ಚಿತ್ರವಿಮರ್ಶೆ: ‘ಹಂಡ್ರೆಡ್‌’ ಪರ್ಸೆಂಟ್‌ ಥ್ರಿಲ್‌ ಕೊಡೋ ನೆಟ್ ಸ್ಟೋರಿ


Team Udayavani, Nov 20, 2021, 11:30 AM IST

ramesh aravind

ಲಾಕ್‌ಡೌನ್‌ ಬಳಿಕ ವಾರಕ್ಕೆ ಐದಾರು ಸಿನಿಮಾಗಳು ಬಿಡುಗಡೆಯಾಗುತ್ತಿದ್ದರೂ, ಮನೆಮಂದಿ ಎಲ್ಲ ಒಟ್ಟಿಗೆ ಕೂತು ನೋಡುವಂಥ ಸಿನಿಮಾಗಳು ಬರುತ್ತಿಲ್ಲ ಎನ್ನುತ್ತಿದ್ದ ಫ್ಯಾಮಿಲಿ ಆಡಿಯನ್ಸ್‌ಗೆ ಅವರು ನಿರೀಕ್ಷಿಸಿರುವಂಥ ಸಿನಿಮಾವೊಂದು ತೆರೆಗೆ ಬಂದಿದೆ. ಅದೇ “100′.

ಇಲ್ಲೊಂದು ಹೊಸಥರದ ಕಥೆ ಇದೆ. ಭಾವನಾತ್ಮಕ ಸನ್ನಿವೇಶಗಳಿವೆ, ಸೀಟ್‌ನಲ್ಲಿ ಕೊನೆವರೆಗೂ ಹಿಡಿದು ಕೂರಿಸುವಂಥ ಕೌತುಕದ ಅಂಶಗಳಿವೆ, ಕೊನೆಗೊಂದು ಮೆಸೇಜ್‌ ಇದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ನಮ್ಮ ನಡುವೆಯೇ ನಡೆಯುವಂಥ ಘಟನೆಗಳೇ ತೆರೆಮೇಲೂ ಕಾಣುವುದರಿಂದ, ಸಿನಿಮಾ ಎಲ್ಲ ವರ್ಗದ ಪ್ರೇಕ್ಷಕರಿಗೂ ಕನೆಕ್ಟ್ ಆಗುತ್ತದೆ. ಒಟ್ಟಾರೆ “100′ ಅನ್ನೋದು ಮನೆಮಂದಿ ಕುಳಿ ತು ನೋಡುವಂಥ, ಔಟ್‌ ಆ್ಯಂಡ್‌ ಔಟ್‌ ಫ್ಯಾಮಿಲಿ ಎಂಟರ್‌ ಟೈನರ್‌ ಸಿನಿಮಾ ಅನ್ನೋದರಲ್ಲಿ ಎರಡು ಮಾತಿಲ್ಲ

