BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?
Team Udayavani, Sep 29, 2024, 12:43 PM IST
ಬೆಂಗಳೂರು: ಬಿಗ್ ಬಾಸ್ ಕನ್ನಡ -11 (Big Boss Kannada-11) ಆರಂಭಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ.
ಈಗಾಗಲೇ ಬಿಗ್ ಬಾಸ್ ಮನೆಗೆ ಹೋಗುವ ನಾಲ್ವರ ಸ್ಪರ್ಧಿಗಳ ಹೆಸರು ಅಧಿಕೃತವಾಗಿದೆ. ಇಂದು ಸಂಜೆ (ಸೆ.29ರಂದು) ಉಳಿದ ಸ್ಪರ್ಧಿಗಳು ದೊಡ್ಮನೆ ಆಟಕ್ಕೆ ಪ್ರವೇಶ ಮಾಡಲಿದ್ದಾರೆ.
ಒಟ್ಟು 16 ಅಥವಾ 18 ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಹೋಗಲಿದ್ದಾರೆ. ಸ್ವರ್ಗ – ನರಕದ ಮನೆಗೆ ಈ ಸ್ಪರ್ಧಿಗಳು ಹೋಗಲಿದ್ದಾರೆ.
ನಾಲ್ವರು ಸ್ಪರ್ಧಿಗಳು ಯಾರು..
ಬಿಗ್ ಬಾಸ್ ಮನೆಗೆ ಹೋಗುವ ನಾಲ್ವರ ಹೆಸರನ್ನು ಈಗಾಗಲೇ ರಿವೀಲ್ ಮಾಡಲಾಗಿದೆ. ʼಸತ್ಯʼ ಧಾರಾವಾಹಿ ಖ್ಯಾತಿಯ ಗೌತಮಿ ಜಾಧವ್ (Gautami Jadhav), ಎರಡನೇ ಸ್ಪರ್ಧಿಯಾಗಿ ವಾದ – ವಿವಾದದಿಂದಲೇ ಸುದ್ದಿಯಾಗುವ ಲಾಯರ್ ಜಗದೀಶ್ (Lawyer Jagadish) ಅವರು ಬಿಗ್ ಬಾಸ್ ಮನೆಯೊಳಗೆ ಹೋಗಲಿದ್ದಾರೆ. ಇನ್ನು ಮೂರನೇ ಸ್ಪರ್ಧಿಯಾಗಿ ಹಿಂದೂ ಫೈಯರ್ ಬ್ರ್ಯಾಂಡ್ ಖ್ಯಾತಿಯ ಭಾಷಣಗಾರ್ತಿ ಚೈತ್ರಾ ಕುಂದಾಪುರ (Chaitra Kundapura) ಅವರು ಹೋಗುವುದು ಅಧಿಕೃತವಾಗಿದೆ. ಇದರ ಜತೆ ಉತ್ತರ ಕರ್ನಾಟಕ ಮೂಲದ ‘ಗೋಲ್ಡ್ ಸುರೇಶ್’ ಕೂಡ ದೊಡ್ಮನೆಗೆ ಹೋಗಲಿದ್ದಾರೆ.
ಉಳಿದ ಸ್ಪರ್ಧಿಗಳು ಇವರೇನಾ..?
ನಾಲ್ವರ ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಿದ ಬಳಿಕ ಅವರನ್ನು ಸ್ವರ್ಗ ಅಥವಾ ನರಕಕ್ಕೆ ಕಳುಹಿಸುವ ನಿರ್ಧಾರವನ್ನು ಪ್ರೇಕ್ಷಕರಿಗೆ ಬಿಡಲಾಗಿದೆ.
ಇನ್ನು ಉಳಿದವರು ಯಾರು ಎನ್ನುವ ಬಗ್ಗೆ ಕುತೂಹಲ ಹೆಚ್ಚಾಗಿದ್ದು, ಕೆಲ ಹೆಸರುಗಳು ಹರಿದಾಡುತ್ತಿದೆ. ಇದರಲ್ಲಿ ಕಿರುತೆರೆ ನಟ – ನಟಿ, ಯೂಟ್ಯೂಬ್ ಸ್ಟಾರ್ಸ್ ಹಾಗೂ ರೀಲ್ಸ್ ಖ್ಯಾತಿಯ ವ್ಯಕ್ತಿಗಳು ಇರಲಿದ್ದಾರೆ ಎನ್ನಲಾಗಿದೆ.
ಕಿರುತೆರೆ ನಟ ಶಿಶಿರ್ ಶಾಸ್ತ್ರಿ, ನಟಿ ಅನುಷಾ ರೈ, ಮಾನಸ ಸಂತು (ತುಕಾಲಿ ಸಂತು ಪತ್ನಿ), ನಟಿ ಮೋಕ್ಷಿತಾ ಪೈ, ಧರ್ಮ ಕೀರ್ತಿರಾಜ್, ಭವ್ಯಾ ಗೌಡ, ನಟಿ ಯಮುನಾ, ನಟ ಶಶಿರಾಜ್, ನಟ ರಂಜಿತ್ ಕುಮಾರ್, ಯೂಟ್ಯೂಬರ್ ಧನರಾಜ್, ಐಶ್ವರ್ಯ ಸಿಂಧೋಗಿ, ಹುಲಿ ಕಾರ್ತಿಕ್ ಕಾಣಿಸಿಕೊಳ್ಳುವುದು ಅಧಿಕೃತ ಎಂದು ಹೇಳಲಾಗುತ್ತಿದೆ.
ಗ್ರ್ಯಾಂಡ್ ಓಪನಿಂಗ್: ಇಂದು ಸಂಜೆ 6 ಗಂಟೆಗೆ ಬಿಗ್ ಬಾಸ್ ಸೀಸನ್ -11 ಅದ್ಧೂರಿಯಾಗಿ ಓಪನಿಂಗ್ ಆಗಲಿದೆ. ಕಿಚ್ಚ ಸುದೀಪ್ (Kiccha Sudeep) ‘ಮ್ಯಾಕ್ಸ್’ ಹಾಡಿನೊಂದಿಗೆ ವೇದಿಕೆಗೆ ಎಂಟ್ರಿ ಆಗಲಿದ್ದಾರೆ. ಕಲರ್ ಫುಲ್ ನೃತ್ಯ ಕಾರ್ಯಕ್ರಮಗಳ ಮೂಲಕ ಒಬ್ಬೊಬ್ಬರೇ ಸ್ಪರ್ಧಿಗಳನ್ನು ಕಿಚ್ಚ ವೆಲ್ ಕಂ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hangyo Ice Cream: ಬಿಗ್ಬಾಸ್ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್ಕ್ರೀಂ!
BBK-11: ಬಿಗ್ ಬಾಸ್ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್ ಮ್ಯಾನ್ʼ?
BBK11: ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ʼಫೈರ್ ಬ್ರ್ಯಾಂಡ್ʼ ಎಂಟ್ರಿ
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್ ಆರೋಪ
Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ ಸಂಸದ ಯದುವೀರ್ ಭೇಟಿ
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ
MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ
Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.