ಸಿನಿಮಾ ರಂಗದಿಂದಲೇ ನಾನು ಚಿರಂಜೀವಿ: ಇಫಿಯಲ್ಲಿ ಚಿರಂಜೀವಿ ಭಾವುಕ

ಕಥಾವಸ್ತು, ವಿಷಯದತ್ತಲೇ ಮತ್ತೆ ಸಿನಿಮಾ ರಂಗ : ಹೀಗೆ ಮುನ್ನಡೆಯಲಿ ಎಂದ ರಾಣಾ ದಗ್ಗುಬಾಟಿ

Team Udayavani, Nov 28, 2022, 7:09 PM IST

1-daadad

Chiranjeevi, cinema, Chiranjeevi, emotional

ಪಣಜಿ: ’ಸಿನಿಮಾ ರಂಗ ನನ್ನನ್ನು ಚಿರಂಜೀವಿಯಾಗಿಸಿದೆ’ ಎಂದವರು ತೆಲುಗಿನ ಖ್ಯಾತ ಹಿರಿಯ ನಟ ಚಿರಂಜೀವಿ.

ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವದ (ಇಫಿ) 53ನೇ ಆವೃತ್ತಿಯ ಸಮಾರೋಪ ಸಮಾರಂಭದಲ್ಲಿ ಸೋಮವಾರ ಭಾರತೀಯ ಚಿತ್ರರಂಗ ವರ್ಷದ ವ್ಯಕ್ತಿ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

‘ಇದೊಂದು ಆತ್ಮೀಯ ಘಳಿಗೆ. ನಾನೊಬ್ಬ ಮಧ್ಯಮ ವರ್ಗದ ಕುಟುಂಬದಿಂದ ಬಂದವನು. ಸಿನಿಮಾ ರಂಗ ನನಗೆ ಎಲ್ಲವನ್ನೂ ಕೊಟ್ಟಿದೆ. ಪ್ರಸಿದ್ಧಿ, ಗೌರವ, ಬದುಕು ಎಲ್ಲವೂ ಅದರಿಂದ ಸಿಕ್ಕಿದೆ. ಸಿನಿಮಾ ರಂಗ ಹಾಗೂ ಅಭಿಮಾನಿಗಳು ನನ್ನನ್ನು ’ಚಿರಂಜೀವಿ’ಯಾಗಿಸಿದ್ದಾರೆ. ಇದಕ್ಕಾಗಿ ವಂದನೆಗಳು’ ಎಂದು ಭಾವುಕರಾಗಿ ನುಡಿದರು.

‘ನಾಲ್ಕು ದಶಕಗಳಿಂದ ಚಿತ್ರರಂಗದಲ್ಲಿದ್ದೆ. ಒಂದು ದಶಕ ರಾಜಕೀಯದಲ್ಲಿದ್ದು ಪ್ರೇಕ್ಷಕರೊಂದಿಗಿನ ಸಂಬಂಧ ಕಳೆದುಕೊಂಡಿದ್ದೆ. ಆಮೇಲೆ ವಾಪಸು ಚಿತ್ರರಂಗಕ್ಕೆ ಬಂದಾಗ ಅಭಿಮಾನಿಗಳು ಅಭೂತಪೂರ್ವವಾಗಿ ಸ್ವಾಗತಿಸಿದ ರೀತಿ ನನ್ನನ್ನು ಮೂಕ ವಿಸ್ಮಿತನಾಗಿಸಿತ್ತು. ಆಗ ಒಂದು ದಶಕ ನಾನೇ ಅಭಿಮಾನಿಗಳೊಂದಿಗೆ ಬಾಂಧವ್ಯ ಕಳೆದುಕೊಂಡಿದ್ದೆ. ಅವರಲ್ಲ ಎಂಬುದು ಅರ್ಥವಾಯಿತು. ಜತೆಗೆ ಸಿನಿಮಾ ಕ್ಷೇತ್ರದ ಮಹತ್ವ ಅರಿವಾಯಿತು. ಇದೊಂದು ಅದ್ಭುತವಾದ ಕ್ಷೇತ್ರ . ಇನ್ನೆಂದೂ ಇದರಿಂದ ದೂರ ಹೋಗಲಾರೆ’ ಎಂದು ಹೇಳಿದರು.

