T.R.P. Rama movie review; ಬ್ರೇಕಿಂಗ್‌ ನ್ಯೂಸ್‌ನಿಂದ ಬಸವಳಿದ ಬದುಕು!


Team Udayavani, Nov 4, 2023, 10:54 AM IST

T.R.P. Rama movie review; ಬ್ರೇಕಿಂಗ್‌ ನ್ಯೂಸ್‌ನಿಂದ ಬಸವಳಿದ ಬದುಕು!

ಇಂದಿನ ದಿನಗಳಲ್ಲಿ ಸುದ್ದಿ ಮಾಧ್ಯಮಗಳಲ್ಲಿ ಒಳ್ಳೆಯ ಟಿಆರ್‌ಪಿ ತಮ್ಮದಾಗಿಸಿಕೊಳ್ಳಲು ಟಿ. ವಿ ಚಾನೆಲ್‌ಗ‌ಳು ಏನೆಲ್ಲ ಕಸರತ್ತುಗಳು, ಸಾಹಸಗಳನ್ನು ಮಾಡುತ್ತವೆ ಎಂಬುದು ಬಹುತೇಕರು ಬಲ್ಲರು. ಸುದ್ದಿ ವಾಹಿನಿಗಳ ವರದಿಗಾರರು, ಪತ್ರಕರ್ತರು, ಸಿಬ್ಬಂದಿಯ ಕೆಲಸದ ಒತ್ತಡ ಹೇಗಿರುತ್ತದೆ ಎಂಬುದು ಹತ್ತಿರದಿಂದ ಕಂಡವರಷ್ಟೇ ಗೊತ್ತು. ಪ್ರತಿದಿನ ಬ್ರೇಕಿಂಗ್‌ ಸುದ್ದಿಯನ್ನು ಬೆನ್ನುಹತ್ತುವ, ಟಿಆರ್‌ಪಿ ರೇಸಿಂಗ್‌ನಲ್ಲಿ ಮುಗಿಬೀಳುವ ಸುದ್ದಿ ವಾಹಿನಿಗಳು, ತಮ್ಮ ಸುದ್ದಿಯ ಸತ್ಯಾಸತ್ಯತೆಗಳನ್ನು ಪರಾಮರ್ಶಿಸದೆ ಹೋದರೆ, ಏನೆಲ್ಲ ಅನಾಹುತಗಳಾಗುತ್ತದೆ ಎಂಬು ವಿಷಯವನ್ನು ಇಟ್ಟುಕೊಂಡು ಈ ವಾರ ತೆರೆಗೆ ಬಂದಿರುವ ಸಿನಿಮಾ “ಟಿಆರ್‌ಪಿ ರಾಮ’.

“ಟಿಆರ್‌ಪಿ ರಾಮ’ ಸಿನಿಮಾದ ಟೈಟಲ್ಲೇ ಹೇಳುವಂತೆ, ಖಾಸಗಿ ಸುದ್ದಿವಾಹಿನಿಯೊಂದರ “ಟಿಆರ್‌ಪಿ’ ಏರಲು “ರಾಮ’ ಎಂಬ ಹಳ್ಳಿಯ ಹುಡುಗನೊಬ್ಬ ಹೇಗೆ ಸರಕಾಗುತ್ತಾನೆ. ಈ ರಾಮ ಯಾರು? ಅವನ ಹಿನ್ನೆಲೆಯೇನು? ಅವನನ್ನು ಸಮಾಜ ಮತ್ತು ವ್ಯವಸ್ಥೆ ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತದೆ? ಎಂಬುದೇ “ಟಿಆರ್‌ಪಿ ರಾಮ’ ಸಿನಿಮಾದ ಕಥಾಹಂದರ. ಅಂತಿಮವಾಗಿ ಇದೆಲ್ಲದಕ್ಕೂ ಉತ್ತರವೇನು? ಎಂಬುದನ್ನು ನಿರ್ದೇಶಕರು ಕ್ಲೈಮ್ಯಾಕ್ಸ್‌ ನಲ್ಲಿ ಕೊಡುವ ಪ್ರಯತ್ನ ಮಾಡಿದ್ದಾರೆ.

