Movie review: ಜೀವ-ಜೀವನದ ಸುತ್ತ ‘ಪೆಂಟಗನ್‌’


Team Udayavani, Apr 8, 2023, 12:24 PM IST

pentagon kannada movie review

ಗುರುದೇಶಪಾಂಡೆ ನಿರ್ಮಾಣದಲ್ಲಿ ಮೂಡಿಬಂದಿರುವ “ಪೆಂಟಗನ್‌’ ಐದು ಕಥಾಹಂದರದ ಗುತ್ಛಗಳಿರುವ ಸಿನಿಮಾ. ಪ್ರೇಮ ವೈಫ‌ಲ್ಯದಿಂದ ಮನನೊಂದು ಬದುಕು ಕೊನೆಗಾಣಿಸಲು ಹೊರಟ ಯುವಕನ ಜೀವನದಲ್ಲಿ ಪರಿಸ್ಥಿತಿಗಳು ಹೇಗೆಲ್ಲ ಆಟವಾಡುತ್ತದೆ ಎಂಬುದು ಚಿತ್ರ ಮೊದಲ ಕಥೆಯಲ್ಲಿದ್ದರೆ, ಜೊತೆಗಿದ್ದವರು ಬದುಕಿದ್ದಾಗ ಜೀವನವನ್ನೇ “ಮೈಸೂರು ಪಾಕ್‌’ನಂತೆ ಅವರೊಂದಿಗೆ ಆಸ್ವಾಧಿಸಬೇಕು ಎಂಬ ಸಂದೇಶ ಎರಡನೇ ಕಥೆಯಲ್ಲಿದೆ. ಮೂರನೇ ಕಥೆಯಲ್ಲಿ ಆನ್‌ಲೈನ್‌ ವಂಚನೆ ತೆರೆದುಕೊಂಡರೆ, ನಾಲ್ಕನೇ ಕಥೆಯಲ್ಲಿ ಜಾತಿವೈಷಮ್ಯಕ್ಕೆ ಉಸಿರು ಚೆಲ್ಲುವ ಅಮಾಯಕ ಜೀವಗಳ ಚಿತ್ರಣವಿದೆ. ಅಂತಿಮವಾಗಿ ಬರುವ ಐದನೇ ಕಥೆಯೊಳಗೆ ಸಮಯದ ಸುಳಿಗೆ ಸಿಲುಗಿ ಡಾನ್‌ ಪಟ್ಟಗಿಟ್ಟಿಸಿಕೊಂಡ ಹೋರಾಟಗಾರನೊಬ್ಬನ ಬದುಕಿನ ವರ್ತಮಾನದ ವ್ಯಥೆಯಿದೆ.

ಇನ್ನು ಆರಂಭದಲ್ಲಿಯೇ ಚಿತ್ರತಂಡ ಹೇಳಿಕೊಂಡಂತೆ “ಪೆಂಟಗನ್‌’ ಒಂದು ಆ್ಯಂಥಾಲಜಿ ಶೈಲಿಯ ಸಿನಿಮಾ. ಐದು ಬೇರೆ ಬೇರೆ ಹಿನ್ನೆಲೆಯ ಐದು ಕಥೆಗಳನ್ನು ಇಟ್ಟುಕೊಂಡು ನಿರ್ದೇಶಕರಾದ ಆಕಾಶ್‌ ಶ್ರೀವತ್ಸ, ಚಂದ್ರಮೋಹನ್‌, ರಾಘು ಶಿವಮೊಗ್ಗ, ಕಿರಣ್‌ ಕುಮಾರ್‌ ಮತ್ತು ಗುರುದೇಶಪಾಂಡೆ ಐವರೂ ಕೂಡ ಸಾವು ಮತ್ತು ಬದುಕಿನ ನಡುವಿನ ಪ್ರಯಾಣದ ಹಲವು ಸ್ತರಗಳನ್ನು ತಮ್ಮದೇ ಆದ ಶೈಲಿಯಲ್ಲಿ ತೆರೆಮೇಲೆ ತಂದಿದ್ದಾರೆ.

