ಚಿತ್ರ ವಿಮರ್ಶೆ: ‘ನಟ’ನ ಜೊತೆ ದೆವ್ವದ ‘ಭಯಂಕರ’ ಆಟ


Team Udayavani, Feb 4, 2023, 1:04 PM IST

ಚಿತ್ರ ವಿಮರ್ಶೆ: ‘ನಟ’ನ ಜೊತೆ ದೆವ್ವದ ‘ಭಯಂಕರ’ ಆಟ

ಆತ ಸಿನಿಮಾ ಇಂಡಸ್ಟ್ರಿಯಲ್ಲಿ ಒಬ್ಬ ಸೂಪರ್‌ ಸ್ಟಾರ್‌ ಹೀರೋ. ಮಾಡಿದ ಸಿನಿಮಾವೆಲ್ಲ ಬ್ಲಾಕ್‌ ಬಸ್ಟರ್‌ ಆಗಿದ್ದರಿಂದ, ಸಹಜವಾಗಿಯೇ ಇವನ ಜೊತೆ ಸಿನಿಮಾ ಮಾಡಲು ನಿರ್ಮಾಪಕರು, ನಿರ್ದೇಶಕರು ತುದಿಗಾಲಿನಲ್ಲಿರುತ್ತಾರೆ. ಆದರೆ ಇವನೋ ಹೇಳಿ-ಕೇಳಿ ತಿಕ್ಕಲು ಸ್ವಭಾವದವನು. ಸ್ವಲ್ಪ ಹೆಚ್ಚು- ಕಡಿಮೆಯಾದರೂ ತನ್ನೊಂದಿಗೆ ಸಿನಿಮಾ ಮಾಡುವ ನಿರ್ಮಾಪಕರು, ನಿರ್ದೇಶಕರನ್ನು ತನ್ನ ಕು(ಕಪಿ)ಚೇಷ್ಟೆಯಿಂದ ಹೈರಾಣಾಗಿಸದೆ ಬಿಡಲಾರ. ಮುಂದೆ ಎಲ್ಲರಿಂದ ಹೊಗಳಿಸಿಕೊಳ್ಳುವ, ಹಿಂದಿನಿಂದ ಹಿಡಿ ಶಾಪ ಹಾಕಿಸಿಕೊಳ್ಳುವ ಇಂಥ ಸೂಪರ್‌ ಸ್ಟಾರ್‌ ಹೀರೋ ಒಬ್ಬ ಕುರುಡಿ ದೆವ್ವದ ಕೈಯಲ್ಲಿ ಸಿಕ್ಕಿ ಹಾಕಿಕೊಂಡರೆ ಅವನ ಪಾಡು ಹೇಗಿರಬಹುದು? ಇಂಥದ್ದೊಂದು ಕಥೆಯನ್ನು ಇಟ್ಟುಕೊಂಡು ಈ ವಾರ ತೆರೆಗೆ ಬಂದಿರುವ ಚಿತ್ರ “ನಟ ಭಯಂಕರ’.

ಇನ್ನು ಸಿನಿಮಾದ ಟೈಟಲ್ಲೇ ಹೇಳುವಂತೆ ಒಬ್ಬ ಸೂಪರ್‌ ಸ್ಟಾರ್‌ “ನಟ’ ಮತ್ತು “ಭಯಂಕರ’ ದೆವ್ವದ ಸುತ್ತ ಇಡೀ ಸಿನಿಮಾದ ಕಥೆ ಸಾಗುತ್ತದೆ. ಕನ್ನಡದಲ್ಲಿ ಸ್ವಲ್ಪ ವಿರಳ ಎಂದೇ ಹೇಳಲಾಗುವ ಹಾರರ್‌-ಕಾಮಿಡಿ ಶೈಲಿಯಲ್ಲಿ ಇಡೀ ಸಿನಿಮಾವನ್ನು ತೆರೆಮೇಲೆ ತರಲಾಗಿದೆ. ಹಾರರ್‌-ಕಾಮಿಡಿ ಜೊತೆಗೆ ಲವ್‌, ರೊಮ್ಯಾಂಟಿಕ್‌ ಸಾಂಗ್ಸ್‌, ಫೈಟ್ಸ್‌ ಹೀಗೆ ಒಂದಷ್ಟು ಎಂಟರ್‌ಟೈನ್ಮೆಂಟ್‌ ಎಲಿಮೆಂಟ್ಸ್‌ ಸೇರಿಸಿ ಕಂಪ್ಲೀಟ್‌ ಪ್ಯಾಕೇಜ್‌ ಸಿನಿಮಾ ಕೊಡುವ ಪ್ರಯತ್ನ ಮಾಡಿದ್ದಾರೆ. ನಟ ಕಂ ನಿರ್ದೇಶಕ ಪ್ರಥಮ್‌. ಸಿನಿಮಾದ ಕಥೆ ಎಳೆ ಚೆನ್ನಾಗಿದ್ದರೂ, ಚಿತ್ರಕಥೆ ಮತ್ತು ಕೆಲ ಅನಗತ್ಯ ಸಂಭಾಷಣೆಗಳಿಗೆ ಕತ್ತರಿ ಪ್ರಯೋಗ ಮಾಡಿದ್ದರೆ, “ನಟ ಭಯಂಕರ’ನ ಓಟ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿದ್ದವು.

