Bembidada Naavika Movie Review; ಸೈಬರ್‌ ಸುಳಿಯೊಳಗೆ ಸಿಲುಕಿದ ಬದುಕು


Team Udayavani, Nov 19, 2023, 2:10 PM IST

bembidada naavika movie review

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳನ್ನು ಬಳಸುವವರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಇಂಟರ್‌ನೆಟ್‌ನಿಂದ ಉಪಯೋಗ ಪಡೆದುಕೊಳ್ಳುವವರು ಒಂದೆಡೆಯಾದರೆ, ಅದನ್ನು ದುರುಪಯೋಗ ಪಡಿಸಿಕೊಳ್ಳುವವರು ಮತ್ತೂಂದೆಡೆ. ದೈನಂದಿನ ಜೀವನದಲ್ಲಿ ಹಾಸುಹೊಕ್ಕಾಗಿರುವ ಇಂಟರ್‌ನೆಟ್‌ ಮತ್ತು ಸಾಮಾಜಿಕ ಜಾಲತಾಣಗಳಿಗೆ ಎಷ್ಟು ಮಹತ್ವ ಕೊಡಬೇಕು ಎಂಬುದನ್ನು ತೆರೆಮೇಲೆ ಹೇಳಿರುವ ಸಿನಿಮಾವೇ ಈ ವಾರ ತೆರೆಗೆ ಬಂದಿರುವ “ಬೆಂಬಿಡದ ನಾವಿಕ’

ಸೋಶಿಯಲ್‌ ಮೀಡಿಯಾದಲ್ಲಿ “ಇನ್‌ ಫ್ಲುಯೆನ್ಸರ್‌’ ಆಗಿ ಗುರುತಿಸಿಕೊಂಡಿರುವ ಮಹತ್ವಕಾಂಕ್ಷಿ ಆರ್ಯನ್‌ಗೆ ಇಂಟರ್ನೆಟ್‌ ಮೂಲಕ ಬರುವ ಒಂದಷ್ಟು ಸಂಕಷ್ಟಗಳು ಎದುರಾಗುತ್ತವೆ. ನೋಡುತ್ತಿದ್ದಂತೆ ಆ ಹುಡುಗನ ಜೀವನ ಬದಲಾಗುತ್ತದೆ. ಸಂಕಷ್ಟದಲ್ಲಿ ಮುಳುಗುತ್ತಿರುವ ಆರ್ಯನ್‌ಗೆ ಎದುರಾಗುವ ಸನ್ನಿವೇಶವೊಂದು ಆತನನ್ನು ಮತ್ತೆ ಪುಟಿದೇಳುವಂತೆ ಮಾಡುತ್ತದೆ. ಅದು ಹೇಗೆ ಎಂಬುದೇ “ಬೆಂಬಿಡದ ನಾವಿಕ’ ಸಿನಿಮಾದ ಕಥಾಹಂದರ.

“ಬೆಂಬಿಡದ ನಾವಿಕ’ ಸಿನಿಮಾದಲ್ಲಿ ಆಗಾಗ್ಗೆ ಮಾಧ್ಯಮಗಳಲ್ಲಿ ಸುದ್ದಿಯಾಗುವ ಸೈಬರ್‌ ಕ್ರೈಂ ವಿಷಯವನ್ನು ಇಟ್ಟುಕೊಂಡು ಅದನ್ನು ಸಸ್ಪೆನ್ಸ್‌-ಥ್ರಿಲ್ಲರ್‌ ಶೈಲಿಯಲ್ಲಿ ತೆರೆಮೇಲೆ ತರಲಾಗಿದೆ. ಪ್ರಸ್ತುತ ವಿಷಯವನ್ನು ಇಟ್ಟುಕೊಂಡಿರುವ “ಬೆಂಬಿಡದ ನಾವಿಕ’ ಚಿತ್ರದ ಎಳೆ ಚೆನ್ನಾಗಿದ್ದರೂ, ಅದನ್ನು ಪರಿಣಾಮಕಾರಿಯಾಗಿ ಕಟ್ಟಿಕೊಡುವುದರಲ್ಲಿ ಚಿತ್ರತಂಡ ಕೊಂಚ ಹಿಂದೆ ಬಿದ್ದಂತೆ ಕಾಣುತ್ತದೆ. ಚಿತ್ರಕಥೆ, ನಿರೂಪಣೆ ಮತ್ತು ಸಿನಿಮಾಕ್ಕೆ ಇನ್ನಷ್ಟು ವೇಗ ಸಿಕ್ಕಿದ್ದರೆ, “ಬೆಂಬಿಡದ ನಾವಿಕ’ ಇನ್ನೂ ಪರಿಣಾಮಕಾರಿಯಾಗಿ ಪ್ರೇಕ್ಷಕರನ್ನು ಮುಟ್ಟುವ ಸಾಧ್ಯತೆಗಳಿದ್ದವು.