‘ಸಿನಿಮಾ ಭ್ರಷ್ಟಾಚಾರ ರಹಿತ ಕ್ಷೇತ್ರ. ನಿಮಗೆ ಪ್ರತಿಭೆಯಿದ್ದರೆ ಪ್ರದರ್ಶಿಸಲು ಅತ್ಯುತ್ತಮ ವೇದಿಕೆ. ಯಾವ ಮಟ್ಟಕ್ಕಾದರೂ ಮುಟ್ಟಬಹುದು. ಅವಕಾಶಗಳು ಮುಕ್ತವಾಗಿರುತ್ತವೆ’ ಎಂದರು.

‘ರಾಜಕೀಯ ಕ್ಷೇತ್ರದ ಕುರಿತು ಮತ್ತೊಮ್ಮೆ ಗಮನಹರಿಸಿ’ ಎಂಬ ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಅವರ ಮನವಿಗೆ ‘ಆ ಕುರಿತು ಆಮೇಲೆ ಮಾತನಾಡೋಣ’ ಎಂದು ಮುಗುಳ್ನಕ್ಕು ಉತ್ತರಿಸಿದರು. ತೆಲುಗಿನಲ್ಲಿ ಮಾತನಾಡಿದ್ದು ವಿಶೇಷವಾಗಿತ್ತು.

ಕಥಾವಸ್ತು, ವಿಷಯದತ್ತಲೇ ಮತ್ತೆ ಸಿನಿಮಾ ರಂಗ

‘ಕಥಾವಸ್ತು, ವಿಷಯದತ್ತಲೇ ಮತ್ತೆ ಸಿನಿಮಾ ರಂಗ ಸಾಗತೊಡಗಿದೆ. ಇದೊಂದು ಒಳ್ಳೆಯ ಬೆಳವಣಿಗೆ. ಚಿತ್ರೋತ್ಸವಗಳು ಸದಾ ಸಿನಿಮಾ ರಂಗದ ಸ್ವತಂತ್ರ ಧ್ವನಿಗಳಿಗೆ ವೇದಿಕೆ ಕಲ್ಪಿಸುತ್ತಿದೆ. ಇದು ಹೀಗೆ ಮುನ್ನಡೆಯಲಿ’ ಎಂದರು ಮತ್ತೊಬ್ಬ ತೆಲುಗಿನ ನಟ ರಾಣಾ ದಗ್ಗುಬಾಟಿ.

ಸಿನಿಮಾವಲ್ಲದೇ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದೀರಿ. ಯಾವುದು ನಿಮಗೆ ಬಹಳ ಇಷ್ಟವೆಂಬ ಪ್ರಶ್ನೆಗೆ, ‘ನಾನು ಯಾವುದನ್ನೇ ತೆಗೆದುಕೊಳ್ಳಲಿ. ಅದನ್ನು ಖುಷಿಯಿಂದ ಮಾಡುವೆ. ಹಾಗಾಗಿ ಅದು ಮುಖ್ಯ, ಇದು ಅಮುಖ್ಯ ಎಂಬುದಿಲ್ಲ’ ಎಂದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-tudar

Movie: ತುಡರ್ ಸಿನಿಮಾ ತುಳು ಚಿತ್ರರಂಗಕ್ಕೆ ಹೊಸ ಬೆಳಕಾಗಿ ಮೂಡಿಬರಲಿ; ಗಣೇಶ್ ರಾವ್

chef chidambara kannada movie

Chef Chidambara: ಅನಿರುದ್ಧ್ ಅಡುಗೆ ಶುರು

tdy-7

Bollywood: ರಿಮೇಕ್‌ ಆಗಿ ಮತ್ತೆ ತೆರೆಗೆ ಬರಲಿದೆ 70ರ ದಶಕದ ಮೂರು ಹಿಟ್‌ ಸಿನಿಮಾಗಳು

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

ಕಾಶ್ಮೀರ್ ಫೈಲ್ಸ್ ಅಸಭ್ಯ ಚಿತ್ರ ಎಂದು ನಡಾವ್ ಗೆ ನಾಚಿಕೆಯಾಗಬೇಕು…ಇಸ್ರೇಲ್ ರಾಯಭಾರಿ ಆಕ್ರೋಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.