BBK11: ಬಿಗ್ ಬಾಸ್ ಮನೆಗೆ ಬಂದು ಧಿಕ್ಕಾರ ಹಾಕಿದ ಜನಸಾಮಾನ್ಯರು..! ಅಂಥದ್ದೇನಾಯಿತು?
Team Udayavani, Oct 25, 2024, 9:29 AM IST
ಬೆಂಗಳೂರು: ಬಿಗ್ ಬಾಸ್(Bigg Boss Kannada-11) ಕಾರ್ಯಕ್ರಮದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಜನ ಸಾಮಾನ್ಯರು ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ.
ಈ ವಾರ ದೊಡ್ಮನೆಯಲ್ಲಿ ಸ್ಪರ್ಧಿಗಳು ರಾಜಕೀಯ ಪಕ್ಷಗಳಾಗಿ ರೂಪುಗೊಂಡಿದ್ದಾರೆ. ಪ್ರಾಮಾಣಿಕ, ಸಮರ್ಥರ ನ್ಯಾಯವಾದಿ ಪಕ್ಷ ಹಾಗೂ ಧರ್ಮಪರ ಸ್ನೇನಾ ಪಕ್ಷ ಎಂದು ಎರಡು ಪಕ್ಷಗಳನ್ನು ರಚನೆ ಮಾಡಲಾಗಿದೆ.
ಒಂದು ಪಕ್ಷದ ಅಧ್ಯಕರಾಗಿ ಐಶ್ವರ್ಯಾ ಹಾಗೂ ಇನ್ನೊಂದು ಪಕ್ಷದ ಅಧ್ಯಕರಾಗಿ ತಿವಿಕ್ರಮ್ ಅವರು ಆಯ್ಕೆ ಆಗಿದ್ದಾರೆ. ಉಳಿದವರು ಆಯಾ ಪಕ್ಷದ ಮುಖಂಡರಾಗಿ ಕಾಣಿಸಿಕೊಂಡಿದ್ದಾರೆ.
ವಿವಿಧ ಹಂತದಲ್ಲಿ ಪೋಸ್ಟರ್ ಅಂಟಿಸುವ ಟಾಸ್ಕ್ ಗಳನ್ನು ನೀಡಲಾಗಿದೆ. ಆದರೆ ಎರಡು ಪಕ್ಷಗಳ ನಡುವಿನ ಕಿತ್ತಾಟ ತಾರರಕ್ಕೇರಿದ ಬೆನ್ನಲ್ಲೇ ಎರಡು ಹಂತದಲ್ಲಿ ಟಾಸ್ಕ್ ನಡೆದು ಫಲಿತಾಂಶ ಹೊರಬೀಳಿಲ್ಲ.
ರಾಜಕೀಯ ಅಂದ್ಮೇಲೆ ಸಮಾವೇಶಕ್ಕೆ ಜನ ಸಾಮಾನ್ಯರು ಬರಲೇಬೇಕಲ್ವಾ? ಹಾಗಾಗಿ ಬಿಗ್ ಬಾಸ್ ಮನೆಯ ರಾಜಕೀಯ ಸಮಾವೇಶಕ್ಕೆ ಜನ ಸಾಮನ್ಯರ ದಂಡೇ ಹರಿದು ಬಂದಿದೆ.
ಜನ ಸಾಮಾನ್ಯರ ದಂಡು ಬಿಗ್ ಬಾಸ್ ಮನೆಗೆ ಲಗ್ಗೆ ಇಟ್ಟಿದ್ದು ಆಯಾ ರಾಜಕೀಯ ಪಕ್ಷಗಳ ಸ್ಪರ್ಧಿಗಳಿಗೆ ಜೈಕಾರ ಹಾಕಿ ಪ್ರಶ್ನೆಗಳನ್ನು ಕೇಳಿದ್ದಾರೆ.
ತಿವಿಕ್ರಮ್ ಅವರು ಜನ ಸಾಮಾನ್ಯರನ್ನು ನೋಡಿ ತುಂಬಾ ದಿನಗಳ ಬಳಿಕ ನನ್ನ ಅಕ್ಕ, ತಾಯಿ ನೆನಪು ಆಗ್ತಾ ಇದ್ದಾರೆ ಎಂದಿದ್ದಾರೆ.
ಇನ್ನೊಂದೆಡೆ ಹನುಮಂತು ಅವರಿಗೆ ಜನ ಸಾಮಾನ್ಯರೊಬ್ಬರು ಪಂಚೆ ಎಲ್ಲಿಟ್ಟಿದ್ದೀಯಾ ಅಣ್ಣಾ ಎಂದಿದ್ದಾರೆ.
ರಾಜಕೀಯ ಅಂದ್ಮೇಲೆ ಜನರು ಬೇಡ್ವಾ? ಬಂದ್ರು ನೋಡಿ!
ಬಿಗ್ ಬಾಸ್ ಕನ್ನಡ ಸೀಸನ್ 11 | ಸೋಮ-ಶುಕ್ರ ರಾತ್ರಿ 9:30 #BiggBossKannada11 #BBK11 #HosaAdhyaya #ColorsKannada #BannaHosadaagideBandhaBigiyaagide #ಕಲರ್ಫುಲ್ಕತೆ #colorfulstory #Kicchasudeepa pic.twitter.com/3GQyWpJHke
— Colors Kannada (@ColorsKannada) October 25, 2024
ನಿಮ್ಮ ಕಣ್ಣಿನಿಂದ ಇಡೀ ಕರ್ನಾಟಕವೇ ಭಯ ಬೀಳ್ತಿದೆ ಅಂಥ ಮಾನಸ ಅವರಿಗೆ ಮತ್ತೊಬ್ಬರು ಪ್ರಶ್ನೆ ಮಾಡಿದ್ದಾರೆ.
ಇದಲ್ಲದೆ ಜನರೆಲ್ಲರೂ ಮನೆಯೊಳಗೆ ಧಿಕ್ಕಾರ ಧಿಕ್ಕಾರ ಎಂದು ಕೂಗಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.
ಇಂದು ರಾತ್ರಿ(ಅ.25ರಂದು) ಈ ಸಂಚಿಕೆ ಪ್ರಸಾರವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಬಿಗ್ ಬಾಸ್ ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್
BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು
BBK11: ಮತ್ತೆ ʼಬಿಗ್ಬಾಸ್ʼ ಕಾರ್ಯಕ್ರಮದ ವಾಹಿನಿಗೆ ಬಂದ ಲಾಯರ್ ಜಗದೀಶ್; ವೀಕ್ಷಕರು ಖುಷ್
BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ
BBK11: ಬಿಗ್ ಮನೆಯಲ್ಲಿ ಜೋರಾಯಿತು ರಾಜಕೀಯ:ಪೋಸ್ಟರ್ ಅಂಟಿಸುವ ವಿಚಾರದಲ್ಲಿ ತಾರರಕ್ಕೇರಿದ ಜಗಳ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.