ಚಿತ್ರ ವಿಮರ್ಶೆ: ಆ್ಯಕ್ಷನ್‌ ಅಬ್ಬರದಲ್ಲಿ ರಣ ಕಹಳೆ


Team Udayavani, Mar 27, 2021, 9:09 AM IST

ranam kannada movie

ದೇಶದಾದ್ಯಂತ ರೈತಪರ ಹೋರಾಟ, ಖಾಸಗೀಕರಣದ ಪರ-ವಿರೋಧ ಚರ್ಚೆಗಳು ಜೋರಾಗಿ ನಡೆಯುತ್ತಿರುವಂತೆಯೇ ಅಂಥಹದೇ ಕಥಾಹಂದರ ಹೊಂದಿರುವ ರಣಂ ಚಿತ್ರ ಈ ವಾರ ತೆರೆಗೆ ಬಂದಿದೆ.

ಮೂಲ ಸೌಕರ್ಯಗಳಿಂದ ವಂಚಿತರಾದ, ನೀರಾವರಿ, ಮಳೆ-ಬೆಳೆಯಿಲ್ಲದೆ ಕಂಗೆಟ್ಟ ಹಳ್ಳಿಯ ರೈತರ ಜಮೀನನ್ನು ಕಬ ಳಿಸಲು ಹೊಂಚು ಹಾಕುವ ರಾಜಕಾರಣಿ ವಿರುದ್ದ ಸಿಡಿದೇಳುವ ಕೆಲ ಯುವಕರು ತಮ್ಮದೇ ರಣವ್ಯೂಹದಲ್ಲಿ ಆತನನ್ನು ಸಿಲುಕಿಸಿ, ಹೇಗೆ ನ್ಯಾಯ ಪಡೆಯುತ್ತಾರೆ. ವ್ಯವಸ್ಥೆಯಲ್ಲಿನ ಲೋಪಗಳನ್ನು ಬಳಸಿಕೊಂಡು ಹೇಗೆ ಜನರಿಗೆ ನ್ಯಾಯ ಕೊಡಿಸುತ್ತಾರೆ ಎನ್ನುವುದು ರಣಂ ಚಿತ್ರದ ಕಥಾಹಂದರ. ಅದು ಹೇಗೆಲ್ಲ ನಡೆಯುತ್ತದೆ ಅನ್ನೋದನ್ನ ತೆರೆಮೇಲೆ ನೋಡಬೇಕು.

“ರಣಂ’ ಚಿತ್ರದ ಹೆಸರೇ ಹೇಳುವಂತೆ, ಇದೊಂದು ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಕಥಾಹಂದರ ಹೊಂದಿರುವ ಚಿತ್ರ. ರೈತಸಮಸ್ಯೆ, ಭ್ರಷ್ಟಾಚಾರ, ಯುವಕರ ಹೋರಾಟ ಹೀಗೆ ಹತ್ತಾರು ವಿಷಯಗಳನ್ನು ಪೋಣಿಸಿ ಕಥೆಯನ್ನು ತೆರೆಮೇಲೆ ಹೇಳಿದ್ದಾರೆ ನಿರ್ದೇಶಕ ವಿ. ಸಮುದ್ರ. ಚಿತ್ರದ ಕಥೆ ಚೆನ್ನಾಗಿದ್ದರೂ, ರಣಂ ಚಿತ್ರಕಥೆ, ನಿರೂಪಣೆಗಿಂತ ನಿರ್ದೇಶಕರು ಮೇಕಿಂಗ್‌ ಕಡೆಗೇ ಹೆಚ್ಚು ಗಮನ ಕೊಟ್ಟಂತಿದೆ. ಮೇಕಿಂಗ್‌ನಂತೆಯೇ ಚಿತ್ರದ ಸ್ಕ್ರಿಪ್ಟ್ ಕಡೆಗೂ ನಿರ್ದೇಶಕರು ಇನ್ನಷ್ಟು ಗಮನ ಕೊಟ್ಟಿದ್ದರೆ ರಣಂ ಇನ್ನೂ ಪರಿಣಾಮಕಾರಿಯಾಗಿ ಮೂಡಿಬರುವ ಎಲ್ಲಾ ಸಾಧ್ಯತೆಗಳಿದ್ದವು.