ಇದನ್ನೂ ಓದಿ:ಮಡಿಕೇರಿಯ ರಾಜಾಸೀಟ್‌ನಲ್ಲಿ ಕಣ್ಮನ ಸೆಳೆಯುತ್ತಿದೆ ಫಲಪುಷ್ಪ ಪ್ರದರ್ಶನ

ಇನ್ನು “ನಟ ಭಯಂಕರ’ ಸಿನಿಮಾದಲ್ಲಿ ಪ್ರಥಮ್‌ ಅವರದ್ದು ಡಬಲ್‌ ರೋಲ್‌ ಎನ್ನಬಹುದು. ತೆರೆಮುಂದೆ ನಾಯಕನಾಗಿ, ತೆರೆಹಿಂದೆ ನಿರ್ದೇಶಕನಾಗಿ ಎರಡೂ ಪಾತ್ರವನ್ನು ಪ್ರಥಮ್‌ ನಿಭಾಯಿಸಿದ್ದಾರೆ. ಎರಡರಲ್ಲೂ ಪ್ರಥಮ್‌ ಹಾಕಿರುವ ಪರಿಶ್ರಮ ತೆರೆಮೇಲೆ ಕಾಣುತ್ತದೆ.

ಇನ್ನು ನಾಯಕಿಯರಾದ ನಿಹಾರಿಕಾ, ಸುಶ್ಮಿತಾ ಜೋಶಿ ತಮ್ಮ ಪಾತ್ರಗಳಿಂದ ಇಷ್ಟವಾಗುತ್ತಾರೆ. ಉಳಿದಂತೆ ಕುರಿ ಪ್ರತಾಪ್‌, ಓಂ ಪ್ರಕಾಶ್‌ ರಾವ್‌ ಅಲ್ಲಲ್ಲಿ ನಗುವಿನ ಕಚಗುಳಿ ಇಟ್ಟರೆ, ಸಾಯಿಕುಮಾರ್‌ ಮತ್ತು ಶೋಭರಾಜ್‌ ತಮ್ಮ ವಿಭಿನ್ನ ಮ್ಯಾನರಿಸಂನಿಂದ ಗಮನ ಸೆಳೆಯುತ್ತಾರೆ.

 ಜಿ.ಎಸ್‌.ಕಾರ್ತಿಕ ಸುಧನ್

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidlingu 2 Movie Review

Sidlingu 2 Review ಫ್ಯಾಮಿಲಿ ಡ್ರಾಮಾದಲ್ಲಿ ವಿಜಯ ಪ್ರಸಾದ

Raju James Bond Review

Raju James Bond Review: ಕಾಸಿಗಾಗಿ ಜೇಮ್ಸ್‌ ಜೂಟಾಟ

Bhuvanam Gaganam Review

Bhuvanam Gaganam Review: ಪ್ರೇಮದ ಹಾದಿಯಲ್ಲಿ ಸುಮ ಘಮ

Mr.Rani movie review: ನಾನು ಅವಳಲ್ಲ ಅವನು!

Mr.Rani movie review: ನಾನು ಅವಳಲ್ಲ ಅವನು!

Gajarama Movie Review

Gajarama Movie Review: ಪ್ರೀತಿ ಮಧುರ ತ್ಯಾಗ ಅಮರ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.