‘ಕಾಗೆ ಮೊಟ್ಟೆ’ ಚಿತ್ರವಿಮರ್ಶೆ: ಕಾಗೆ ಗೂಡಲ್ಲೊಂದು ಕೃಷ್ಣನ್‌ ಲವ್‌ಸ್ಟೋರಿ


Team Udayavani, Oct 2, 2021, 12:37 PM IST

‘ಕಾಗೆ ಮೊಟ್ಟೆ’ ಚಿತ್ರವಿಮರ್ಶೆ: ಕಾಗೆ ಗೂಡಲ್ಲೊಂದು ಕೃಷ್ಣನ್‌ ಲವ್‌ಸ್ಟೋರಿ

ಚಿತ್ರಮಂದಿರಗಳಲ್ಲಿ ಪೂರ್ಣ ಪ್ರವೇಶಾತಿ ಸಿಕ್ಕ ಮೊದಲ ದಿನ ಬಿಡುಗಡೆಯಾಗಿರುವ ಚಿತ್ರ “ಕಾಗೆ ಮೊಟ್ಟೆ’. ತುಂಬಾ ದಿನಗಳಿಂದ ಚಿತ್ರಮಂದಿರಗಳಿಂದ ದೂರ ಉಳಿದಿರುವ ಪ್ರೇಕ್ಷಕರನ್ನು ಮತ್ತೆ ಕರೆತರಬೇಕಾದರೆ ಸಿನಿಮಾಗಳಲ್ಲಿ ಒಂದಾ ಮಾಸ್‌ ಅಂಶ ಇರಬೇಕು ಅಥವಾ ಔಟ್‌ ಅಂಡ್‌ ಔಟ್‌ಲವ್‌ಸ್ಟೋರಿ ಇರಬೇಕು.

ಹಾಗೆ ನೋಡಿದರೆ “ಕಾಗೆಮೊಟ್ಟೆ’ ಅವೆರಡನ್ನೂ ಜೊತೆ ಜೊತೆಯಾಗಿ ನೀಡುವ ಚಿತ್ರ ಎಂದರೆ ತಪ್ಪಾಗಲಾರದು. ಅದರಲ್ಲೂ ಮಾಸ್‌ ಎಲಿಮೆಂಟ್ಸ್‌ ಸ್ವಲ್ಪ ಹೆಚ್ಚೇ ಇರುವ ಈ ಚಿತ್ರ ಮೊದಲ ದಿನವೇ ಸಿನಿಮಾ ಪ್ರೇಮಿಗಳನ್ನು ಚಿತ್ರಮಂದಿರದೊಳಗೆ ಎರಡು ಸ್ಟೆಪ್‌ ಹಾಕುವಂತೆ ಮಾಡಿದೆ.

“ಕಾಗೆ ಮೊಟ್ಟೆ’ ಒಂದು ರೌಡಿಸಂ ಹಿನ್ನೆಲೆಯ ಸಿನಿಮಾ. ಬೆಂಗಳೂರಿನ ಅಂಡರ್‌ವರ್ಲ್ಡ್ಗೆ ತಾವೇ ಅಧಿಪತಿಯಾಗಬೇಕೆಂಬ ಆಸೆಯಿಂದ ಹಳ್ಳಿಯಿಂದ ಬೆಂಗಳೂರಿಗೆ ಬರುವ ಯುವಕರ ಕಥೆಯನ್ನು “ಕಾಗೆಮೊಟ್ಟೆ’ ಒಳಗೊಂಡಿದೆ. ಬಿಸಿ ರಕ್ತದ ಯುವಕರ ಹುಮ್ಮಸ್ಸು, ಕರಾಬ್‌ ದುನಿಯಾದಲ್ಲಿ ಮೆರೆದಾಡಬೇಕೆಂಬ ಕನಸು, ಜೊತೆಗೊಂದು ಲವ್‌ಸ್ಟೋರಿ… ಈ ಅಂಶಗಳೊಂದಿಗೆ ಸಾಗುವ ಸಿನಿಮಾ, ಮನರಂಜನೆಗೆ ಮೋಸ ಮಾಡುವುದಿಲ್ಲ.

