‘ಥಗ್ಸ್ ಆಫ್ ರಾಮಘಡ’ ಚಿತ್ರ ವಿಮರ್ಶೆ: ರಾಮಘಡದಲ್ಲಿ ಕರ್ಮಫ‌ಲ ಪ್ರಾಪ್ತಿ!


Team Udayavani, Jan 8, 2023, 2:51 PM IST

Kannada movie thugs of ramaghada review

ದಿಢೀರ್‌ ಶ್ರೀಮಂತನಾಗಬೇಕು ಎಂಬ ದುರಾಸೆಯಿಂದ ಕಳ್ಳ ತನ ಮಾಡಲು ಮುಂದಾಗುವ ಹುಡುಗರ ಗುಂಪು, ಕಳ್ಳ ತನ ಮಾಡುವ ಆತುರದಲ್ಲಿ ಕೊಲೆಯೊಂದನ್ನು ಮಾಡಿ ರಕ್ತದ ಕಲೆಯನ್ನು ಕೈಗೆ ಅಂಟಿಸಿಕೊಳ್ಳುತ್ತದೆ. ಒಂದು ಕಳ್ಳ ತನ ಮತ್ತು ಕೊಲೆಯಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಒಂದರ ಹಿಂದೊಂದು ಹೆಣಗಳು ಉರುಳುತ್ತಾ ಹೋಗುತ್ತದೆ. ನೋಡ ನೋಡುತ್ತಿದ್ದಂತೆ, ರಕ್ತ ಚರಿತ್ರೆಯ ಒಂದೊಂದೆ ಪುಟಗಳು ತೆರೆಮೇಲೆ ತೆರೆದುಕೊಳ್ಳುತ್ತಾ, ಬಯಲು ಸೀಮೆಯ “ರಾಮಘಡ’ಕ್ಕೆ ಬಂದು ನಿಲ್ಲುತ್ತದೆ. ಅಂತಿಮವಾಗಿ ರಕ್ತ ಪಿಪಾಸುಗಳ ನೆತ್ತರ ದಾಹಕ್ಕೆ ಹೊಡೆದಾಟ, ಹೋರಾಟಕ್ಕೆ “ರಾಮಘಡ’ದಲ್ಲಿ ತಾರ್ಕಿಕ ಅಂತ್ಯ ಸಿಗುತ್ತದೆಯಾ? ಇಲ್ಲವಾ ಎಂಬುದನ್ನ ತಿಳಿಯಬೇಕಾದರೆ, “ಥಗ್ಸ್‌ ಆಫ್ ರಾಮಘಡ’ ಎಂಬ ನೆತ್ತರ ಕಹಾನಿಯ “ಚಿತ್ರ’ಣವನ್ನು ತೆರೆಮೇಲೆ ನೋಡಬೇಕು.

ಆರಂಭದಲ್ಲಿಯೇ ಸಿನಿಮಾದ ಪೋಸ್ಟರ್‌ ಮತ್ತು ಟ್ರೇಲರ್‌ನಲ್ಲಿ ತೋರಿಸಿರುವಂತೆ “ಥಗ್ಸ್‌ ಆಫ್ ರಾಮಘಡ’ ಬ್ಲಿಡ್‌ ಶೇಡ್‌ ಇರುವಂಥ ಸಿನಿಮಾ. ಕರ್ಮ ಸಿದ್ಧಾಂತದ ಎಳೆಯನ್ನು ಇಟ್ಟುಕೊಂಡು ಔಟ್‌ ಆ್ಯಂಡ್‌ ಔಟ್‌ ಕ್ರೈಂ ಕಂ ಆ್ಯಕ್ಷನ್‌-ಥ್ರಿಲ್ಲರ್‌ ಶೈಲಿಯಲ್ಲಿ ಇಡೀ ಸಿನಿಮಾವನ್ನು ತೆರೆಮೇಲೆ ತರಲಾಗಿದೆ. ಒಂದಷ್ಟು ಕೊಲೆ, ಕೊಲೆಗಾರರ ಹುಡುಕಾಟ, ಅದರ ಹಿಂದಿನ ಕಾರಣ ಎಲ್ಲವನ್ನೂ ಕುತೂಹಲಭರಿತವಾಗಿ ಕಟ್ಟಿಕೊಡುವಲ್ಲಿ ನಿರ್ದೇಶಕರು ಯಶಸ್ವಿಯಾಗಿದ್ದಾರೆ. ಬಿಗಿಯಾದ ನಿರೂಪಣೆ, ಉತ್ತರ ಕರ್ನಾಟಕದ ಖಡಕ್‌ ಡೈಲಾಗ್ಸ್‌ ಸಿನಿಮಾದ ವೇಗವನ್ನು ಹೆಚ್ಚಿಸಿ ಪ್ರೇಕ್ಷಕರನ್ನು ಹಿಡಿದು ಕೂರಿಸುವಂತೆ ಮಾಡಿದೆ.