ಇನ್ನು ನವ ಪ್ರತಿಭೆಗಳಾದ ಶ್ರೀಯಾನ್‌, ಐಶ್ವರ್ಯಾ, ಪ್ರಿಯದರ್ಶಿನಿ ಸಿನಿಮಾದಲ್ಲಿ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ದಿನೇಶ್‌ ಮಂಗಳೂರು, ಬಲರಾಜವಾಡಿ ತಮ್ಮ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಸಿನಿಮಾದ ಒಂದೆರಡು ಹಾಡುಗಳು ಗುನುಗುವಂತಿದ್ದು, ಹಿನ್ನೆಲೆ ಸಂಗೀತ ಸಿನಿಮಾದ ಮತ್ತೂಂದು ಪ್ಲಸ್‌. ಕೆಲ ಸಣ್ಣ-ಪುಟ್ಟ ಲೋಪಗಳನ್ನು ಬದಿಗಿಟ್ಟು ಹೇಳುವುದಾದರೆ, “ಬೆಂಬಿಡದ ನಾವಿಕ’ ಒಮ್ಮೆ ನೋಡಿ ಹೊಸಬರ ಬೆನ್ನುತಟ್ಟಬಹುದು.

ಜಿಎಸ್‌ಕೆ

ಟಾಪ್ ನ್ಯೂಸ್

Sulya13

Guttigaru: ವೃದ್ಧರನ್ನು ಹೊತ್ತುಕೊಂಡು ಆಸ್ಪತ್ರೆಗೆ ಕೊಂಡೊಯ್ದರು!

Cabinet approves: ರೈತಗೆ ಬಂಪರ್‌; ಹಿಂಗಾರು ಬೆಳೆಗೆ ಬೆಂಬಲ ಬೆಲೆ ಹೆಚ್ಚಳ

Cabinet approves: ರೈತಗೆ ಬಂಪರ್‌; ಹಿಂಗಾರು ಬೆಳೆಗೆ ಬೆಂಬಲ ಬೆಲೆ ಹೆಚ್ಚಳ

Mangaluru-VV

Research: ಮಂಗಳೂರು ವಿಶ್ವವಿದ್ಯಾನಿಲಯ “ಪೇಟೆಂಟ್‌’ ಮಹತ್ವದ ಮೈಲುಗಲ್ಲು

Islamabad: ಪಾಕ್‌ನ ಇಬ್ಬಂದಿತನಕ್ಕೆ ಕಿಡಿ: ಜೈಶಂಕರ್‌ ನಡೆ ಶ್ಲಾಘನೀಯ

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Martin movie review

Martin Movie Review: ಆ್ಯಕ್ಷನ್‌ ಅಬ್ಬರದಲ್ಲಿ ಮಾರ್ಟಿನ್‌ ಮಿಂಚು

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

Gopilola Movie Review

Gopilola Movie Review: ಹೆಣ್ಣು ಮಣ್ಣಿನ ಮಧ್ಯೆ ಗೋಪಿ ಆಟ

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

de

Kundapura: ಲಾರಿಯಲ್ಲಿ ಮಲಗಿದ ಸ್ಥಿತಿಯಲ್ಲಿ ಮರಣ ಹೊಂದಿದ ಚಾಲಕ

Sulya13

Guttigaru: ವೃದ್ಧರನ್ನು ಹೊತ್ತುಕೊಂಡು ಆಸ್ಪತ್ರೆಗೆ ಕೊಂಡೊಯ್ದರು!

17

Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸರಕಾರ

Cabinet approves: ರೈತಗೆ ಬಂಪರ್‌; ಹಿಂಗಾರು ಬೆಳೆಗೆ ಬೆಂಬಲ ಬೆಲೆ ಹೆಚ್ಚಳ

Cabinet approves: ರೈತಗೆ ಬಂಪರ್‌; ಹಿಂಗಾರು ಬೆಳೆಗೆ ಬೆಂಬಲ ಬೆಲೆ ಹೆಚ್ಚಳ

Mangaluru-VV

Research: ಮಂಗಳೂರು ವಿಶ್ವವಿದ್ಯಾನಿಲಯ “ಪೇಟೆಂಟ್‌’ ಮಹತ್ವದ ಮೈಲುಗಲ್ಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.