ಚಿತ್ರವಿಮರ್ಶೆ: ವ್ಯವಸ್ಥೆಯೊಳಗೆ ‘ಹೋಪ್‌’ ಮೂಡಿಸುವ ಕಥೆ


Team Udayavani, Jul 9, 2022, 8:29 AM IST

hope

ಶಿವಾನಿ (ಶ್ವೇತಾ ಶ್ರೀವಾತ್ಸವ್‌) ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ. ಸರ್ಕಾರಿ ಅಧಿಕಾರಿಗಳನ್ನು ಎರಡು ವರ್ಷಕ್ಕೂ ಮುನ್ನ ವರ್ಗಾವಣೆ ಮಾಡಬಾರದು ಎಂಬ ಸರ್ಕಾರದ ಮಾರ್ಗಸೂಚಿಯಿದ್ದರೂ, ಕೆಲವೊಂದು ಪಟ್ಟಭದ್ರ ಹಿತಾಸಕ್ತಿ ಮತ್ತು ರಾಜಕೀಯ ಪ್ರಭಾವದಿಂದಾಗಿ ಕರ್ತವ್ಯಕ್ಕೆ ಹಾಜರಾಗಿದ್ದ ಎಂಟೇ ತಿಂಗಳಲ್ಲಿ ಶಿವಾನಿ ವರ್ಗಾವಣೆಯಾಗಬೇಕಾಗುತ್ತದೆ. ಸರ್ಕಾರಿ ನೌಕರಳಾಗಿ ತನ್ನ ಹಕ್ಕುಗಳನ್ನು ಪ್ರತಿಪಾದಿಸುವ ಶಿವಾನಿ, ಸರ್ಕಾರದ ಈ ವರ್ಗಾವಣೆ ಆದೇಶದ ವಿರುದ್ದ ಕೆಎಟಿ (ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ) ಮೊರೆ ಹೋಗುತ್ತಾಳೆ. ಅಲ್ಲೂ ಆಕೆಗೆ ನ್ಯಾಯ ಸಿಗದಿದ್ದಾಗ ಹೈಕೋರ್ಟ್‌, ನಂತರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರುತ್ತಾಳೆ. ಹೀಗೆ ವರ್ಷಗಳ ಕಾಲ ತನ್ನ ಹಕ್ಕಿಗಾಗಿ ಹೋರಾಡುವ ಶಿವಾನಿ ಈ ಹೋರಾಟದಲ್ಲಿ ಗೆಲುವು ಸಾಧಿಸುತ್ತಾಳಾ? ಶಿವಾನಿ ಕಾನೂನು ಹೋರಾಟ ಹೇಗಿರುತ್ತದೆ ಅನ್ನೋದೆ “ಹೋಪ್‌’ ಸಿನಿಮಾದ ಕಥಾಹಂದರ.

ಅವಧಿಗೂ ಮುನ್ನ ಸರ್ಕಾರಿ ಅಧಿಕಾರಿಗಳ ವರ್ಗಾವಣೆ, ಅದರ ವಿರುದ್ಧ ಕಾನೂನಾತ್ಮಕ ಹೋರಾಟ ಇಂಥ ವಿಷಯಗಳ ಬಗ್ಗೆ ಆಗಾಗ್ಗೆ ಮಾಧ್ಯಮಗಳಲ್ಲಿ ಕೇಳಿರುತ್ತೀರಿ. ಆದರೆ ಇಂಥ ವರ್ಗಾವಣೆಯಿಂದ ಆಡಳಿತಾತ್ಮಕ ವ್ಯವಸ್ಥೆಯ ಮೇಲಾಗುವ ಪರಿಣಾಮಗಳು, ಯಾವಾಗಲೂ ವರ್ಗಾವಣೆಯಾಗುತ್ತಿರುವ ಅಧಿಕಾರಿಗಳ ಮನಸ್ಥಿತಿ, ಅವರ ಹೋರಾಟಗಳ ಮೇಲೆ ಬೆಳಕು ಚೆಲ್ಲಿರುವ ಸಿನಿಮಾ “ಹೋಪ್‌’. ಇಡೀ ಸಿನಿಮಾ ಕೋರ್ಟ್‌ ರೂಮ್‌ ಡ್ರಾಮಾವಾಗಿ ಪೊಲಿಟಿಕಲ್‌-ಥ್ರಿಲ್ಲರ್‌ ಶೈಲಿಯಲ್ಲಿ ಮೂಡಿಬಂದಿದೆ. ಜನ ಸಾಮಾನ್ಯರ ಅರಿವಿಗೆ ಬಾರದಂತಿರುವ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ರೀತಿ, ಅದರ ಹಿಂದಿನ ರಾಜಕೀಯ, ಆಡಳಿತದ ಮೇಲಾಗುವ ಪ್ರತಿಕೂಲ ಪರಿಣಾಮ, ನ್ಯಾಯಾಂಗ ಪ್ರಕ್ರಿಯೆ ವಿಧಾನ ಎಲ್ಲವನ್ನೂ “ಹೋಪ್‌’ ಸಿನಿಮಾದಲ್ಲಿ ತೆರೆಮೇಲೆ ಕಟ್ಟಿಕೊಡಲಾಗಿದೆ.