ಪ್ರಸ್ತುತ ವಿಷಯಗಳ ಸುತ್ತ “ಟಿಆರ್‌ಪಿ ರಾಮ’ ಸಿನಿಮಾದ ಕಥೆ ತೆರೆದುಕೊಳ್ಳುತ್ತದೆ. ಆದರೆ ಅದನ್ನು ಚಿತ್ರಕಥೆ, ನಿರೂಪಣೆಯಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ತೆರೆದಿಡುವ ಪ್ರಯತ್ನದಲ್ಲಿ ಚಿತ್ರತಂಡ ಹಿಂದುಳಿದಿದೆ. ತಾಯಿ-ಮಗನ ನಡುವಿನ ಭಾವನಾತ್ಮಕ ಸನ್ನಿವೇಶಗಳು ಸಿನಿಮಾದ ಹೈಲೈಟ್ಸ್‌. ಸಿನಿಮಾದ ಕೆಲವೊಂದು ದೃಶ್ಯಗಳಿಗೆ ಕತ್ತರಿ ಪ್ರಯೋಗಿಸಿ, ಚಿತ್ರಕಥೆ-ನಿರೂಪಣೆಗೆ ಕೊಂಚ ವೇಗ ನೀಡಿದ್ದರೆ, “ಟಿಆರ್‌ಪಿ ರಾಮ’ ಇನ್ನಷ್ಟು ವೇಗವಾಗಿ ನೋಡುಗರ ಮನಮುಟ್ಟುವ ಸಾಧ್ಯತೆಗಳಿದ್ದವು.

ಸುಮಾರು ಮೂರು ದಶಕಗಳ ನಂತರ ಮತ್ತೆ ಕನ್ನಡಕ್ಕೆ ಮರಳಿರುವ ಹಿರಿಯ ನಟಿ ಮಹಾಲಕ್ಷ್ಮೀ, ತಮ್ಮ ಸೆಕೆಂಡ್‌ ಇನ್ನಿಂಗ್ಸ್‌ನ ಮೊದಲ ಪಾತ್ರದಲ್ಲೇ ನೋಡುಗರಿಗೆ ಇಷ್ಟವಾಗುತ್ತಾರೆ. ಅಸಹಾಯಕ ತಾಯಿಯ ಪಾತ್ರದಲ್ಲಿ ಮಹಾಲಕ್ಷ್ಮೀ ಅವರದ್ದು ಅದ್ಭುತ ಅಭಿನಯ. ಉಳಿದಂತೆ ವರದಿಗಾರ್ತಿಯಾಗಿ ಸ್ಪರ್ಶ, ಮಾನಸಿಕ ಅಸ್ವಸ್ಥನಾಗಿ ರವಿಪ್ರಸಾದ್‌ ತಮ್ಮ ಪಾತ್ರಗಳನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಉಳಿದಂತೆ ಇತರೆ ಪಾತ್ರಗಳು ಹಾಗೆ ಬಂದು ಹೀಗೆ ಹೋಗುವುದರಿಂದ, ಅವುಗಳ ಬಗ್ಗೆ ಹೆಚ್ಚೇನೂ ಹೇಳುವಂತಿಲ್ಲ

ಜಿ.ಎಸ್‌.ಕೆ

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sambhavami Yuge Yuge Review

Sambhavami Yuge Yuge Review; ಊರು ಗೆದ್ದ ಹಳ್ಳಿಹೈದ

love li movie review

Love Li movie review: ಪ್ರೀತಿ, ದ್ವೇಷ ಮತ್ತು ಅವನು!

Shivamma movie review;

Shivamma movie review; ಗಟ್ಟಿಗಿತ್ತಿಯ ಬದುಕಿನ ಕನಸು

Kotee movie review: ಕೋಟಿ ಲೆಕ್ಕ ಹುಲಿಬೇಟೆ ಪಕ್ಕಾ

Kotee movie review: ಕೋಟಿ ಲೆಕ್ಕ ಹುಲಿಬೇಟೆ ಪಕ್ಕಾ

Anartha Movie Review

Anartha Movie Review; ‘ಅನರ್ಥ’ದಿಂದ ಅರ್ಥದೆಡೆಗೆ ಸಸ್ಪೆನ್ಸ್‌ ಯಾನ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.