ಪ್ರತಿಕಥೆಯಲ್ಲೂ ಅದರದ್ದೇ ಆದ ಪಾತ್ರಗಳು, ಅದಕ್ಕೆ ತಕ್ಕಂತ ಕಲಾವಿದರು ಮತ್ತು ತಂತ್ರಜ್ಞರಿರುವುದರಿಂದ, “ಪೆಂಟಗನ್‌’ ಸಿನಿಮಾದಲ್ಲಿ ಬರುವ ಪ್ರತಿ ಕಥೆಯೂ ಹೊಸರೀತಿಯಲ್ಲಿ ತೆರೆಮೇಲೆ ತೆರೆದುಕೊಳ್ಳುತ್ತದೆ. ಹೀಗಾಗಿ ಇಡೀ ಸಿನಿಮಾದಲ್ಲಿ ಬೃಹತ್‌ ಕಲಾವಿದರ ದಂಡೇ ಕಾಣಬಹುದು. ಪ್ರತಿ ಕಥೆಯನ್ನೂ ಅದಕ್ಕೊಂದು ಬಲವಾದ ಹಿನ್ನೆಲೆಯನ್ನು ಇಟ್ಟುಕೊಂಡು ಚಿತ್ರಕಥೆ ಮೂಲಕ ಕಟ್ಟಿಕೊಡಲಾಗಿರುವುದು ಸಿನಿಮಾದ ಹೈಲೈಟ್ಸ್‌ಗಳಲ್ಲೊಂದು.

ನೋಡುಗರನ್ನು ಪ್ರಚೋದಿಸುತ್ತಲೇ “ಪೆಂಟಗನ್‌’ನಲ್ಲಿ ಹೊಸ ಕಥೆ ತೆರೆದುಕೊಳ್ಳುತ್ತದೆ. ಪ್ರತಿ ಕಥೆಯಲ್ಲೂ ಚರ್ಚೆ, ತರ್ಕ, ವಾದಗಳನ್ನು ಮುಂದಿಡುತ್ತಲೇ “ಪೆಂಟಗನ್‌’ ಮುಂದಕ್ಕೆ ಸಾಗುತ್ತದೆ. ಎಲ್ಲ ವರ್ಗದ ಪ್ರೇಕ್ಷಕರನ್ನೂ ಗಮನದಲ್ಲಿ ಇಟ್ಟುಕೊಂಡು, ಅಭಿರುಚಿಗೆ ತಕ್ಕಂತೆ ಕಥೆಯನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ಚಿತ್ರತಂಡ ಯಶಸ್ವಿಯಾಗಿದೆ.

ಕನ್ನಡ ಚಿತ್ರರಂಗದಲ್ಲಿ ಅಪರೂಪ ಎಂದೇ ಹೇಳಲಾಗುವ ಆ್ಯಂಥಾಲಜಿ ಶೈಲಿಯ “ಪೆಂಟಗನ್‌’ ಅಂತಿಮವಾಗಿ ತನ್ನ ಕಥಾಹಂದರ, ನಿರೂಪಣೆ ಮತ್ತು ಪ್ರಯೋಗದಿಂದಾಗಿ ಒಮ್ಮೆ ನೋಡಬಹುದಾದ ಸಿನಿಮಾ ಎನಿಸಿಕೊಳ್ಳುತ್ತದೆ.

ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidlingu 2 Movie Review

Sidlingu 2 Review ಫ್ಯಾಮಿಲಿ ಡ್ರಾಮಾದಲ್ಲಿ ವಿಜಯ ಪ್ರಸಾದ

Raju James Bond Review

Raju James Bond Review: ಕಾಸಿಗಾಗಿ ಜೇಮ್ಸ್‌ ಜೂಟಾಟ

Bhuvanam Gaganam Review

Bhuvanam Gaganam Review: ಪ್ರೇಮದ ಹಾದಿಯಲ್ಲಿ ಸುಮ ಘಮ

Mr.Rani movie review: ನಾನು ಅವಳಲ್ಲ ಅವನು!

Mr.Rani movie review: ನಾನು ಅವಳಲ್ಲ ಅವನು!

Gajarama Movie Review

Gajarama Movie Review: ಪ್ರೀತಿ ಮಧುರ ತ್ಯಾಗ ಅಮರ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.