ಇನ್ನು “100′ ಸಿನಿಮಾದ ಕಥಾಹಂದರದ ಬಗ್ಗೆ ಹೇಳುವುದಾದರೆ, ಇದೊಂದು ಸೈಬರ್‌ ಕ್ರೈಂ ಸುತ್ತ ನಡೆಯುವ ಸಿನಿಮಾ. ಮನೆಯೊಳಗೆ ನಮ್ಮ ಕುಟುಂಬದ ಸದಸ್ಯರು ಭೌತಿಕವಾಗಿ ನೆಮ್ಮದಿಯಾಗಿ, ಸೇಫ್ ಆಗಿದ್ದರೂ, ನಮ್ಮ ಕೈಯಲ್ಲಿರುವ ಮೊಬೈಲ್‌ ಪೋನ್‌ ಮತ್ತು ಇಂಟರ್‌ನೆಟ್‌ ಎಂಬ ಮತ್ತೂಂದು ಜಗತ್ತಿನಲ್ಲಿ ಯಾರೂ ನೆಮ್ಮದಿಯಾಗಿ, ಸೇಫ್ ಆಗಿ ಇರಲು ಸಾಧ್ಯವಿಲ್ಲ. ಗೊತ್ತಿಧ್ದೋ, ಗೊತ್ತಿಲ್ಲದೆಯೋ.., ಎಲ್ಲರೂ ಅಂತರ್ಜಾಲದ ಸುಳಿಯೊಳಗೆ ಸಿಲುಕಿಕೊಂಡಿರುತ್ತೇವೆ. ಹೀಗೆ ಈ ನೆಟ್‌ ಲೋಕದ ಸುಳಿಯೊಳಗೆ, ಸಿಲುಕಿಕೊಂಡ ವಿಷ್ಣು (ರಮೇಶ್‌ ಅರವಿಂದ್‌) ಎಂಬ ಪೊಲೀಸ್‌ ಇಲಾಖೆಯ ಸೈಬರ್‌ ಕ್ರೈಂ ಅಧಿಕಾರಿಯ ಫ್ಯಾಮಿಲಿಯ ಸುತ್ತ ಇಡೀ ಸಿನಿಮಾ ಸಾಗುತ್ತದೆ. ಜನಸಾಮಾನ್ಯರಿಂದ ಹಿಡಿದು, ಉದ್ಯಮಿಗಳು, ರಾಜಕಾರಣಿಗಳು, ಪೊಲೀಸ್‌ ಅಧಿಕಾರಿಗಳು ಯಾರೂ ಕೂಡ ಈ ಸೈಬರ್‌ ಲೋಕದಲ್ಲಿ ಸುರಕ್ಷಿತರಲ್ಲ ಎಂಬ ವಾಸ್ತವ ಸತ್ಯದ ಜೊತೆಗೆ ಸಿನಿಮಾದ ಕಥೆ ತೆರೆದು ಕೊಳ್ಳುತ್ತದೆ. ಜನಸಾಮಾನ್ಯರನ್ನು ರಕ್ಷಿಸಬೇಕಾದ ಪೊಲೀಸ್‌ ಅಧಿಕಾರಿಯೇ ತನ್ನ ಫ್ಯಾಮಿಲಿಯನ್ನು ರಕ್ಷಿಸಿಕೊಳ್ಳಲು ಹೇಗೆಲ್ಲ ಹೋರಾಟ ಮಾಡುತ್ತಾನೆ. ಕೊನೆಗೆ ಈ ನೆಟ್‌ ಲೋಕದ ಗುದ್ದಾಟದಲ್ಲಿ ವಿಷ್ಣು ಗೆಲ್ಲುತ್ತಾನಾ? ಅಂತರ್ಜಾಲದ ಅಸಲಿಯತ್ತೇನು? ಅನ್ನೋದು “100′ ಸಿನಿಮಾದ ಕ್ಲೈಮ್ಯಾಕ್ಸ್‌. ಅದು ಗೊತ್ತಾಗುವ ಹೊತ್ತಿಗೆ ಸಿನಿಮಾ ಮುಗಿದಿರುವುದೂ ಪ್ರೇಕ್ಷಕರಿಗೆ ಗೊತ್ತಾಗಿರುವುದಿಲ್ಲ.

