‘ಅರ್ಜುನ್ ಗೌಡ’ ಚಿತ್ರ ವಿಮರ್ಶೆ: ಪ್ರೀತಿಯ ಬಲೆಯಲ್ಲಿ ಮಾಫಿಯಾ ಅಲೆ!


Team Udayavani, Jan 1, 2022, 11:04 AM IST

ಅರ್ಜುನ್ ಗೌಡ ಚಿತ್ರ ವಿಮರ್ಶೆ

ನಿರ್ಮಾಪಕ ರಾಮು ಅವರು ಆ್ಯಕ್ಷನ್‌ ಸಿನಿಮಾ ಮಾಡುತ್ತಾರೆಂದರೆ ಅಲ್ಲಿನ ಅದ್ಧೂರಿತನವನ್ನು ಊಹಿಸಿಕೊಳ್ಳಬಹುದು. ನಿರ್ದೇಶಕ ಕೇಳಿದ್ದಕ್ಕಿಂತ ಹೆಚ್ಚಿನದ್ದನ್ನು ನೀಡಿ, ಸಿನಿಮಾಕ್ಕೆ ಕೊರತೆಯಾಗದಂತೆ ನೋಡಿಕೊಳ್ಳುವ ಗುಣ ರಾಮು ಅವರದ್ದಾಗಿತ್ತು. ಅದು ಈ ವಾರ ತೆರೆಕಂಡಿರುವ ರಾಮು ನಿರ್ಮಾಣದ “ಅರ್ಜುನ್‌ ಗೌಡ’ ಚಿತ್ರದಲ್ಲಿ ಎದ್ದು ಕಾಣುತ್ತದೆ.

ಒಂದು ಮಾಸ್‌ ಎಂಟರ್‌ಟೈನರ್‌ ಸಿನಿಮಾವನ್ನು ಯಾವ ರೀತಿ ಕಟ್ಟಿಕೊಡಬೇಕು, ಅದರ ಪರಿಸರ ಹೇಗಿರಬೇಕು, ಫೈಟ್‌ ಎಷ್ಟು ಗ್ರ್ಯಾಂಡ್‌ ಆಗಿರಬೇಕು ಎಂಬುದನ್ನು ರಾಮು ಹಾಗೂ ನಿರ್ದೇಶಕ ಶಂಕರ್‌ ಚೆನ್ನಾಗಿ ಅರ್ಥಮಾಡಿಕೊಂಡಿರೋದು ತೆರೆಮೇಲೆ ಗೊತ್ತಾಗುತ್ತದೆ. ಆ ಮಟ್ಟಿಗೆ “ಅರ್ಜುನ್‌ ಗೌಡ’ ಒಂದು ಮಾಸ್‌ ಕಂ ಫ್ಯಾಮಿಲಿ ಡ್ರಾಮಾ ಸಿನಿಮಾವಾಗಿ ಇಷ್ಟವಾಗುತ್ತದೆ.

ನಿರ್ದೇಶಕ ಶಂಕರ್‌ ಪ್ರೀತಿಯ ಎಳೆಯೊಂದನ್ನು ಇಟ್ಟುಕೊಂಡು ಉಳಿದಂತೆ ಒಂದು ಆ್ಯಕ್ಷನ್‌ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಸಾಕಷ್ಟು ಘಟನೆಗಳು, ಸನ್ನಿವೇಶಗಳು ಬರುತ್ತವೆ. ಹಾಗಾಗಿ, ಇಲ್ಲೂ ಕಥೆಗಿಂತ ಇಡೀ ಸಿನಿಮಾವನ್ನು ಸನ್ನಿವೇಶಗಳೇ ಮುಂದುವರೆಸಿಕೊಂಡು ಹೋಗುತ್ತವೆ. ಮೊದಲೇ ಹೇಳಿದಂತೆ ಚಿತ್ರದಲ್ಲಿ ಲವ್‌, ಫ್ಯಾಮಿಲಿ ಡ್ರಾಮಾ ಹಾಗೂ ಆ್ಯಕ್ಷನ್‌, ಮದರ್‌ ಸೆಂಟಿಮೆಂಟ್‌ ಅಂಶಗಳಿದ್ದರೂ ನಿರ್ದೇಶಕರು ಯಾವೊಂದನ್ನು ಅತಿಯಾಗಿ ತೋರಿಸಿಲ್ಲ. ಚಿತ್ರದಲ್ಲಿ ಲವ್‌ ಇದ್ದರೂ ಅದನ್ನು ಹೆಚ್ಚು ತೋರಿಸದೇ, ಮಾಸ್‌ ಅಂಶಗಳಿಗೆ ಗಮನ ಕೊಟ್ಟಿದ್ದಾರೆ. ಆ ಮೂಲಕ “ಅರ್ಜುನ್‌ ಗೌಡ’ ಮಾಸ್‌ ಪ್ರಿಯರ ಗಮನ ಸೆಳೆಯುತ್ತದೆ.

