51ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮೊದಲ ಬಾರಿಗೆ ಕನ್ನಡದ ನಟನಿಗೆ ಉದ್ಘಾಟನಾ ಗೌರವ


Team Udayavani, Jan 15, 2021, 10:18 PM IST

00

ಪಣಜಿ: ಶನಿವಾರದಿಂದ ಇಲ್ಲಿ ಆರಂಭಗೊಳ್ಳುತ್ತಿರುವ 51 ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು[ಇಫಿ] ಕನ್ನಡದ ನಟ ಸುದೀಪ್‌ ಸಂಜೀವ್‌ ಉದ್ಘಾಟಿಸುವರು.

ಜನವರಿ 16 ರಿಂದ 24 ರವರೆಗೆ ಚಿತ್ರೋತ್ಸವ ನಡೆಯಲಿದೆ. ಯಾವಾಗಲೂ ನವೆಂಬರ್‌ 20-28 ರವರೆಗೆ ನಡೆಸಲಾಗುತ್ತಿತ್ತು. ಆದರೆ, ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಉತ್ಸವವನ್ನು ಮುಂದೂಡಲಾಗಿತ್ತು.

ಲಭ್ಯ ಮಾಹಿತಿ ಪ್ರಕಾರ, ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವವನ್ನು [ಇಫಿ] ಉದ್ಘಾಟಿಸುವ ಗೌರವ ಕನ್ನಡದ ನಟರಿಗೆ ಸಿಗುತ್ತಿರುವುದು ಇದೇ ಮೊದಲು. ಈ ಹಿಂದೆ 1980 ರಲ್ಲಿ ಬೆಂಗಳೂರಿನಲ್ಲಿ ನಡೆದ ಚಿತ್ರೋತ್ಸವವನ್ನು ಬೆಂಗಳೂರಿನಲ್ಲಿ ನೆಲೆಯಾಗಿದ್ದ ಬಾಲಿವುಡ್‌ ನಟಿ ದೇವಿಕಾರಾಣಿ ಉದ್ಘಾಟಿಸಿದ್ದರು. ಆ ಬಳಿಕ 1992 ರಲ್ಲಿ ಬೆಂಗಳೂರಿನಲ್ಲಿ ನಡೆದ ಚಿತ್ರೋತ್ಸವವನ್ನು ಕನ್ನಡದ ಮೇರು ನಟ ಡಾ. ರಾಜಕುಮಾರ್‌ ಉದ್ಘಾಟಿಸಬೇಕಿತ್ತು. ಆದರೆ ಅದೇ ಸಂದರ್ಭದಲ್ಲಿ ಕಾವೇರಿ ವಿವಾದ ಭುಗಿಲೆದ್ದ ಕಾರಣ ಚಿತ್ರೋತ್ಸವದಲ್ಲಿ ಭಾಗವಹಿಸಿರಲಿಲ್ಲ.

ಯಾವಾಗಲೂ ಬಾಲಿವುಡ್‌ ನಟ-ನಟಿಯರನ್ನೇ ಈ ಗೌರವಕ್ಕೆ ಕರೆಯಲಾಗುತ್ತಿತ್ತು ಎಂಬ ಆಪಾದನೆಯನ್ನು ಚಿತ್ರೋತ್ಸವ ಇಲಾಖೆ ಎದುರಿಸುತ್ತಿತ್ತು.

ಉತ್ಸವವನ್ನು ನಟ ಸುದೀಪ್‌ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೇಂದ್ರ ವಾರ್ತಾ ಮತ್ತು ಪ್ರಚಾರ ಸಚಿವ ಪ್ರಕಾಶ್‌ ಜಾವೇಡಕರ್‌ ಪಾಲ್ಗೊಳ್ಳುವರು ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಗೋವಾದ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ತಿಳಿಸಿದರು.

