Na Kolikke Ranga Movie Review; ಕೋಳಿ ಹಿಂದೊಂದು ರಂಗಿನ ಕಥೆ


Team Udayavani, Nov 12, 2023, 10:02 AM IST

Na Kolikke Ranga Movie Review

ಆತ ಹಳ್ಳಿಯಲ್ಲಿರುವ ಅವಿದ್ಯಾವಂತ ಹುಡುಗ ರಂಗ. ಯಾವುದೇ ಕೆಲಸವಿಲ್ಲದೆ ಊರಿನಲ್ಲಿ ತನ್ನ ವಯಸ್ಸಿನ ಹುಡುಗರ ಜೊತೆ ಅಡ್ಡಾಡಿಕೊಂಡಿರುವ ರಂಗನಿಗೆ ತನ್ನ ತಾಯಿ ಮತ್ತು ಕೋಳಿ ಎರಡೇ ಪ್ರಪಂಚ. ಇಂಥ ರಂಗನ ಜೀವನದಲ್ಲಿ ಬರುವ ಅನಿರೀಕ್ಷಿತ ಸನ್ನಿವೇಶವೊಂದು, ತಾಯಿ ಅಥವಾ ಕೋಳಿ ಇವೆರಡಲ್ಲಿ ಯಾವುದು

ಮುಖ್ಯ ಎಂಬ ಪರೀಕ್ಷೆಗೆ ರಂಗನನ್ನು ಸಿಲುಕಿಸುತ್ತದೆ. ಇಂಥ ಸನ್ನಿವೇಶವನ್ನು ಹಳ್ಳಿಯ ಹುಡುಗ ರಂಗ ಹೇಗೆ ಎದುರಿಸುತ್ತಾನೆ? ತಾಯಿ ಮತ್ತು ಕೋಳಿ ಎರಡರಲ್ಲಿ ರಂಗನಿಗೆ ಯಾವುದು ಮುಖ್ಯವಾಗುತ್ತದೆ ಎಂಬುದೇ ಈ ವಾರ ತೆರೆಗೆ ಬಂದಿರುವ “ನಾ ಕೋಳಿಕ್ಕೆ ರಂಗ’ ಸಿನಿಮಾದ ಕಥಾಹಂದರ.

ಸಿನಿಮಾದ ಹೆಸರೇ ಹೇಳುವಂತೆ, “ನಾ ಕೋಳಿಕ್ಕೆ ರಂಗ’ ಅಪ್ಪಟ ಗ್ರಾಮೀಣ ಸೊಗಡಿನ ಸಿನಿಮಾ. ಹಳ್ಳಿಯ ಜನ-ಜೀವನ, ಪ್ರೀತಿ, ಸ್ನೇಹ, ಆಚರಣೆ ಎಲ್ಲದರ ಜೊತೆಗೆ ಸಿನಿಮಾದ ಕಥಾಹಂದರ ಸಾಗುತ್ತದೆ. ಕಾಮಿಡಿ, ಲವ್‌, ಸೆಂಟಿಮೆಂಟ್‌, ಹಾಡು, ಡ್ಯಾನ್ಸ್‌ ಹೀಗೆ ಎಲ್ಲ ಥರದ ಕಮರ್ಶಿಯಲ್‌ ಎಂಟರ್‌ಟೈನ್ಮೆಂಟ್‌ ಅಂಶಗಳನ್ನು ಇಟ್ಟುಕೊಂಡು ಸಿನಿಮಾವನ್ನು ಕಟ್ಟಿಕೊಡುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕರು. ಕೆಲ ಅನಗತ್ಯ ಸನ್ನಿವೇಶಗಳಿಗೆ ಕತ್ತರಿ ಹಾಕಿ, ಚಿತ್ರಕಥೆಗೆ ಇನ್ನಷ್ಟು ವೇಗ ನೀಡಿದ್ದರೆ, ರಂಗನ ಓಟ ಇನ್ನಷ್ಟು ರಂಗಾಗಿರುವ ಸಾಧ್ಯತೆಗಳಿದ್ದವು.

ಇನ್ನು ಇಡೀ ಸಿನಿಮಾದಲ್ಲಿ ಹೈಲೈಟ್ಸ್‌ ನಾಯಕ ಮಾಸ್ಟರ್‌ ಆನಂದ್‌ ಮತ್ತು ಕೋಳಿ ನಡುವಿನ ಭಾವನಾತ್ಮಕ ಸನ್ನಿವೇಶಗಳು. ಆನಂದ್‌, ಭವ್ಯಾ ಮತ್ತು ನವ ನಾಯಕಿ ರಾಜೇಶ್ವರಿ ಅಭಿನಯ ನೋಡುಗರ ಗಮನ ಸೆಳೆಯುತ್ತದೆ. ಉಳಿದಂತೆ ಚಿರಪರಿಚಿತ ಕಲಾವಿದರ ದೊಡ್ಡ ದಂಡೇ ಸಿನಿಮಾದಲ್ಲಿದೆ. ತಾಂತ್ರಿಕವಾಗಿ ಸಿನಿಮಾದ ಛಾಯಾಗ್ರಹಣ ಹಳ್ಳಿ ಸೊಬಗನ್ನು ರಂಗುರಂಗಾಗಿ ಕಾಣುವಂತೆ ಮಾಡಿದೆ.

ಕೈಲಾಶ್‌ ಖೇರ್‌ ಗಾಯನದ “ಮರೆಯೋದುಂಟೆ ಮೈಸೂರು ದೊರೆಯ…’ ಸೇರಿದಂತೆ “ನಾ ಕೋಳಿಕ್ಕೆ ರಂಗ’ ಸಿನಿಮಾದ ಒಂದೆರಡು ಹಾಡುಗಳು ಗುನುಗುವಂತಿದೆ. ಒಟ್ಟಾರೆ ಮಾಸ್‌ ಆಡಿಯನ್ಸ್‌ ಬಯಸುವ ಎಲ್ಲ ಕಮರ್ಶಿಯಲ್‌ ಎಂಟರ್‌ಟೈನ್ಮೆಂಟ್‌ ಅಂಶಗಳೂ “ರಂಗ’ನಲ್ಲಿದ್ದು ಒಮ್ಮೆ ನೋಡಿಬರಲು ಅಡ್ಡಿಯಿಲ್ಲ.

ಜಿ.ಎಸ್‌.ಕೆ.ಸುಧನ್

ಟಾಪ್ ನ್ಯೂಸ್

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

ANAKU-operation

Udupi: “ಸಾಗರ್‌ ಕವಚ್‌’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್‌, ವಾಹನಗಳು ವಶಕ್ಕೆ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

Sathish-Kumpala

Hubballi: ಪೊಲೀಸ್‌ ಠಾಣೆ ಮೇಲೆ ದಾಳಿ ಪ್ರಕರಣ ವಾಪಸ್‌: ದ. ಕನ್ನಡ ಜಿಲ್ಲಾ ಬಿಜೆಪಿ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Martin movie review

Martin Movie Review: ಆ್ಯಕ್ಷನ್‌ ಅಬ್ಬರದಲ್ಲಿ ಮಾರ್ಟಿನ್‌ ಮಿಂಚು

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

Gopilola Movie Review

Gopilola Movie Review: ಹೆಣ್ಣು ಮಣ್ಣಿನ ಮಧ್ಯೆ ಗೋಪಿ ಆಟ

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

ANAKU-operation

Udupi: “ಸಾಗರ್‌ ಕವಚ್‌’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್‌, ವಾಹನಗಳು ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.