![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 22, 2024, 6:39 PM IST
ಕೊಚ್ಚಿ: ಪೃಥ್ವಿರಾಜ್ ಸುಕುಮಾರನ್ ಅಭಿನಯದ ʼಆಡುಜೀವಿತಂʼ ಈ ವರ್ಷ ಮಾಲಿವುಡ್ ನಲ್ಲಿ ಅತೀ ಹೆಚ್ಚು ಗಳಿಕೆ ಕಂಡ ಸಿನಿಮಾಗಳಲ್ಲಿ ಒಂದು.
ಬ್ಲೆಸ್ಸಿ ನಿರ್ದೇಶನದ ನೈಜ ಕಥಾಹಂದರದ ಈ ಸಿನಿಮಾ ಇದೇ ವರ್ಷದ ಮಾ.28 ರಂದು ರಿಲೀಸ್ ಆಗಿತ್ತು. ಕೇರಳ ಮಾತ್ರವಲ್ಲದೆ ಸಿನಿಮಾಕ್ಕೆ ಇತರೆ ಕಡೆಯಿಂದಲೂ ಪ್ರಶಂಸೆ ವ್ಯಕ್ತವಾಗಿತ್ತು. 60 ದಿನಗಳ ಕಾಲ ಥಿಯೇಟರ್ ಯಶಸ್ವಿಯಾಗಿ ಪ್ರದರ್ಶನ ಕಂಡ ಬಳಿಕ ಇದೀಗ ಓಟಿಟಿ ಸ್ಟ್ರೀಮಿಂಗ್ ಗೆ ರೆಡಿಯಾಗಿದೆ.
ನಜೀಬ್ ಹೆಸರಿನ ವ್ಯಕ್ತಿ ಸೌದಿ ಅರೇಬಿಯಾಗೆ ಕೆಲಸ ಅರಸಿ ಹೋಗುತ್ತಾರೆ. ಅಲ್ಲಿ ಸಾಕಷ್ಟು ತೊಂದರೆ ಅನುಭವಿಸುತ್ತಾರೆ. ಹಲವು ವರ್ಷಗಳ ತೊಂದರೆ ಬಳಿಕ ಅವರು ದೇಶಕ್ಕೆ ಮರಳುವ ಕಥೆಯನ್ನು ಭಾವನಾತ್ಮಕವಾಗಿ ನೈಜ ರೀತಿಯಲ್ಲೇ ತೋರಿಸಲಾಗಿದೆ.
ಪೃಥ್ವಿರಾಜ್ ಅವರ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಬಾಕ್ಸ್ ಆಫೀಸ್ ನಲ್ಲಿ ಸಿನಿಮಾ 150 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದೆ.
ಇದೀಗ ಓಟಿಟಿ ಇದೇ ಮೇ.26 ರಿಂದ ಸಿನಿಮಾ ಡಿಸ್ನಿ + ಹಾಟ್ ಸ್ಟಾರ್ ನಲ್ಲಿ ಸ್ಟ್ರೀಮಿಂಗ್ ಆಗಲಿದೆ. ಮಲಯಾಳಂ, ತಮಿಳು, ಹಿಂದಿ, ತೆಲುಗು ಮತ್ತು ಕನ್ನಡದಲ್ಲಿ ಸಿನಿಮಾ ಸ್ಟ್ರೀಮ್ ಆಗಲಿದೆ ಎಂದು ʼಓಟಿಟಿ ಪ್ಲೇʼ ವರದಿ ಮಾಡಿದೆ.
ಆದರೆ ಅಧಿಕೃತವಾಗಿ ಸಿನಿಮಾ ತಂಡ ಇನ್ನಷ್ಟೇ ಈ ಬಗ್ಗೆ ಅಪ್ಡೇಟ್ ನೀಡಬೇಕಿದೆ. ಬಹುತೇಕ ಇದೇ ದಿನ ಸಿನಿಮಾ ಓಟಿಟಿಗೆ ಬರುವುದಾಗಿ ಹೇಳಲಾಗುತ್ತಿದೆ.
ಓಟಿಟಿಯಲ್ಲಿ ಸಿನಿಮಾದ ಅವಧಿ ಇನ್ನಷ್ಟು ಹೆಚ್ಚಾಗಿರಲಿದೆ ಎನ್ನಲಾಗಿದೆ. 3 ಗಂಟೆ 30 ನಿಮಿಷದ ಅವಧಿ ಇರಲಿದೆ ಎನ್ನಲಾಗಿದೆ.
ಪೃಥ್ವಿರಾಜ್ ಜೊತೆ ಸಿನಿಮಾದಲ್ಲಿ ಅಮಲಾ ಪೌಲ್, ಕೆಆರ್ ಗೋಕುಲ್ , ಜಿಮ್ಮಿ ಜೀನ್-ಲೂಯಿಸ್ ನಟಿಸಿದ್ದಾರೆ.
Bro Gowda: ನಿಶ್ಚಿತಾರ್ಥ ಮಾಡಿಕೊಂಡ ʼಲಕ್ಷ್ಮೀ ಬಾರಮ್ಮʼ ಖ್ಯಾತಿಯ ಬ್ರೋ ಗೌಡ: ಹುಡುಗಿ ಯಾರು?
Controversy: ಅಶ್ಲೀಲ ಹೇಳಿಕೆ: 2ನೇ ಬಾರಿಗೆ ರಣವೀರ್ ಅಲಹಾಬಾದಿಯಾಗೆ ಪೊಲೀಸರ ಸಮನ್ಸ್
Zee Entertainers Comedy Awards 2025: ಜೀ ಕನ್ನಡದಲ್ಲಿ ‘ಕಾಮಿಡಿ’ ಸಮಾಗಮ!
TRP: ಟಿಆರ್ಪಿಯಲ್ಲಿ ದಾಖಲೆ ಬರೆದ ʼಬಿಗ್ ಬಾಸ್ʼ ಫಿನಾಲೆ ಸಂಚಿಕೆ; ಪಡೆದ ಟಿವಿಆರ್ ಎಷ್ಟು?
Bharjari Bachelors Show: ʼಬ್ಯಾಚುಲರ್ಸ್’ ಬದುಕಿಗೆ ಬಣ್ಣ ತುಂಬಲು ಬಂದ ಕ್ರೇಜಿ ಸ್ಟಾರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.