿಲ್ಲಿ ಕ್ರೈಂʼ ಹೊರತಾಗಿ ಅಮೆಜಾನ್ ಪ್ರೈಮ್ ವೀಡಿಯೋದ ವೆಬ್ ಸರಣಿ “ಮೇಡ್ ಇನ್ ಹೆವನ್ʼ ನಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಅರ್ಜುನ್ ಮಾಥುರ್ ಅವರನ್ನು ಎಮ್ಮಿ ಅತ್ಯುತ್ತಮ ನಟ ವಿಭಾಗಕ್ಕೆ ನಾಮನಿರ್ದೇಶನಗೊಳಿಸಲಾಗಿತ್ತು. ಆದರೆ ಈ ಪ್ರಶಸ್ತಿಯನ್ನು ಯುಕೆ ಟಿವಿ ಸರಣಿಯ “ರೆಸ್ಪಾನ್ಸಿಬಲ್ ಚೈಲ್ಡ್ʼ ನ ನಟ ಬಿಲ್ಲಿ ಬ್ಯಾರಟ್ ಅವರಿಗೆ ನೀಡಲಾಗಿದೆ.

ಪ್ರೈಮ್ ವೀಡಿಯೋದ “Four More Shots Pleaseʼ ಅನ್ನು ಭಾರತ ಅತ್ಯುತ್ತಮ ಹಾಸ್ಯ ಸರಣಿ ವಿಭಾಗಕ್ಕೆ ಸೂಚಿಸಿತ್ತು. ಆದರೆ ಈ ಪ್ರಶಸ್ತಿಯನ್ನು ಬ್ರೆಜಿಲ್‌ನ ಹಾಸ್ಯ ಸರಣಿ ನೋ-ಬಾಡಿ ಲುಕಿಂಗ್ (Ningmu Ta Olhando) ಗೆದ್ದುಕೊಂಡಿದೆ.

ಕೋವಿಡ್‌ ಹಿನ್ನೆಲೆಯಲ್ಲಿ ಈ ಪುರಸ್ಕಾರಗಳನ್ನು ಮೊದಲ ಬಾರಿ ಆನ್‌ಲೈನ್‌ನಲ್ಲಿ ಘೋಷಿಸಲಾಗಿದೆ. ನವೆಂಬರ್ 23 ರಂದು, ನ್ಯೂಯಾರ್ಕ್ ನಗರದ ಹ್ಯಾಮರ್‍ಸ್ಟೈನ್ ಬಾಲ್ ರೂಂನಿಂದ ನೇರ ಪ್ರಸಾರವಾದ ಈ ಪ್ರಶಸ್ತಿಗಳನ್ನು ರಿಚರ್ಡ್ ಕೈಂಡ್ ಆಯೋಜಿಸಿದ್ದರು.

ಟಿವಿ ಮತ್ತು ವೆಬ್ ಶೋ ಮತ್ತು ಕಲಾವಿದರನ್ನು ಗೌರವಿಸುವ ಸಲುವಾಗಿ 1973 ರಿಂದ ಪ್ರತಿ ವರ್ಷ ನವೆಂಬರ್‌ನಲ್ಲಿ ಈ ಪ್ರಶಸ್ತಿಗಳನ್ನು ಘೋಷಿಸಲಾಗುತ್ತದೆ. ಕಳೆದ ವರ್ಷ ಭಾರತದಿಂದ ಕೇವಲ ಒಂದು ನಾಮನಿರ್ದೇಶನಗೊಂಡಿತ್ತು. Lust Stories ಎಂಬ ಸರಣಿಯ ರಾಧಿಕಾ ಆಪ್ಟೆ ಅತ್ಯುತ್ತಮ ನಟಿ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.