ಇದನ್ನೂ ಓದಿ:”ಭೂಗತ ಹಾದಿಯಲ್ಲಿ ಸಿಕ್ಕ ಕೆಂಪು ಗುಲಾಬಿ”: ಗರುಡ ಗಮನ ವೃಷಭ ವಾಹನ ಚಿತ್ರ ವಿಮರ್ಶೆ

ಆಗಾಗ್ಗೆ ಪತ್ರಿಕೆಗಳು, ಟಿವಿಗಳಲ್ಲಿ ವರದಿಯಾಗುವ ಸೈಬರ್‌ ಕ್ರೈಂ ಅಂಶವನ್ನು ಇಟ್ಟುಕೊಂಡು ಅದನ್ನು ಕುತೂಹಲಭರಿತವಾಗಿ “100′ ಸಿನಿಮಾ ಮೂಲಕ ಪ್ರೇಕ್ಷಕರ ಮುಂದೆ ತರುವಲ್ಲಿ ನಟ ಕಂ ನಿರ್ದೇಶಕ ರಮೇಶ್‌ ಅರವಿಂದ್‌ ಯಶಸ್ವಿಯಾಗಿದ್ದಾರೆ.

ಡ್ಯಾನ್ಸ್‌, ಆ್ಯಕ್ಷನ್‌, ಕಾಮಿಡಿ, ಲವ್‌, ಎಮೋಶನ್ಸ್‌ ಹೀಗೆ ಎಲ್ಲ ಅಂಶಗಳು ಚಿತ್ರಕಥೆಯಲ್ಲಿ ಹದವಾಗಿ ಬೆರೆತಿತುವುದರಿಂದ “100′ ಎಲ್ಲ ವರ್ಗದ ಆಡಿಯನ್ಸ್‌ಗೂ ಇಷ್ಟವಾಗುವಂತಿದೆ. ತೆರೆಮೇಲೂ ರಮೇಶ್‌, ರಚಿತಾ, ಪೂರ್ಣ ಹೀಗೆ ಬಹುತೇಕ ಕಲಾವಿದರು ತಮ್ಮ ಅಭಿನಯದಲ್ಲಿ ನೋಡುಗರಿಗೆ ಆಪ್ತವಾಗುತ್ತ ಹೋಗುತ್ತಾರೆ. ಚಿತ್ರದ ಒಂದೆರಡು ಹಾಡುಗಳು, ಸಂಭಾಷಣೆ ಗಮನ ಸೆಳೆಯುತ್ತದೆ. ಛಾಯಾಗ್ರಹಣ ಮತ್ತು ಸಂಕಲನ ಮತ್ತು ಹಿನ್ನೆಲೆ ಸಂಗೀತ ಎಲ್ಲವೂ ಚಿತ್ರದ ಪ್ಲಸ್‌ ಎನ್ನಬಹುದು. ಹೊಸಥರದ ಸಿನಿಮಾಗಳನ್ನು ನಿರೀಕ್ಷಿಸುವ, ಎಂಟರ್‌ಟೈನ್ಮೆಂಟ್‌ ಜೊತೆಗೆ ಮೆಸೇಜ್‌ ಇರುವಂಥ “100′ ಸಿನಿಮಾವನ್ನು ಒಮ್ಮೆ ಫ್ಯಾಮಿಲಿ ಜೊತೆ ನೋಡಿಬರಲು ಅಡ್ಡಿಯಿಲ್ಲ.

ಜಿ.ಎಸ್.ಕಾರ್ತಿಕ ಸುಧನ್

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidlingu 2 Movie Review

Sidlingu 2 Review ಫ್ಯಾಮಿಲಿ ಡ್ರಾಮಾದಲ್ಲಿ ವಿಜಯ ಪ್ರಸಾದ

Raju James Bond Review

Raju James Bond Review: ಕಾಸಿಗಾಗಿ ಜೇಮ್ಸ್‌ ಜೂಟಾಟ

Bhuvanam Gaganam Review

Bhuvanam Gaganam Review: ಪ್ರೇಮದ ಹಾದಿಯಲ್ಲಿ ಸುಮ ಘಮ

Mr.Rani movie review: ನಾನು ಅವಳಲ್ಲ ಅವನು!

Mr.Rani movie review: ನಾನು ಅವಳಲ್ಲ ಅವನು!

Gajarama Movie Review

Gajarama Movie Review: ಪ್ರೀತಿ ಮಧುರ ತ್ಯಾಗ ಅಮರ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.