ಒಂದು ಪ್ರಯತ್ನವಾಗಿ “ರಣಂ’ ಚಿತ್ರ ವನ್ನು ಮೆಚ್ಷಬಹುದು. ಸಾಕಷ್ಟು ಅಂಶ ಗಳು ಇಲ್ಲಿ ಗಮನ ಸೆಳೆಯುತ್ತಾ ಸಾಗುತ್ತವೆ. ಇಲ್ಲಿಯವರೆಗೆ ಲವರ್‌ಬಾಯ್‌ ಆಗಿ ಸ್ಮಾರ್ಟ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದ ಚೇತನ್‌ ರಣಂ ಚಿತ್ರದಲ್ಲಿ ಕೊಂಚ ರಗಡ್‌ ಲುಕ್‌ನಲ್ಲಿ ಆ್ಯಕ್ಷನ್ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ. ರಫ್ ಆ್ಯಂಡ್‌ ಟಫ್ ಪೊಲೀಸ್‌ ಅಧಿಕಾರಿಯಾಗಿ ಚಿರು ಸರ್ಜಾ ತಮ್ಮ ಅಭಿನಯದಲ್ಲಿ ಗಮನ ಸೆಳೆಯುತ್ತಾರೆ. ಇನ್ನು ನಾಯಕಿ ವರಲಕ್ಷ್ಮೀ ಕೂಡ ಚಿತ್ರದಲ್ಲಿ ಆ್ಯಕ್ಷನ್‌ ಲೇಡಿಯಾಗಿ ಕಾಣಿಸಿಕೊಂಡಿದ್ದು, ತಮ್ಮ ಮ್ಯಾನರಿಸಂ ಮೂಲಕ ವರಲಕ್ಷ್ಮೀ ಕೂಡ ಗಮನ ಸೆಳೆಯುತ್ತಾರೆ.

ಚಿತ್ರದಲ್ಲಿ ಸಾಧುಕೋಕಿಲ, ಬುಲೆಟ್‌ ಪ್ರಕಾಶ್‌ ಕಾಮಿಡಿ ಕಚಗುಳಿ ಇಡುವ ಪ್ರಯತ್ನ ಮಾಡಿದ್ದಾರೆ. ಉಳಿದಂತೆ ಚಿತ್ರದ ಇತರ ಪಾತ್ರಗಳಲ್ಲಿ ಬಹುತೇಕ ಹೊಸ ಪ್ರತಿಭೆಗಳು ಕಾಣಿಸಿಕೊಂಡಿದ್ದು, ಬಹುತೇಕ ಕಲಾವಿದರು ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಔಟ್‌ ಆ್ಯಂಡ್‌ ಔಟ್‌ ಆ್ಯಕ್ಷನ್‌ ಎಂಟರ್‌ಟೈನ್ಮೆಂಟ್‌ ಬಯಸುವ ಮಾಸ್‌ ಆಡಿಯನ್ಸ್‌ನ ಗಮನದಲ್ಲಿ ಇಟ್ಟುಕೊಂಡು ಮಾಡಲಾದ ರಣಂ ಚಿತ್ರವನ್ನು ಆ್ಯಕ್ಷನ್‌ ಪ್ರಿಯರು ಒಮ್ಮೆ ನೋಡಲಡ್ಡಿಯಿಲ್ಲ.

  • ಜಿ.ಎಸ್‌.ಕೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidlingu 2 Movie Review

Sidlingu 2 Review ಫ್ಯಾಮಿಲಿ ಡ್ರಾಮಾದಲ್ಲಿ ವಿಜಯ ಪ್ರಸಾದ

Raju James Bond Review

Raju James Bond Review: ಕಾಸಿಗಾಗಿ ಜೇಮ್ಸ್‌ ಜೂಟಾಟ

Bhuvanam Gaganam Review

Bhuvanam Gaganam Review: ಪ್ರೇಮದ ಹಾದಿಯಲ್ಲಿ ಸುಮ ಘಮ

Mr.Rani movie review: ನಾನು ಅವಳಲ್ಲ ಅವನು!

Mr.Rani movie review: ನಾನು ಅವಳಲ್ಲ ಅವನು!

Gajarama Movie Review

Gajarama Movie Review: ಪ್ರೀತಿ ಮಧುರ ತ್ಯಾಗ ಅಮರ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.