‘ವೇದ’ ಚಿತ್ರ ವಿಮರ್ಶೆ: ಸೇಡಿನ ಜ್ವಾಲೆಯಲ್ಲಿ ವೇದ ಅಧ್ಯಯನ


Team Udayavani, Dec 24, 2022, 10:01 AM IST

Vedha film review

ಮನಸ್ಸಿನಲ್ಲಿ ಮಡುಗಟ್ಟಿದ ನೋವು ಸೇಡಾಗಿ ಪರಿವರ್ತನೆಯಾಗುತ್ತದೆ. ಸೇಡಿನ ಜ್ವಾಲೆ ಅನೇಕರ ಮನೆ ಬಾಗಿಲು ತಟ್ಟಿ “ಕೆಂಪು’ ಹಾದಿ ತೋರಿಸುತ್ತದೆ. ಈ “ಜ್ವಾಲಾಮುಖೀ’ ಕೋತ ಕೋತ ಕುದಿಯುತ್ತಾ ಮುಂದೆ ಸಾಗಲು ಒಂದು ಕಾರಣವಿದೆ, ಜೊತೆಗೊಂದು ಆಶಯವೂ ಇದೆ. ಅದೇನೆಂಬುದನ್ನು “ವೇದ’ನ ಬಾಯಿಯಿಂದಲೇ ಕೇಳಿದರೆ ಮಜಾ…

“ವೇದ’ ಶಿವರಾಜ್‌ಕುಮಾರ್‌ ಅವರ 125ನೇ ಸಿನಿಮಾ. 125ನೇ ಸಿನಿಮಾ ಎಂಬುದು ಒಬ್ಬ ನಟನ ವೃತ್ತಿ ಜೀವನದಲ್ಲಿ ಮೈಲಿಗಲ್ಲು. ಆ ನಿಟ್ಟಿನಲ್ಲಿ “ವೇದ’ ಚಿತ್ರದಲ್ಲಿ ಶಿವಣ್ಣ ಆಯ್ಕೆ ಮಾಡಿಕೊಂಡಿರುವ ಒನ್‌ಲೈನ್‌ ಚೆನ್ನಾಗಿದೆ. ಹೆಣ್ಣು ಮಕ್ಕಳನ್ನು ಕೆಟ್ಟ ದೃಷ್ಟಿಯಿಂದ ನೋಡುವ ಮುನ್ನ ನೂರು ಬಾರಿ ಯೋಚಿಸಿ ಎಂಬುದು ಈ ಸಿನಿಮಾದ ಮೂಲ ಸಂದೇಶ. ಈ ಅಂಶವನ್ನಿಟ್ಟುಕೊಂಡು ನಿರ್ದೇಶಕ ಹರ್ಷ ಔಟ್‌ ಅಂಡ್‌ ಔಟ್‌ ಆ್ಯಕ್ಷನ್‌ ಕಮರ್ಷಿಯಲ್‌ ಕಟ್ಟಿಕೊಟ್ಟಿದ್ದಾರೆ. ಇದು ಹರ್ಷ ಹಾಗೂ ಶಿವರಾಜ್‌ ಕುಮಾರ್‌ ಕಾಂಬಿನೇಶನ್‌ನಲ್ಲಿ ಬರುತ್ತಿರುವ 4ನೇ ಸಿನಿಮಾ.

