Genius Mutta review: ಎಲ್ಲರಂತಲ್ಲ ಈ ಜಾಣ!


Team Udayavani, Aug 10, 2024, 10:53 AM IST

Genius Mutta review

ಕಷ್ಟ ಯಾರಿಗಿಲ್ಲ ಹೇಳಿ? ಅದನ್ನು ಎದುರಿಸಲು ಹಿಂಜರಿಯದ ಛಲ ಇರಬೇಕು. ಮುಖ್ಯವಾಗಿ ಜಾಣ್ಮೆ ತೋರಬೇಕು. ಅದು ಹೇಗೆ ಎಂಬುದನ್ನು “ಜೀನಿಯಸ್‌ ಮುತ್ತ’ನಿಂದ ನೋಡಿ ಕಲಿಯಬಹುದು. ಸಣ್ಣ ವಯಸ್ಸಿನಲ್ಲೇ ದೊಡ್ಡತನದ ಪ್ರಬುದ್ಧತೆ ತೋರಿಸುವ ಪೋರನೊಬ್ಬನ್ನ ಪಯಣವಿದು.

ಬಾಲ್ಯದಿಂದಲೇ ಆಸ್ಪತ್ರೆ, ರೋಗಿಗಳು ..ಇದೇ ವಾತಾವರಣದಲ್ಲಿ ಬೆಳೆದ ಮುತ್ತನಿಗೆ, ವೈದ್ಯಕೀಯದಲ್ಲಿ ಅಪಾರ ಆಸಕ್ತಿ. ಹೀಗೆ ಸಾಗುವ ಕಥೆಯಲ್ಲಿ ಇದಕ್ಕಿದ್ದಂತೆ ಮುತ್ತನ ತಾಯಿ ವಿರಳ ಕಾಯಿಲೆಗೆ ತುತ್ತಾಗುತ್ತಾಳೆ. ಹೆಚ್ಚಿನ ಚಿಕಿತ್ಸೆಗೆಂದು ತಾಯಿಯನ್ನು ಬೆಂಗಳೂರಿನ ಆಸ್ಪತ್ರೆಯೊಂದಕ್ಕೆ ಕರೆತರುವ ಮುತ್ತನಿಗೆ ಎದುರಾಗುವ ಕಷ್ಟ ಹಲವಾರು. ಅರಿಯದ ಊರಲ್ಲಿ ತನ್ನ ತಾಯಿಗೆ ಚಿಕಿತ್ಸೆ ಕೊಡಿಸುತ್ತಾನೋ ಇಲ್ಲವೋ ಎಂಬುದೆ ಚಿತ್ರದ ಕಥಾವಸ್ತು.

ಜೀನಿಯಸ್‌ ಹೆಸರಿಗೆ ತಕ್ಕಂತೆ, ಎದುರಾಗುವ ಪ್ರತಿ ಕಷ್ಟದ ಸನ್ನಿವೇಶಗಳನ್ನು ಜಾಣ್ಮೆಯಿಂದ ಎದುರಿಸುವ ಮುತ್ತ ಎಲ್ಲರಿಗೂ ಆಪ್ತವಾಗುತ್ತಾನೆ. ಇಲ್ಲಿ ಮುತ್ತನ ಪಾತ್ರದ ಮುಗ್ಧತೆ, ಜಾಣ್ಮೆ, ಆತ ತೋರುವ ಆತ್ಮೀಯ ಭಾವ, ಲವಲವಿಕೆಯ ವಾತಾವರಣ ಇವೇ ಚಿತ್ರದ ಹೈಲೈಟ್ಸ್‌. ಮಕ್ಕಳಿಗೊಂದು ಪ್ರೇರಣೆಯಿರಲಿ ಎಂಬಂತೆ ಈ ಸಿನಿಮಾ ಮೂಡಿಬಂದಿದೆ. ನಾಗಿಣಿ ಭರಣ ಅವರು ಕಥೆಗೆ ಪೂರಕ ವಾತಾವರಣ ಸೃಷ್ಟಿಸಿದ್ದಾರೆ. ಈ ಮೂಲಕ ಚೊಚ್ಚಲ ನಿರ್ದೇಶನದಲ್ಲೇ ಹೊಸದನ್ನು ಕಟ್ಟಿಕೊಡಲು ಪ್ರಯತ್ನಿಸಿದ್ದಾರೆ.

ಬಾಲನಟನಾಗಿ ಸಿನಿರಂಗಕ್ಕೆ ಕಾಲಿಟ್ಟಿರುವ ಮಾಸ್ಟರ್‌ ಶ್ರೇಯಸ್‌ ಜೈಪ್ರಕಾಶ್‌ ಭರವಸೆ ಮೂಡಿಸಿದ್ದಾರೆ. ವಿಶೇಷ ಪಾತ್ರದಲ್ಲಿ ವಿಜಯ್‌ ರಾಘವೇಂದ್ರ ಗಮನ ಸೆಳೆಯುತ್ತಾರೆ. ಮುತ್ತನ ಜಾಣ್ಮೆಯ ಸನ್ನಿವೇಶಗಳು ಇಷ್ಟವಾಗುತ್ತವೆ. ಚಿತ್ರದ ಛಾಯಾಗ್ರಹಣ ಉತ್ತಮವಾಗಿದೆ. ಟಿ.ಎಸ್‌. ನಾಗಾಭರಣ, ಪದ್ಮಾ ವಾಸಂತಿ, ಸುಂದರ್‌ರಾಜ್‌, ಪ್ರಿಯಾ ಅವಿನಾಶ್‌ ತಮ್ಮ ಪಾತ್ರಗಳಿಗೆ ನ್ಯಾಯ ಒದಗಿಸಿದ್ದಾರೆ.

ನಿತೀಶ ಡಂಬಳ

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shalivahana Shake Movie Review

Shalivahana Shake Movie Review: ಟೈಮ್‌ ಲೂಪ್‌ ಕಥೆಯ ʼಶಾಲಿವಾಹನ ಶಕೆ’

Vikasa Parva Movie Review

Vikasa Parva Movie Review: ಜೀವನ ಪಾಠದ ‘ವಿಕಾಸ ಯಾತ್ರೆ’

kaalapatthar

Kaalapatthar movie review: ಶಿಲೆಯ ಸುತ್ತದ ಸೆಳೆತವಿದು..

Ronny

Ronny Movie Review: ಬಣ್ಣದ ಕನಸಿಗೆ ರಕ್ತ ಲೇಪನ

ibbani tabbida ileyali movie review

Ibbani Tabbida Ileyali Review; ತಾಜಾ ಪ್ರೀತಿಯ ಭಾವ ಲಹರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.