ಒಂದು ಅಂಡರ್‌ವರ್ಲ್ಡ್ ಹಿನ್ನೆಲೆಯ ಸಿನಿಮಾವನ್ನು ಹೇಗೆ ಕಟ್ಟಿಕೊಡಬೇಕೆಂಬ ಕಲ್ಪನೆ ನಿರ್ದೇಶಕ ಚಂದ್ರಹಾಸ್‌ ಅವರಿಗೆ ಚೆನ್ನಾಗಿಯೇ ಇದೆ ಎಂಬುದು ಚಿತ್ರ ನೋಡಿದಾಗ ಗೊತ್ತಾಗುತ್ತದೆ. ಮುಖ್ಯವಾಗಿ ಇಂತಹ ಕಥೆಗೆ ಲೊಕೇಶನ್‌ ಕೂಡಾ ಪ್ರಮುಖ ಪಾತ್ರ ವಹಿಸುತ್ತದೆ. ಆ ನಿಟ್ಟಿನಲ್ಲಿ ನಿರ್ದೇಶಕರು ಚಿತ್ರಕ್ಕೆ ತುಂಬಾ ಚೆನ್ನಾಗಿ ಹೊಂದಿಕೊಳ್ಳುವ ಪರಿಸರದೊಂದಿಗೆ ಕಟ್ಟಿಕೊಟ್ಟಿದ್ದಾರೆ.

ಇದನ್ನೂ ಓದಿ:ಜಗದೀಶ್‌ ಮಾತನಾಡಿದ್ದು ತಪ್ಪಾಯ್ತು…ಕರ್ನಾಟಕದಲ್ಲಿ ನಾನು ಭಿಕ್ಷುಕಿನೇ: ನಟಿ ವಿಜಯಲಕ್ಷ್ಮೀ

ರೌಡಿಸಂ ಸಿನಿಮಾ ಎಂದಮೇಲೆ ಸಹಜವಾಗಿ ಸ್ನೇಹ, ಜಿದ್ದು, ಸ್ಕೆಚ್‌, ಹೊಡೆದಾಟ, ಬಡಿದಾಟ ಸಹಜ. ಆದರೆ, ಈ ಅಂಶಗಳನ್ನೇ “ಕಾಗೆ ಮೊಟ್ಟೆ’ಯಲ್ಲಿ ಭಿನ್ನ ರೀತಿಯಲ್ಲಿ ಹೇಳಲು ಪ್ರಯತ್ನಿಸಲಾಗಿದೆ. ಚಿತ್ರದಲ್ಲಿ ತಣ್ಣನೆ ಕಾಡುವ ಪ್ರೀತಿಯ ಜೊತೆಗೆ ರೌಡಿಸಂ ಕ್ರೇಜ್‌ನ ಯುವಕರಿಗೆ ಒಂದು ಸಂದೇಶ ಕೂಡಾ ಇದೆ. ವಿ.ನಾಗೇಂದ್ರ ಪ್ರಸಾದ್‌ ಸಂಭಾಷಣೆ ಕಥೆಗೆ ಪೂರಕವಾಗಿದೆ.

ನಟ ಗುರುರಾಜ್‌ ಪಕ್ಕಾ ರಗಡ್‌ ಲುಕ್‌ನಲ್ಲಿ ಕಾಣಿಸಿಕೊಂಡು ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಉಳಿದಂತೆ ಶರತ್‌ ಲೋಹಿತಾಶ್ವ, ಸತ್ಯಜಿತ್‌ ಹಾಗೂ ಇತರರು ಪಾತ್ರಕ್ಕೆ ಹೊಂದಿಕೊಂಡಿದ್ದಾರೆ. ಚಿತ್ರದ ಹಾಡೊಂದು ಗುನುಗುವಂತಿದೆ. ಪಿ.ಎಲ್‌.ರವಿ ಛಾಯಾಗ್ರಹಣದಲ್ಲಿ “ಕಾಗೆ ಮೊಟ್ಟೆ’ ಸುಂದರ. ಅವರ ಛಾಯಾಗ್ರಹಣದ ಶ್ರಮ ಅಲ್ಲಲ್ಲಿ ಎದ್ದು ಕಾಣುತ್ತದೆ.

 ರವಿ ರೈ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidlingu 2 Movie Review

Sidlingu 2 Review ಫ್ಯಾಮಿಲಿ ಡ್ರಾಮಾದಲ್ಲಿ ವಿಜಯ ಪ್ರಸಾದ

Raju James Bond Review

Raju James Bond Review: ಕಾಸಿಗಾಗಿ ಜೇಮ್ಸ್‌ ಜೂಟಾಟ

Bhuvanam Gaganam Review

Bhuvanam Gaganam Review: ಪ್ರೇಮದ ಹಾದಿಯಲ್ಲಿ ಸುಮ ಘಮ

Mr.Rani movie review: ನಾನು ಅವಳಲ್ಲ ಅವನು!

Mr.Rani movie review: ನಾನು ಅವಳಲ್ಲ ಅವನು!

Gajarama Movie Review

Gajarama Movie Review: ಪ್ರೀತಿ ಮಧುರ ತ್ಯಾಗ ಅಮರ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.