ಇಂಥದ್ದೊಂದು ವಿಷಯವನ್ನು ಸಿನಿಮಾವಾಗಿ ಆಯ್ಕೆ ಮಾಡಿಕೊಂಡಿರುವ ಚಿತ್ರತಂಡದ ಪ್ರಯತ್ನ ಮೊದಲಿಗೆ ಮೆಚ್ಚುವಂತಿದೆ. ಆದರೆ, ನಿರ್ದೇಶಕರು ಚಿತ್ರಕಥೆ ಮತ್ತು ನಿರೂಪಣೆ ಕಡೆಗೆ ಇನ್ನಷ್ಟು ಗಮನ ನೀಡಿದ್ದರೆ, “ಹೋಪ್‌’ ಇನ್ನಷ್ಟು ಪರಿಣಾಮಕಾರಿಯಾಗಿ ತೆರೆಮೇಲೆ ಬರುವ ಸಾಧ್ಯತೆಯಿತ್ತು.

ಇನ್ನು “ಹೋಪ್‌’ ಸಿನಿಮಾದ ಸಂಪೂರ್ಣ ಕಥೆ ಶ್ವೇತಾ ಶ್ರೀವಾತ್ಸವ್‌ ನಿರ್ವಹಿಸಿರುವ ಶಿವಾನಿ ಪಾತ್ರದ ಸುತ್ತ ನಡೆಯುತ್ತದೆ. ಮೊದಲ ಬಾರಿಗೆ ಕೆಎಎಸ್‌ ಅಧಿಕಾರಿಯಾಗಿ ಶ್ವೇತಾ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಪ್ರಾಮಾಣಿಕ ಅಧಿಕಾರಿಯಾಗಿ, ವ್ಯವಸ್ಥೆಯ ಲೋಪಗಳ ವಿರುದ್ದ ಹೋರಾಡುವ ಮಹಿಳೆಯಾಗಿ ಶ್ವೇತಾ ತಮ್ಮ ಪಾತ್ರಕ್ಕೆ ಜೀವತುಂಬಿದ್ದಾರೆ. ಉಳಿದಂತೆ ಪ್ರಕಾಶ್‌ ಬೆಳವಾಡಿ, ಗೋಪಾಲಕೃಷ್ಣ ದೇಶಪಾಂಡೆ, ಪ್ರಮೋದ್‌ ಶೆಟ್ಟಿ, ಅಶ್ವಿ‌ನ್‌ ಹಾಸನ್‌ ತಮ್ಮ ಪಾತ್ರಗಳಲ್ಲಿ ನೋಡುಗರಿಗೆ ಇಷ್ಟವಾಗುತ್ತಾರೆ.

ಚಿತ್ರದ ಛಾಯಾಗ್ರಹಣ, ಸಂಕಲನ, ಒಂದೆರಡು ಹಾಡುಗಳು ಗಮನ ಸೆಳೆಯುವಂತಿದೆ. ಮಾಮೂಲಿ ಹೊಡಿ-ಬಡಿ ಸಿನಿಮಾಗಳೆಂದರೆ ಮೂಗು ಮುರಿಯುವ, ಹೊಸಥರದ ಪ್ರಯತ್ನ ಬಯಸುವ ಪ್ರೇಕ್ಷಕರು ಒಮ್ಮೆ “ಹೋಪ್‌’ ನೋಡಿ ಬರಬಹುದು.

ಜಿ.ಎಸ್‌.ಕೆ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidlingu 2 Movie Review

Sidlingu 2 Review ಫ್ಯಾಮಿಲಿ ಡ್ರಾಮಾದಲ್ಲಿ ವಿಜಯ ಪ್ರಸಾದ

Raju James Bond Review

Raju James Bond Review: ಕಾಸಿಗಾಗಿ ಜೇಮ್ಸ್‌ ಜೂಟಾಟ

Bhuvanam Gaganam Review

Bhuvanam Gaganam Review: ಪ್ರೇಮದ ಹಾದಿಯಲ್ಲಿ ಸುಮ ಘಮ

Mr.Rani movie review: ನಾನು ಅವಳಲ್ಲ ಅವನು!

Mr.Rani movie review: ನಾನು ಅವಳಲ್ಲ ಅವನು!

Gajarama Movie Review

Gajarama Movie Review: ಪ್ರೀತಿ ಮಧುರ ತ್ಯಾಗ ಅಮರ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.