ಶಿವಣ್ಣ ಜೊತೆಗಿನ ಈ ಹಿಂದಿನ ಮೂರು ಸಿನಿಮಾಗಳಲ್ಲೂ ಹರ್ಷ ಒಂದು ಹೊಸ ಲೋಕ, ಹೈವೋಲ್ಟೇಜ್‌ ಪಾತ್ರಗಳು, ಆಗಾಗ ತೆರೆದುಕೊಳ್ಳುವ ಫ್ಲ್ಯಾಶ್‌ಬ್ಯಾಕ್‌ಗಳೊಂದಿಗೆ ಕಟ್ಟಿಕೊಟ್ಟಿದ್ದರು. ಈಗ “ವೇದ’ದಲ್ಲೂ ಹರ್ಷ ಅವರ ಅದೇ ಶೈಲಿ ಮುಂದುವರೆದಿದೆ. 60-80ರ ದಶಕದಲ್ಲಿ ನಡೆಯುವ ಕಥೆ ಒಂದು ಕಡೆಯಾದರೆ, ಅದಕ್ಕಾಗಿಯೇ ಸೃಷ್ಟಿಯಾದ ಹಳ್ಳಿ, ಅಲ್ಲೊಂದಿಷ್ಟು “ನಿಗಿ ನಿಗಿ ಕೆಂಡದಂತಿರುವ’ ಪಾತ್ರಗಳು, ನಾಯಕನಿಗೊಂದು ಫ್ಲ್ಯಾಶ್‌ಬ್ಯಾಕ್‌.. ಹೀಗೆ “ವೇದ’ ಸಾಗುತ್ತದೆ.

ಮೊದಲೇ ಹೇಳಿದಂತೆ ಕಥೆಯ ಆಶಯ ಚೆನ್ನಾಗಿದೆ. ಈ ಆಶಯವನ್ನು ರಗಡ್‌ ಆಗಿ ಕಟ್ಟಿಕೊಡುವ ಹಾದಿಯಲ್ಲಿ ರಕ್ತದ ಹೊಳೆಯೇ ಹರಿಯುತ್ತದೆ. ಚಿತ್ರದುದ್ದಕ್ಕೂ ಬರ್ಬರವಾದ ಕೊಲೆಗಳು ಕಾಣಸಿಗುತ್ತವೆ. ಚಿತ್ರದ ಮೊದಲರ್ಧ ಸ್ವಲ್ಪ ನಿಧಾನಗತಿಯಲ್ಲಿ ಸಾಗಿದರೆ, ಸಿನಿಮಾದ ಮುಖ್ಯ ಕಥೆ ತೆರೆದುಕೊಳ್ಳುವುದು ದ್ವಿತೀಯಾರ್ಧದಲ್ಲಿ. ಮೊದಲರ್ಧಕ್ಕಿಂತ ಹೆಚ್ಚು ದ್ವಿತೀಯಾರ್ಧದಲ್ಲಿ “ರಕ್ತದ ವಾಸನೆ’ ಮೂಗಿಗೆ ಬಡಿಯುತ್ತದೆ. ಇದರ ಜೊತೆಗೆ ಸಾಕಷ್ಟು ಟ್ವಿಸ್ಟ್‌ಗಳು ಕೂಡಾ ಸಿನಿಮಾದ ಕುತೂಹಲ ಹೆಚ್ಚಿಸುತ್ತಾ ಸಾಗುತ್ತದೆ.

ಇದನ್ನೂ ಓದಿ:ಕಂದಕಕ್ಕೆ ಉರುಳಿದ ಶಬರಿಮಲೆ ಯಾತ್ರಿಗಳಿದ್ದ ವ್ಯಾನ್: ಎಂಟು ಭಕ್ತರ ದುರ್ಮರಣ

ಇನ್ನು, ನಾಯಕನ ಮದುವೆ ಎಪಿಸೋಡ್‌ ಸೇರಿದಂಥೆ ಒಂದಷ್ಟು ದೃಶ್ಯಗಳನ್ನು ಟ್ರಿಮ್‌ ಮಾಡಿ ಚಿತ್ರದ ವೇಗ ಹೆಚ್ಚಿಸುವ ಅವಕಾಶವಿತ್ತು. ಆ್ಯಕ್ಷನ್‌ ಎಪಿಸೋಡ್‌ಗಳ ಜೊತೆ ಜೊತೆಗೆ ಫ್ಲ್ಯಾಶ್‌ಬ್ಯಾಕ್‌ ತೆರೆದುಕೊಳ್ಳುವ ಮೂಲಕ “ಕ್ಲಾಸ್‌’ ಸಿನಿಪ್ರಿಯರ ಮನಸ್ಸು ತಣಿಸುತ್ತದೆ. ವೈಲೈಂಟ್‌ ಆಗಿರುವ ನಾಯಕ ಸೈಲೈಂಟ್‌ ಆಗಿದ್ದ ದಿನಗಳನ್ನು ತೋರಿಸುವ ಮೂಲಕ “ಅಲ್ಲಲ್ಲಿ’ ಫ್ಯಾಮಿಲಿ ಆಡಿಯನ್ಸ್‌ ಅನ್ನು ಸೆಳೆಯುವ ಪ್ರಯತ್ನ ಮಾಡಿದ್ದಾರೆ ಹರ್ಷ.

