Abdu Rozik: ನಿಶ್ಚಿತಾರ್ಥ ಬಳಿಕ ಮುರಿದು ಬಿತ್ತು ʼಬಿಗ್ ಬಾಸ್ʼ ಖ್ಯಾತಿಯ ಅಬ್ದು ವಿವಾಹ
Team Udayavani, Sep 18, 2024, 6:04 PM IST
ಮುಂಬಯಿ: ಇತ್ತೀಚೆಗೆ ನಿಶ್ಚಿತಾರ್ಥವಾಗಿದ್ದ ತಜಕಿಸ್ತಾನಿ ಗಾಯಕ, ಸೋಶಿಯಲ್ ಮೀಡಿಯಾ ಪ್ರಭಾವಿ, ಬಿಗ್ ಬಾಸ್ 16 (Bigg Boss) ಖ್ಯಾತಿಯ ಅಬ್ದು ರೋಝಿಕ್ (Abdu Rozik) ಅವರ ವಿವಾಹ ಮುರಿದು ಬಿದ್ದಿದೆ.
ಇದೇ ವರ್ಷದ ಏ.24 ರಂದು ಅಬ್ದು ರೋಝಿಕ್ ಎಮಿರಾಟಿ(ದುಬೈ) ಮೂಲದ 19 ವರ್ಷದ ಅಮೀರಾ ಅವರೊಂದಿಗೆ ಶಾರ್ಜಾದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿರುವ ಫೋಟೋವನ್ನು ಹಂಚಿಕೊಂಡಿದ್ದರು. ಜುಲೈ7ರಂದು ತಾವು ವಿವಾಹವಾಗುವುದಾಗಿ ಘೋಷಿಸಿದ್ದರು.
“ಜೀವನದಲ್ಲಿ ನಾನು ಕೂಡ ಪ್ರೀತಿಯನ್ನು ಪಡೆಯುವ ಅದೃಷ್ಟಶಾಲಿ ಆಗುತ್ತೇನೆ ಎಂದು ಯಾವತ್ತೂ ಊಹಿಸಿರಲಿಲ್ಲ. ಜುಲೈ 7 ರ ದಿನಾಂಕವನ್ನು ನೆನಪು ಇಟ್ಟುಕೊಳ್ಳಿ” ಎಂದು ಅಬ್ದು ಹೇಳಿದ್ದರು.
ಆದರೆ ಇದೀಗ ತಮ್ಮ ಮದುವೆ ರದ್ದಾಗಿದ ಎಂದು ಅಬ್ದು ಹೇಳಿದ್ದಾರೆ. ಇ ಟೈಮ್ಸ್ ಜೊತೆ ಮಾತನಾಡಿರುವ ಅವರು, “ನಾನು ನನ್ನ ಮದುವೆಯನ್ನು ರದ್ದುಗೊಳಿಸಿದ್ದೇನೆ ಎಂದು ಘೋಷಿಸಲು ನನಗೆ ದುಃಖವಾಗಿದೆ. ನಿಶ್ಚಿತಾರ್ಥದ ಬಳಿಕ ನಮ್ಮಿಬ್ಬರ ನಡುವೆ ಕೆಲವು ಸಾಂಸ್ಕೃತಿಕ ವ್ಯತ್ಯಾಸಗಳಿರುವುದು ಸ್ಪಷ್ಟವಾಯಿತು. ಆ ಕಾರಣದಿಂದ ಈ ನಿರ್ಧಾರಕ್ಕೆ ಬರಲಾಗಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ನಾನು ನನ್ನ ದೈನಂದಿನ ಜೀವನದಲ್ಲಿ ಅನೇಕ ಸವಾಲುಗಳನ್ನು ಹೊಂದಿದ್ದೇನೆ. ಅದನ್ನು ನಿಭಾಯಿಸಲು ಸಮರ್ಥರಾಗಿರುವ ಮತ್ತು ಮಾನಸಿಕವಾಗಿ ಬೆಂಬಲಿಸುವ ಸಂಗಾತಿಯ ಅಗತ್ಯವಿದೆ” ಎಂದು ಅಬ್ದು ಹೇಳಿದ್ದಾರೆ.
“ನನ್ನ ಆರೋಗ್ಯಕ್ಕಾಗಿ ನಾನು ಎಂದೆಂದಿಗೂ ಕೃತಜ್ಞನಾಗಿದ್ದೇನೆ. ನನ್ನೊಂದಿಗಿರುವ ಸ್ನೇಹವನ್ನು ಮತ್ತು ಸಂಬಂಧವನ್ನು ನಾನು ಶಾಶ್ವತವಾಗಿ ಪಾಲಿಸುತ್ತೇನೆ. ಭವಿಷ್ಯದಲ್ಲಿ ನಾನು ಮತ್ತೆ ಪ್ರೀತಿಯನ್ನು ಕಂಡುಕೊಳ್ಳುತ್ತೇನೆ ಮತ್ತು ನಿಮ್ಮೆಲ್ಲರ ಶುಭ ಹಾರೈಕೆಗಳಿಗಾಗಿ ಆಶಿಸುತ್ತೇನೆ” ಅವರು ಹೇಳಿದ್ದಾರೆ.
ಬಿಗ್ ಬಾಸ್ 16 ನಲ್ಲಿ ಸ್ಪರ್ಧಿಯಾಗಿ ಭಾಗಿಯಾದ ಬಳಿಕ ಭಾರತದಲ್ಲಿ ಅಬ್ದು ಅಪಾರ ಅಭಿಮಾನಿಗಳ ಬಳಗವನ್ನು ಹೊಂದಿದ್ದಾರೆ. ಅವರ ಹಾಡುಗಳು ವೇಗವಾಗಿ ವೈರಲ್ ಆಗಿವೆ. ಉದ್ಯಮದಲ್ಲೂ ಅವರು ಗುರುತಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?
National Cinema Day: ಈ ದಿನ 99 ರೂ.ಗೆ ಸಿಗಲಿದೆ ಮೂವಿ ಟಿಕೆಟ್; ಎಲ್ಲೆಲ್ಲಿ ಇರಲಿದೆ ಆಫರ್
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tumbbad 2: ಪ್ರಳಯ್ ಆಯೇಗಾ.. ಹಾರಾರ್ ಥ್ರಿಲ್ಲರ್ ‘ತುಂಬಾಡ್ʼ ಸೀಕ್ವೆಲ್ ಅನೌನ್ಸ್
Jawan Movie: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ಸೂಪರ್ ಹಿಟ್ ʼಜವಾನ್ʼ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Davanagere: ಗ್ಯಾರಂಟಿ ಯೋಜನೆಗಳು ಮತ ಪಡೆಯಲೆಂದೇ ರೂಪಿಸಿರುವ ಕಾರ್ಯಕ್ರಮ: ಕೋಡಿಹಳ್ಳಿ
Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್ ಪತ್ನಿ ರಾದ್ಧಾಂತ
Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ
Leopard ಓಡಿಸಲು ಅರಣ್ಯ ಇಲಾಖೆ ಹಾರಿಸಿದ ಗುಂಡಿನಿಂದ ನಾಲ್ವರು ರೈತರಿಗೆ ಗಾಯ; ಚಿರತೆ ಸಾವು
Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.