ಊರನ್ನೇ ಬದಲಿಸಿದ ಪ್ರವೇಶ ! 


Team Udayavani, Mar 28, 2019, 12:56 PM IST

28-March-8
ಒಂದು ಹಳ್ಳಿ. ಅಲ್ಲೊಂದು ಶಾಂತಿ ಸಾಮರಸ್ಯದ ಜೀವನ. ಜಾತಿ- ಮತ ಧರ್ಮದ ಪರಿವೆಯೇ ಇಲ್ಲದೆ ಬದುಕುವ ಜನರು. ಆಧುನಿಕ ಸ್ಪರ್ಶದ ಹೊರಜಗತ್ತಿನಿಂದ ದೂರ ನಿಂತ ಸಮಾಜವದು. ಆದರೆ, ಅಂತಹ ಊರೇ ಜಾತಿ- ಧರ್ಮದ ಆಧಾರದಲ್ಲಿ ಯಾರೂ ಊಹಿಸದ ಹಾಗೆ ಬದಲಾಗಿ ಬಿಡುತ್ತದೆ. ಯಾಕೆ ಹೀಗೆ… ಎಂದು ಯೋಚಿಸುವ ಸಮಯದಲ್ಲಿ ಊರಿನ ಚಿತ್ರಣವೇ ಅದಲು- ಬದಲು. ಯಾಕೆಂದರೆ ಅನ್ಯೋನ್ಯ ಬದುಕಿಗೆ ಅಲ್ಲಿ ಕೊಳ್ಳಿ ಏಟು ಬಿದ್ದಾಗಿರುತ್ತದೆ.
ಅಂದಹಾಗೆ, ಇನ್ನೇನು ಕೆಲವೇ ದಿನಗಳ ಅಂತರದಲ್ಲಿ ಅಂದರೆ ಹೆಚ್ಚು ಕಡಿಮೆ ಆಗಸ್ಟ್‌ ವೇಳೆಗೆ ತೆರೆ ಕಾಣಲಿರುವ ಪ್ರವೇಶ ಸಿನೆಮಾದ ಒನ್‌ಲೈನ್‌ ಸಬೆjಕ್ಟ್ ಇದು. ಇದೇ ಕಥೆಯ ಜತೆಗೆ ಸಾಗಿದ ಪ್ರವೇಶದ ಕಥಾನಕ ಅತ್ಯಂತ ಸುಮಧುರ ಹಾಗೂ ಭಯಾನಕ! ವಿಶೇಷವೆಂದರೆ ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿರುವ ಚೇತನ್‌ ಮುಂಡಾಡಿಯವರು ಮಾಡಿದ ಸಿನೆಮಾ ಇದಾಗಿರುವುದರಿಂದ ‘ಪ್ರವೇಶ’ದ ಬಗ್ಗೆ ಸಾಕಷ್ಟು ಕುತೂಹಲ ಹಾಗೂ ನಿರೀಕ್ಷೆ ಇದ್ದೇ ಇದೆ.
ಇದು ತುಳು ಸಿನೆಮಾ. ಜತೆಗೆ ಬ್ಯಾರಿ ಸಿನೆಮಾ ಕೂಡ ಹೌದು. ಅಷ್ಟು ಮಾತ್ರವಲ್ಲ; ಕುಂದಾಪುರ ಕನ್ನಡ, ಮಂಗಳೂರು ಕನ್ನಡ ಹಾಗೂ ಬೆಂಗಳೂರು ಕನ್ನಡ ಈ ಚಿತ್ರದಲ್ಲಿ ಬಳಕೆಯಾಗಿದೆ. ಹೀಗಾಗಿ ಕರ್ನಾಟಕದ ಪ್ರಾದೇಶಿಕ ಭಾಷೆಯನ್ನು ಹದವಾಗಿ ಮಿಕ್ಸ್‌ ಮಾಡಿ ರೆಡಿ ಮಾಡಿದ ಸಿನೆಮಾ. ಸಿನೆಮಾಗೆ ಚೇತನ್‌ ಅವರೇ ಕಥೆ ಬರೆದಿದ್ದು, ಅದನ್ನು ಖ್ಯಾತ ಸಿನಿ ಪತ್ರಕರ್ತ ಜೋಗಿ ಅವರು ವಿಸ್ತರಿಸಿದ್ದಾರೆ. ಹಿಂದಿನ ಪ್ರಶಸ್ತಿ ಪುರಸ್ಕೃತ ‘ಮದಿಪು’ ಚಿತ್ರದ ತಂಡವನ್ನೇ ಈ ಸಿನೆಮಾಕ್ಕೂ ಬಳಸಲಾಗಿದೆ. ವಿ. ಮನೋಹರ್‌ ಅವರ ಸಂಗೀತವಿದೆ. ನಾಯಕನಾಗಿ ಪೃಥ್ವೀ ಅಂಬರ್‌ ಮತ್ತು ನಾಯಕಿಯಾಗಿ ಬಿಂದು ರಕ್ಷಿದಿ ಅವರು ನಟಿಸುತ್ತಿದ್ದಾರೆ. ಖ್ಯಾತ ರಂಗಭೂಮಿ ನಟ ಮತ್ತು ಪಡ್ಡಾಯಿ ಚಿತ್ರದಲ್ಲಿ ನಟಿಸಿ ಗಮನ ಸೆಳೆದಿದ್ದ ಚಂದ್ರಹಾಸ್‌ ಉಳ್ಳಾಲ ಅವರು ಒಂದು ಭಿನ್ನ ಮತ್ತು ವಿಶೇಷ ಪಾತ್ರದಲ್ಲಿದ್ದಾರೆ.
ಇನ್ನೊಂದು ಸಂಗತಿಯೆಂದರೆ, ‘ಕೆಜಿಎಫ್‌’ ಸಿನೆಮಾದ ಎಡಿಟಿಂಗ್‌ ಮಾಡಿದ ಶ್ರೀಕಾಂತ್‌ ಅವರೇ ‘ಪ್ರವೇಶ’ ಸಿನೆಮಾಕ್ಕೂ ಎಡಿಟಿಂಗ್‌ ಮಾಡುತ್ತಿದ್ದಾರೆ. ಚೇತನ್‌ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ತಂದು ಕೊಟ್ಟ ‘ಮದಿಪು’ ಸಿನೆಮಾದ ಸಂಕಲನವನ್ನೂ ಅವರೇ ಮಾಡಿದ್ದರು. ಈಗ ಎರಡನೇ ತುಳು ಸಿನೆಮಾವಾಗಿ ‘ಪ್ರವೇಶ’ದ ಸಂಕಲನ ಮಾಡಲಿದ್ದಾರೆ. ಚೇತನ್‌ ಹಾಗೂ ಶ್ರೀಕಾಂತ್‌ 17 ವರ್ಷಗಳಿಂದ ಆತ್ಮೀಯ ಸ್ನೇಹಿತರು. ಇಬ್ಬರೂ ಜತೆಯಾಗಿ ಸಿನೆಮಾ ಇಂಡಸ್ಟ್ರಿಯಲ್ಲಿ ಬೆಳೆದವರು ಎಂಬುದು ಗಮನಾರ್ಹ.
ದಿನೇಶ್‌ ಇರಾ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

16

Uv Fusion: ಪೆನ್ನಿಗೊಂದು ಕಥೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.