ಇನ್ನು ಇಲ್ಲಿಯವರೆಗೆ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ನಟ ಅಶ್ವಿ‌ನ್‌ ಹಾಸನ್‌ ಚಿತ್ರದ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕುಟುಂಬದವರನ್ನು ಕಳೆದುಕೊಂಡ ದುಃಖೀಯಾಗಿ, ಅದಕ್ಕೆ ಕಾರಣರಾದವರನ್ನು ಹುಡುಕಿ ಪ್ರತಿಕಾರ ತೀರಿಸಿಕೊಳ್ಳುವ ವ್ಯಕ್ತಿಯಾಗಿ ಡಬಲ್‌ ಶೇಡ್‌ ನಲ್ಲಿರುವ ತಮ್ಮ ಪಾತ್ರವನ್ನು ಅಶ್ವಿ‌ನ್‌ ಯಶಸ್ವಿಯಾಗಿ ನಿಭಾಯಿಸಿ ಫುಲ್‌ ಮಾರ್ಕ್ಸ್ ಪಡೆದುಕೊಳ್ಳುತ್ತಾರೆ. ನವ ಪ್ರತಿಭೆ ಚಂದನ್‌ ರಾಜ್‌, ಮಹಾಲಕ್ಷ್ಮೀ ಪಾತ್ರಗಳು ಮನಸ್ಸಿನಲ್ಲಿ ಉಳಿಯುವಂತಿದೆ.

ಉಳಿದಂತೆ ಬಹುತೇಕ ಹೊಸ ಕಲಾವಿದರು ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸಿ ಗಮನ ಸೆಳೆಯುತ್ತಾರೆ. ತಾಂತ್ರಿಕವಾಗಿ ಛಾಯಾಗ್ರಹಣ, ಸಂಕಲನ, ಕಲರಿಂಗ್‌ ಮತ್ತು ಹಿನ್ನೆಲೆ ಸಂಗೀತ ಸಿನಿಮಾದ ಹೈಲೈಟ್ಸ್‌ ಎನ್ನಬಹುದು. ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಕಂ ಕ್ರೈಂ-ಥ್ರಿಲ್ಲರ್‌ ಸಿನಿಮಾಗಳನ್ನು ಇಷ್ಟಪಡುವವರು ಒಮ್ಮೆ “ಥಗ್ಸ್‌ ಆಫ್ ರಾಮಘಡ’ ನೋಡಿ ಬರಲು ಅಡ್ಡಿಯಿಲ್ಲ

 ಜಿ.ಎಸ್‌.ಕೆ

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidlingu 2 Movie Review

Sidlingu 2 Review ಫ್ಯಾಮಿಲಿ ಡ್ರಾಮಾದಲ್ಲಿ ವಿಜಯ ಪ್ರಸಾದ

Raju James Bond Review

Raju James Bond Review: ಕಾಸಿಗಾಗಿ ಜೇಮ್ಸ್‌ ಜೂಟಾಟ

Bhuvanam Gaganam Review

Bhuvanam Gaganam Review: ಪ್ರೇಮದ ಹಾದಿಯಲ್ಲಿ ಸುಮ ಘಮ

Mr.Rani movie review: ನಾನು ಅವಳಲ್ಲ ಅವನು!

Mr.Rani movie review: ನಾನು ಅವಳಲ್ಲ ಅವನು!

Gajarama Movie Review

Gajarama Movie Review: ಪ್ರೀತಿ ಮಧುರ ತ್ಯಾಗ ಅಮರ!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.