BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…
Team Udayavani, Oct 26, 2024, 9:43 AM IST
ಬೆಂಗಳೂರು: ಬಿಗ್ ಬಾಸ್ ಕನ್ನಡ (Bigg Boss Kannada-11)ದಲ್ಲಿ ಈ ವಾರ ಕಿಚ್ಚ ಸುದೀಪ್ ಅವರ ವೀಕೆಂಡ್ ಎಪಿಸೋಡ್ ಶೂಟಿಂಗ್ ಇರಲ್ಲ. ಅವರ ಬದಲಾಗಿ ಬೇರೆಯವರು ಶೋ ನಡೆಸಿಕೊಡಲಿದ್ದಾರೆ.
ತಾಯಿಯ ನಿಧನದಿಂದ ನೊಂದಿರುವ ಕಿಚ್ಚ ಸುದೀಪ್ (Kiccha Sudeep) ಈ ವಾರ ಬಿಗ್ ಬಾಸ್ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಅವರ ಜಾಗಕ್ಕೆ ಈ ವಾರ ಬೇರೆ ಕಲಾವಿದರು ಶೋ ನಡೆಸಿಕೊಡಲಿದ್ದಾರೆ.
ಈಗಾಗಲೇ ಕಲರ್ಸ್ ಕನ್ನಡ ಶನಿವಾರದ ಪ್ರೋಮೊ ರಿಲೀಸ್ ಮಾಡಿದ್ದು, ಖ್ಯಾತ ನಿರ್ದೇಶಕ ಯೋಗರಾಜ್ ಭಟ್ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಸ್ಪರ್ಧಿಗಳ ಜತೆ ಬೆರೆತುಕೊಂಡು ಅನೇಕ ಪ್ರಶ್ನೆಗಳನ್ನು ಕೇಳಿದ್ದಾರೆ.
ಸ್ಪರ್ಧಿಗಳನ್ನು ನಗಿಸುತ್ತಾ, ಅವರ ವ್ಯಕ್ತಿತ್ವದ ಬಗ್ಗೆ ಭಟ್ರು ಮಾತನಾಡಿರುವುದನ್ನು ಪ್ರೋಮೊದಲ್ಲಿ ತೋರಿಸಲಾಗಿದೆ.
ನಾಳೆ ಯಾರು ನಡೆಸಿಕೊಡ್ತಾರೆ ಶೋ..?
ಪ್ರತಿ ಸಂಡೆ ನಡೆಯುತ್ತಿದ್ದ ಸೂಪರ್ ಸಂಡೇ ವಿತ್ ಕಿಚ್ಚ ಕೂಡ ಈ ವಾರ ಇರುವುದಿಲ್ಲ. ಭಾನುವಾರದ ಕಾರ್ಯಕ್ರಮವನ್ನು ಖ್ಯಾತ ನಿರೂಪಕ ಸೃಜನ್ ಲೋಕೇಶ್ ಅವರು ನಡೆಸಿಕೊಡಲಿದ್ದಾರೆ ಎನ್ನಲಾಗಿದೆ.
ಸೃಜನ್ ಅವರಿಗೆ ಬಿಗ್ ಬಾಸ್ ಮನೆಯ ಆಟ ಹೇಗಿರುತ್ತದೆ ಎನ್ನುವುದು ಗೊತ್ತಿದೆ. ಸೃಜನ್ ಲೋಕೇಶ್ ಈ ಹಿಂದೆ ಸ್ಪರ್ಧಿಯಾಗಿ ಮನೆಯೊಳಗೆ ಎಂಟ್ರಿ ಕೊಟ್ಟಿದ್ದರು.
ದೊಡ್ಮನೆ ಬೊಂಬೆಗಳಿಗೆ ಕೀ ಕೊಡಲು ಬಂದ್ರು ಯೋಗರಾಜ್ ಭಟ್!
ಬಿಗ್ ಬಾಸ್ ಕನ್ನಡ ಸೀಸನ್ 11 | ಇಂದು ರಾತ್ರಿ 9:00#BiggBossKannada11 #BBK11 #HosaAdhyaya #ColorsKannada #BannaHosadaagideBandhaBigiyaagide #ಕಲರ್ಫುಲ್ಕತೆ #colorfulstory #Kicchasudeepa pic.twitter.com/pbH1Sahrxi
— Colors Kannada (@ColorsKannada) October 26, 2024
ಭವ್ಯಾ, ಚೈತ್ರ, ಗೌತಮಿ, ಹಂಸ, ಮಂಜು, ಮಾನಸ, ಮೋಕ್ಷಿತಾ, ಶಿಶಿರ್ ಮತ್ತು ಗೋಲ್ಡ್ ಸುರೇಶ್ ಇವರುಗಳ ಪೈಕಿ ಇದೇ ವೇಳೆ ಮನೆಯಿಂದ ಆಚೆ ಬರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಮಂಜು ಬಿಗ್ ಬಾಸ್ ಮನೆಯ ಫಿಟ್ಟಿಂಗ್ ಮಾಸ್ಟರ್ ಎಂದ ಚೈತ್ರಾ
BBK11: ಬಿಗ್ ಬಾಸ್ ಮನೆಗೆ ಬಂದು ಧಿಕ್ಕಾರ ಹಾಕಿದ ಜನಸಾಮಾನ್ಯರು..! ಅಂಥದ್ದೇನಾಯಿತು?
BBK11: ಬಿಗ್ ಬಾಸ್ ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್
Kutumba Awards-2024: ವೀಕೆಂಡ್ ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ
BBK11: ಮಹಿಳಾ ಸ್ಪರ್ಧಿಯ ಹೊಟ್ಟೆಗೆ ಏಟು; ಉಗ್ರಂ ಮಂಜುರನ್ನು ಆಚೆ ಕರೆಸಿ ಎಂದ ನೆಟ್ಟಿಗರು
MUST WATCH
ಹೊಸ ಸೇರ್ಪಡೆ
Loksabha: ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ಶೆಟ್ಟರ್ ನೇಮಕ
Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ
Bengaluru: 1.5 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ
Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…
Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.