ಇನ್ನು, ಇಡೀ ಸಿನಿಮಾದ ಹೈಲೈಟ್‌ ನಟ ಶಿವರಾಜ್‌ಕುಮಾರ್‌. ಅವರಿಗೆ ಚಿತ್ರದಲ್ಲಿ ಹೆಚ್ಚು ಮಾತಿಲ್ಲ. ಇಡೀ ಸಿನಿಮಾದಲ್ಲಿ ಮಾತನಾಡಿರೋದು ಅವರ ಕಣ್ಣು ಮತ್ತು ಕೈ. ಬೆಂಕಿಯುಗುಳು ಕಣ್ಣುಗಳು ಒಂದು ಕಡೆಯಾದರೆ, ದುಷ್ಟರ ಚೆಂಡಾಡುವ ಕೈ ಮತ್ತೂಂದು ಕಡೆ. ಚಿತ್ರದಲ್ಲಿ ಕೊಡಬೇಕಾದ ಸಂದೇಶವನ್ನು ಕೂಡಾ ಖಡಕ್‌ ಆಗಿಯೇ ನೀಡಿದ್ದಾರೆ. ನಾಯಕಿ ಗಾನವಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಪಾತ್ರಕ್ಕೆ ಹೊಂದಿಕೊಂಡಿದ್ದರೂ ಅವರು ಹೇಳುವ ಸಂಭಾಷಣೆಯನ್ನು ಅರ್ಥಮಾಡಿಕೊಳ್ಳಲು ಸ್ವಲ್ಪ ಸಮಯ ಹಿಡಿಯುತ್ತದೆ.

ಉಳಿದಂತೆ ಅದಿತಿ ಸಾಗರ್‌, ಶ್ವೇತಾ ಚೆಂಗಪ್ಪ, ರಾಘ ಶಿವಮೊಗ್ಗ, ಉಮಾಶ್ರೀ ಚಿತ್ರದ ಪ್ರಮುಖ ಪಾತ್ರಗಳು. ಉಳಿದಂತೆ ಹರ್ಷ ಸಿನಿಮಾಗಳಲ್ಲಿ ಕಾಣ ಸಿಗುವ ಆರಡಿ ವಿಲನ್‌ಗಳು ಅಬ್ಬರಿಸಿದ್ದಾರೆ. ಚಿತ್ರದ ಹಿನ್ನೆಲೆ ಸಂಗೀತ ಹಾಗೂ ಹಾಡುಗಳು “ವೇದ’ನ ಪ್ಲಸ್‌ ಗಳಲ್ಲಿ ಒಂದು.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ibbani tabbida ileyali movie review

Ibbani Tabbida Ileyali Review; ತಾಜಾ ಪ್ರೀತಿಯ ಭಾವ ಲಹರಿ

My Hero Movie Review

My Hero Movie Review; ಸೂಕ್ಷ್ಮ ಸಂದೇಶದ ಆಪ್ತ ಸಿನಿಮಾ

Taekwondo girl Review

Taekwondo girl Review; ಹಠದಲ್ಲಿ ಅರಳಿದ ಪ್ರತಿಭೆ

Laughing Buddha Review; ಬುದ್ಧನ ಕಾಮಿಡಿ ಪುರಾಣ

Laughing Buddha Review; ಬುದ್ಧನ ಕಾಮಿಡಿ ಪುರಾಣ

pepe movie review

Pepe Movie Review: ತೊರೆಯಲ್ಲಿ ಹರಿದ ನೆತ್ತರ ಕಥೆಯಿದು…

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.