ಒಟ್ಟು ಒಂಬತ್ತು ದಿನಗಳ ಚಿತ್ರೋತ್ಸವದಲ್ಲಿ ಸುಮಾರು  60 ದೇಶಗಳ 224 ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ. ಜೀವಮಾನ ಸಾಧನೆ ಪ್ರಶಸ್ತಿಯನ್ನು ಇಟಲಿಯ ಸಿನೆಛಾಯಾಗ್ರಾಹಕ ವಿಟೋರಿಯಾ ಸ್ಟೊರೇರಾ ಅವರಿಗೆ ನೀಡಿ ಗೌರವಿಸಲಾಗುತ್ತಿದೆ. ಉದ್ಘಾಟನಾ ಸಮಾರಂಭವು ಡಾ. ಶಾಮಪ್ರಸಾದ ಮುಖರ್ಜಿ ಸ್ಟೇಡಿಯಂನಲ್ಲಿ ಶನಿವಾರ ನಡೆಯಲಿದೆ. ಚಿತ್ರೋತ್ಸವದ ಉದ್ಘಾಟನಾ ಚಿತ್ರವಾಗಿ ಡ್ಯಾನಿಷ್‌ ಚಿತ್ರ ನಿರ್ದೇಶಕ ಥಾಮಸ್‌ ವಿಂಟರ್‌ ಬರ್ಗ್‌ನ ‘ಅನದರ್‌ ರೌಂಡ್‌’ ಪ್ರದರ್ಶನಗೊಳ್ಳುತ್ತಿದ್ದು, ಸಮಾರೋಪ ಚಿತ್ರವಾಗಿ ಜಪಾನಿನ ಕಿಯೋಶಿ ಕುರಸೋವಾನ ‘ವೈಫ್‌ ಆಫ್‌ ಎ ಸ್ಪೈ’ ಪ್ರದರ್ಶನಗೊಳ್ಳಲಿದೆ.

ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಚಲನಚಿತ್ರೋತ್ಸವ ಹೈಬ್ರಿಡ್‌ ರೂಪದಲ್ಲಿರಲಿದ್ದು, ಸಿನಿಮಾ ಥಿಯೇಟರ್‌ಗಳಲ್ಲದೇ, ಆನ್‌ ಲೈನ್‌ ನೋಂದಣಿ [ವರ್ಚುವಲ್‌] ಮೂಲಕವೂ ಸಿನೆಮಾ ವೀಕ್ಷಿಸಬಹುದು.

ಕನ್ನಡದ ಪಿಂಕಿ ಎಲ್ಲಿ? :

ಕಂಟ್ರಿ ಫೋಕಸ್‌ ವಿಭಾಗದಡಿ ಬಾಂಗ್ಲಾದೇಶದ ಚಲನಚಿತ್ರಗಳನ್ನು ಪ್ರದರ್ಶಿಸಲಾಗುತ್ತಿದೆ. ಇದರೊಂದಿಗೆ ಭಾರತೀಯ ಪನೋರಮಾ ವಿಭಾಗದಡಿ ಪ್ರದರ್ಶಿತಗೊಳ್ಳುತ್ತಿರುವ 23 ಕಥಾ ವಿಭಾಗದ ಚಿತ್ರಗಳಲ್ಲಿ ಕನ್ನಡದ ಪಿಂಕಿ ಎಲ್ಲಿ ? [ನಿರ್ದೇಶನ : ಪೃಥ್ವಿ ಕೊಣನೂರು] ಪ್ರದರ್ಶನಗೊಳ್ಳಲಿದೆ. ಸಾಂದ್‌ ಕಿ ಆಂಖ್‌ [ಹಿಂದಿ] ಚಲನಚಿತ್ರ ಈ ವಿಭಾಗದ ಉದ್ಘಾಟನಾ ಚಿತ್ರವಾಗಿರಲಿದೆ

prithvi konanur (@PrithviKonanur) | Twitter

ಚಿತ್ರೋತ್ಸವಕ್ಕೆ ಗೋವಾದ ಪಣಜಿ ನಗರ ಸಿದ್ಧವಾಗಿದ್ದು, ಅಂತಿಮ ಹಂತದ ಸಿದ್ಧತೆ ಭರದಿಂದ ಸಾಗುತ್ತಿದೆ. ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಪ್ರತಿನಿಧಿಗಳ ಸಂಖ್ಯೆ ಕಡಿಮೆಯಾಗುವ ಸಂಭವವಿದೆ. ಹಾಗಾಗಿ ಆನ್‌ ಲೈನ್‌ ಮೂಲಕ ಪ್ರದರ್ಶನಕ್ಕೂ ಅವಕಾಶ ಕಲ್ಪಿಸಲಾಗಿದೆ. ಕಳೆದ ವರ್ಷ ಚಿತ್ರೋತ್ಸವದ ಸುವರ್ಣ ವರ್ಷದ ಸಂಭ್ರಮವಾಗಿತ್ತು. ಸುಮಾರು 10 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

Bollywood: ವಿಕ್ಕಿ ಕೌಶಲ್‌ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?

Ajay Devgn lends his voice to ‘Chhaava’

Chhaava: ‘ಚಾವಾ’ಗೆ ಧ್ವನಿಯಾದ ಅಜಯ್‌ ದೇವಗನ್‌

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ

Mamata-Kulakarni

Spiritual journey: ಕಿನ್ನರ್‌ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.