ಇದನ್ನೂ ಓದಿ:‘ಲವ್ ಯು ರಚ್ಚು’ ಚಿತ್ರವಿಮರ್ಶೆ: ಮತ್ತೆ ಮತ್ತೆ ಕಾಡುವ ‘ರಚ್ಚು’ ಕರ್ಮ ಕಥೆ!

ಸಿನಿಮಾದ ಕಥೆ ಮಂಗಳೂರಿನಿಂದ ಆರಂಭವಾಗಿ ಬೆಂಗಳೂರು ತಲುಪಿ, ಸಿಂಗಾಪೂರದ ದೃಶ್ಯಗಳವರೆಗೂ ಹೋಗುತ್ತದೆ. ಸಿನಿಮಾದ ಕಥೆ ಗಂಭೀರವಾಗಿ ಸಾಗುವುದರಿಂದ ಅಲ್ಲಲ್ಲಿ ಪ್ರೇಕ್ಷಕ ಮೊಗದಲ್ಲಿ ನಗುಮೂಡಿಸಲು ಒಂದಷ್ಟು ಕಾಮಿಡಿ ಸನ್ನಿವೇಶಗಳನ್ನು ಜೋಡಿಸಲಾಗಿದೆ. ಕೆಲವೊಮ್ಮೆ ಈ ದೃಶ್ಯಗಳು ಕಿರಿಕಿರಿ ಎನಿಸಿದರೂ, ಕಮರ್ಷಿಯಲ್‌ ಸಿನಿಮಾವಾದ್ದರಿಂದ ಅವೆಲ್ಲವನ್ನು ಸಹಿಸಿಕೊಂಡು ಮುಂದೆ ಸಾಗಬೇಕು. ಅದು ಬಿಟ್ಟರೆ ಯಾವುದೇ ಗೊಂದಲವಿಲ್ಲದಂತೆ ಸಿನಿಮಾ ಮುಗಿಸಿದ್ದಾರೆ ಶಂಕರ್‌.

ನಾಯಕ ಪ್ರಜ್ವಲ್‌ ಕೆರಿಯರ್‌ ನಲ್ಲಿ ಇದೊಂದು ಅದ್ಧೂರಿ ಸಿನಿಮಾ ಎಂಬುದರಲ್ಲಿ ಎರಡು ಮಾತಿಲ್ಲ. ಪ್ರಜ್ವಲ್‌ ಕೂಡಾ ಮಾಸ್‌ ಹೀರೋ ಆಗಿ, ಲವರ್‌ ಬಾಯ್‌ ಆಗಿ ಇಷ್ಟವಾಗುತ್ತಾರೆ. ಸಿನಿಮಾದ ಟೈಟಲ್‌ ಗೆ ತಕ್ಕಂತೆ ಖಡಕ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿ ಪ್ರಿಯಾಂಕಾ ಇದ್ದಷ್ಟು ಹೊತ್ತು ಚೆಂದ. ರೇಖಾ, ರಾಹುಲ್‌ ದೇವ್‌, ದೀಪಕ್‌ ರಾಜ್‌, ಅರವಿಂದ್‌ ರಾವ್‌ ಸೇರಿದಂತೆ ಅನೇಕರು ತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ. ಕಥೆಯ ಆಶಯಕ್ಕೆ ಛಾಯಾಗ್ರಹಕ ಜೈ ಆನಂದ್‌ ಸಾಥ್‌ ನೀಡಿದ್ದಾರೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidlingu 2 Movie Review

Sidlingu 2 Review ಫ್ಯಾಮಿಲಿ ಡ್ರಾಮಾದಲ್ಲಿ ವಿಜಯ ಪ್ರಸಾದ

Raju James Bond Review

Raju James Bond Review: ಕಾಸಿಗಾಗಿ ಜೇಮ್ಸ್‌ ಜೂಟಾಟ

Bhuvanam Gaganam Review

Bhuvanam Gaganam Review: ಪ್ರೇಮದ ಹಾದಿಯಲ್ಲಿ ಸುಮ ಘಮ

Mr.Rani movie review: ನಾನು ಅವಳಲ್ಲ ಅವನು!

Mr.Rani movie review: ನಾನು ಅವಳಲ್ಲ ಅವನು!

Gajarama Movie Review

Gajarama Movie Review: ಪ್ರೀತಿ ಮಧುರ ತ್ಯಾಗ ಅಮರ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.